ಸುದೈವಿ ಮಕ್ಕಳ ಭಾಗ್ಯ
nagaraj
August 27, 2020
featured, General News, ವಿಶೇಷ ಅಂಕಣ, ಶಿವಯೋಗಿಗಳು
ಲಿಂಗಾಯತ ಕ್ರಾಂತಿ: ಪೂಜ್ಯ ಶ್ರೀ ಡಾ. ಬಸವಲಿಂಗ ಪಟ್ಟದ್ದೇವರ 70ನೇ ಹುಟ್ಟುಹಬ್ಬದ ಪ್ರಯುಕ್ತ ಭಕ್ತಿಯ ಶುಭಾಶಯಗಳು.
ಪೂಜ್ಯ ಶ್ರೀ ಡಾ. ಬಸವಲಿಂಗ ಪಟ್ಟದ್ದೇವರು ಬಸವಬಳ್ಳಿಯ ಚೇತನಕ್ಕೆ ಚೈತನ್ಯವಾಗಿ ಸರ್ವ ಕ್ಷೇತ್ರಗಳಲ್ಲೂ ಆಶಾದಾಯಕ ಧನಾತ್ಮಕ ಬೆಳವಣಿಗೆಯನ್ನು ಪೂಜ್ಯರು ಕಂಡು ಕೊಂಡರು. ಬಡತನದ ಬೇಗೆಯಲ್ಲಿ ಬೆಂದರೂ ಬದುಕಿನ ಛಲ ಬಿಡದೆ ಜ್ಞಾನವನ್ನು ಪಡೆಯುವ ಹಾದಿಯಲ್ಲಿ ನಿಜವಾದ ಸುಜ್ಞಾನವನ್ನು ಪಡೆದರು. ಸಾಮಾನ್ಯ ವಿದ್ಯಾರ್ಥಿಯಾಗಿ ಮಠದೊಳಗೆ ಪ್ರವೇಶ ಪಡೆದು ಆ ಮಠದ ಪೀಠಾಧಿಪತಿಯಾದರು. ಸರಿಯಾದ ಮಾರ್ಗ ದರ್ಶನವಿಲ್ಲದೆ ಜಾತಿ, ಮತ,ಪಂಥ,ಸಂಪ್ರದಾಯ, ಹೋಮ, ಹವನ, ಯಜ್ಞಯಾಗ, ಅಭಿಷೇಕ ಎಂದು ಎಲ್ಲೆಲ್ಲೋ ಸುತ್ತುತ್ತಿರುವ ಜನರಿಗೆ ಶರಣರ ವಚನಗಳು ತಿಳಿಸಿ, ಸರಿಯಾದ ಮಾರ್ಗ ದರ್ಶನ ಮಾಡುತ್ತಾ , ಬಸವತತ್ವದ ನೆಲೆಯಲ್ಲಿ ಸತ್ಯ ಶುದ್ಧದಿಂದ ವೈಚಾರಿಕತೆಯ ನಡೆಯಿಂದ ಆದರ್ಶರಾಗಿದ್ದಾರೆ. ಪೂಜ್ಯ ