ಸರಕಾರದ ವಿರುದ್ಧ ತೋಂಟದ ಸಿದ್ಧರಾಮ ಶ್ರೀಗಳ ಅಸಮಾಧಾನ
Shivanand
January 8, 2021
featured, General News
958 Views
ಲಿಂಗಾಯತ ಪ್ರಗತಿಪರ ಚಿಂತನೆಯ ಧರ್ಮವಾಗಿದೆ
ಗದಗ : ಮಹಾಮಾನವತಾವಾದಿ ಪ್ರಗತಿಪರ ಚಿಂತಕ, ವಿಶ್ವಗುರು ಬಸವಣ್ಣನವರ ಕಾರ್ಯಕ್ಷೇತ್ರವಾಗಿದ್ದ ಬಸವಕಲ್ಯಾಣದಲ್ಲಿ ನೂತನ ಅನುಭವ ಮಂಟಪ ನಿರ್ಮಿಸಲು ಮುಖ್ಯಮಂತ್ರಿ ಶಿಲಾನ್ಯಾಸ ನೆರವೇರಿಸಿರುವುದು ಸಂತೋಷದ ಸಂಗತಿ. ಆದರೆ ಆ ನೆಪದಲ್ಲಿ ಸರ್ಕಾರ ದಿನಪತ್ರಿಕೆಗಳಿಗೆ ನೀಡಿದ ಜಾಹಿರಾತಿನಲ್ಲಿ ‘ಸನಾತನ ಪ್ರಗತಿಪರ ಚಿಂತನೆಯ ಮರುಸೃಷ್ಟಿ’ ಎಂಬ ಮೊದಲ ವಾಕ್ಯವೇ ಗಂಭೀರ ದೋಷದಿಂದ ಕೂಡಿದೆ ಎಂದು ಗದಗ-ಡಂಬಳ ಜಗದ್ಗುರು. ಡಾ.ತೋಂಟದ ಸಿದ್ದರಾಮ ಶ್ರೀ ಬೇಸರ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಶ್ರೀಗಳು, ಸನಾತನಕ್ಕೂ ಪ್ರಗತಿಪರ ಚಿಂತನೆಗೂ ಎಣ್ಣೆ – ಶೀಗೇಕಾಯಿ ಸಂಬಂಧ . ಅವೆರಡೂ ಒಂದೆಡೆ ಇರಲಾರವು. ಆದರೆ ಸರ್ಕಾರ ಜಾಹಿರಾತಿನ ಮೂಲಕ ಅವೆರಡನ್ನೂ ಒಂದುಗೂಡಿಸುವ ಪವಾಡ ವನ್ನೇ ಮಾಡಿದೆ. ಸನಾತನ ಮತ್ತು ಪ್ರಗತಿಪರ ಎಂಬ ಶಬ್ದಗಳನ್ನು ಒಂದುಗೂಡಿಸಬಹುದೆ ಹೊರತು ಸನಾತನ ಮತ್ತು ಪ್ರಗತಿಪರ ವಿಚಾರಧಾರೆಗಳನ್ನು ಒಂದುಗೂಡಿಸಲಾಗದು.
ಹನ್ನೆರಡನೆಯ ಶತಮಾನದಲ್ಲಿ ಸನಾತನದ ವರ್ಣವ್ಯ ವಸ್ಥೆ, ಜಾತಿಭೇದ, ಲಿಂಗಭೇದಗಳನ್ನು ವಿರೋಧಿಸಿ ಪ್ರಗತಿಪರ ಚಿಂತನೆಗೆ ಹೆಸರಾದ ಲಿಂಗಾಯತ ಧರ್ಮವನ್ನು ಸ್ಥಾಪಿಸಿರುವು ದಕ್ಕೆ ಇತಿಹಾಸ ಸಾಕ್ಷಿಯಾಗಿದೆ ಎಂದು ತಿಳಿಸಿದ್ದಾರೆ. ಆದರೆ ಪ್ರಗತಿಪರ ವಿಚಾರಧಾರೆಯ ಪ್ರತಿಪಾದಕ ಬಸವಣ್ಣನವರನ್ನು ಸನಾತನ ( ಧರ್ಮ ) ಪ್ರತಿಪಾದಕರೆಂಬಂತೆ ಬಿಂಬಿಸಿ ಅವರಿಗೆ ಹಿಂದುತ್ವವನ್ನು
ಆರೋಪಿಸಿರುವುದು ಬಸವಣ್ಣನವರಿಗೆ, ಬಸವತತ್ವಾದರ್ಶಗಳಿಗೆ ಮಾಡಿದ ಅಪಚಾರ. ಜಾಹಿರಾತಿನಲ್ಲಿ ಸನಾತನ ಶಬ್ದವನ್ನು ಪ್ರಯೋಗಿಸುವ ಮೂಲಕ ಲಿಂಗಾಯತವೆಂಬ ಸ್ವತಂತ್ರ ಧರ್ಮದ ಅಸ್ತಿತ್ವವನ್ನು ಅಲ್ಲಗಳೆಯುವ ಹಾಗೂ ಲಿಂಗಾಯತರನ್ನು ಹಿಂದೂಗಳನ್ನಾಗಿಸುವತನ್ನ ಕಾರ್ಯಸೂಚಿಯನ್ನು ಸರ್ಕಾರವು ಪ್ರಕಟಿಸಿದೆ. ಲಿಂಗಾಯತ ಧರ್ಮವು ಪ್ರಗತಿಪರ ಚಿಂತನೆಯ ಧರ್ಮವಾಗಿದೆ. ಅನುಭವ ಮಂಟಪವೆಂಬುದು ಈ ಧರ್ಮದ ಪ್ರಗತಿಪರ ಚಿಂತನೆಗಳನ್ನು ನಡೆಸುತ್ತಿದ್ದ ಕಮ್ಮಟವಾಗಿತ್ತು ಎಂದು ಹೇಳಿದ್ದಾರೆ. ನೂತನವಾಗಿ ನಿರ್ಮಿಸಲಾಗುವ ಅನುಭವ ಮಂಟ ಪದಲ್ಲಿಯೂ ಪ್ರಗತಿಪರ ಚಿಂತನೆಗಳು ನಡೆಯಬೇಕೇ ಹೊರ ತು ಲಿಂಗಭೇದ , ಜಾತಿಭೇದ , ವರ್ಣಭೇದಗಳನ್ನು ಪ್ರತಿಪಾ ದಿಸುವ ಸನಾತನದ ಮರುಸೃಷ್ಟಿಯಾಗಬಾರದು ಎಂಬುದು ನಾಡಿನ ಸಮಸ್ತ ಪ್ರಗತಿಪರ ಚಿಂತಕರ ಅಭಿಪ್ರಾಯವಾಗಿದೆ. ಲಿಂಗಾಯತ ಧರ್ಮ ಸನಾತನವಾದುದಲ್ಲ , ಅದು 12 ನೇಶತಮಾನದಲ್ಲಿ ಉದಯಿಸಿದ ಪ್ರಗತಿಪರ ಚಿಂತನೆಯ ಧರ್ಮವಾಗಿದೆ. ಅದರ ಜನ್ಮಸ್ಥಳ ಆಗಿನ ಅನುಭವ ಮಂಟಪ. ನೂತನವಾಗಿ ನಿರ್ಮಾಣಗೊಳ್ಳುವ ಅನುಭವ ಮಂಟಪವನ್ನು ಪ್ರಗತಿಪರ ಚಿಂತನೆಗೆ ಮಾತ್ರ ಮೀಸಲಾಗಿ ರಿಸಬೇಕು ಎಂದು ಶ್ರೀಗಳು ಆಶಯ ವ್ಯಕ್ತಪಡಿಸಿದ್ದಾರೆ.
Check Also
‘ಸನಾತನ ಚಿಂತನೆಗಳ ಮರು ಸೃಷ್ಟಿ’ ಶೀರ್ಷಿಕೆಗೆ ಆಕ್ಷೇಪ ಬೀದರ್: ನೂತನ ಅನುಭವ ಮಂಟಪ ಭೂಮಿ ಪೂಜೆ ಕಾರ್ಯಕ್ರಮ ಕುರಿತು …
ಹುಬ್ಬಳ್ಳಿ: ಬಸವಕಲ್ಯಾಣದಲ್ಲಿ ನಿರ್ಮಿಸುತ್ತಿರುವ ಅನುಭವ ಮಂಟಪದ ಭೂಮಿಪೂಜೆ ಕಾರ್ಯಕ್ರಮದ ಕುರಿತು ಜ .6 ರಂದು ನೀಡಿದ ಜಾಹೀರಾತಿನಲ್ಲಿ ‘ಸನಾತನ …
ಭಾರತದ ಚರಿತ್ರೆಯಲ್ಲಿ ಶರಣ ಚಳುವಳಿಗೆ ಒಂದು ವಿಶಿಷ್ಟವಾದ ಸ್ಥಾನ ಸಿಗುತ್ತದೆ. ಬೌದ್ಧ ಧರ್ಮದ ನಂತರ ಭಾರತದಲ್ಲಿ ಮತ್ತೊಮ್ಮೆ ಸಮಾಜೋಧಾರ್ಮಿಕ ಕ್ರಾಂತಿ …
ಲೇಖನ: ಡಾ. ತೋಂಟದ ಸಿದ್ಧರಾಮ ಮಹಾಸ್ವಾಮಿಗಳು ತೋಂಟದಾರ್ಯ ಸಂಸ್ಥಾನ ಮಠ ಗದಗ ಬೆಳಗಾವಿ: ಕರ್ನಾಟಕವನ್ನು ಶೈಕ್ಷಣಿಕವಾಗಿ ಹಾಗು ಸಾಂಸ್ಕೃತಿಕವಾಗಿ …
ಬಸವಕಲ್ಯಾಣ: ರಾಜ್ಯ ಸರ್ಕಾರ ಪತ್ರಿಕೆಗಳಿಗೆ ನೀಡಿರುವ ಜಾಹೀರಾತಿನಲ್ಲಿ ಸನಾತನ ಪ್ರಗತಿಪರ ಚಿಂತನೆಯ ಮರುಸೃಷ್ಟಿ ನೂತನ ಅನುಭವ ಮಂಟಪ ನಿರ್ಮಾಣ’ …
ಕೆಲವು ಅಥವಾ ಹಲವು ಅರೆಬೆಂದ ವಿಚಾರವಾದಿಗಳು ಅನುಭವ ಮಂಟಪದ ನಿರ್ಮಾಣದ ಕುರಿತಾಗಿ ಆರ್ಥಿಕ ಸ್ಥಿತಿ ಮತ್ತು ಇತರೆ ಕಾರಣಗಳಿಂದ ೫೦೦ …
ಹನ್ನೆರಡನೆಯ ಶತಮಾನದ ಬಸವಾದಿ ಶರಣರ ಸಮಕಾಲೀನ ಶಿವಶರಣೆ ಕೇತಲದೇವಿಯು ಶರಣ ಕುಂಬಾರ ಗುಂಡಯ್ಯನವರ ಧರ್ಮಪತ್ನಿ. ಕುಂಬಾರ ಗುಂಡಯ್ಯ ಮತ್ತು …
ಬೀದರ್: ವಿಶ್ವರು ಬಸವಣ್ಣನವರು 12ನೇ ಶತಮಾನದಲ್ಲಿ ಜಗತ್ತಿನ ಮುಟ್ಟು ಮೊದಲು ಪ್ರಜಾಪ್ರಭುತ್ವದ ಮಾದರಿಯ ಅನುಭವ ಮಂಟಪವನ್ನು ಸ್ಥಾಪಿಸಿದರು. ಅನುಭವ ಮಂಟಪದಲ್ಲಿ …
ಬೆಳಗಾವಿ: ಬೆಳಗಾವಿ ಲಿಂಗಾಯತ ಸಂಘಟನೆಯ ಸಕ್ರಿಯ ಕಾರ್ಯಕರ್ತ, ಭಾರತೀಯ ಜನತಾ ಪಾರ್ಟಿಯ ಜಿಲ್ಲಾ ಗ್ರಾಮೀಣ ಪ್ರಧಾನ ಕಾರ್ಯದರ್ಶಿ ರಾಜು …
ಗಜೇಂದ್ರಗಡ: ನಂಬಿಕೆಗೆ ಅರ್ಹವಲ್ಲದ ಪಂಚಾಂಗ, ಜ್ಯೋತಿಷ್ಯಕ್ಕೆ ಜೋತುಬಿದ್ದು, ಮೌಢ್ಯತೆಗೆ ಒಳಗಾಗಿ ನಮ್ಮ ಬದುಕನ್ನು ಕೆಡಿಸಿಕೊಳ್ಳುವುದರ ಬದಲಾಗಿ ಧರ್ಮಗುರು ಬಸವಣ್ಣ ಹಾಗೂ …
ಲೇಖನ: ಡಾ. ಶಿವಮೂರ್ತಿ ಮುರುಘಾ ಶರಣರು ಬಾಬಾಸಾಹೇಬ್ ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದ ದಿನವನ್ನು ರಾಷ್ಟ್ರದಾದ್ಯಂತ ಕಳೆದ ತಿಂಗಳು …
ಕಲಬುರಗಿ : ಪತ್ರಕರ್ತ-ಲೇಖಕ ಶಿವರಂಜನ್ ಸತ್ಯಂಪೇಟೆ ಅವರಿಗೆ ಗುಲ್ಬರ್ಗ ವಿಶ್ವವಿದ್ಯಾಲಯ ಪಿಎಚ್.ಡಿ ಪದವಿ ಪ್ರಧಾನ ಮಾಡಿದೆ. ಗುಲ್ಬರ್ಗ ವಿವಿ …
೧) ಬಸವ ಪರಂಪರೆ, ಶರಣ ಪರಂಪರೆ, ಲಿಂಗಾಯತ ಧರ್ಮವು 12ನೇ ಶತಮಾನದಲ್ಲಿ ಅರಿವೇ ಗುರು, ಆಚಾರವೇ ಲಿಂಗ, ಅನುಭಾವವೇ …
ರಾಮದುರ್ಗ: ಸುವರ್ಣ ಚಾನೆಲ್ ನವರು ಎಡೆಯೂರ ಸಿದ್ಧಲಿಂಗ ಶ್ರೀಗಳ ಬಗ್ಗೆ ಧಾರಾವಾಹಿಯನ್ನು ಪ್ರಸಾರ ಮಾಡುತ್ತಿರುವುದು ಹೆಮ್ಮೆಯ ವಿಷಯವಾಗಿದೆ. ಅಭಿನವ ಅಲ್ಲಮನೆಂದೇ …
ಬಾಗಲಕೋಟೆ: ಇಳಕಲ್ನ ಚಿತ್ತರಗಿ ವಿಜಯ ಮಹಾಂತೇಶ ಸಂಸ್ಥಾನ ಮಠದ ಗುರುಮಹಾಂತ ಶ್ರೀಗಳಿಗೆ ಉಪಮುಖ್ಯ ಮಂತ್ರಿ ಗೋವಿಂದ ಕಾರಜೋಳ ಶನಿವಾರ …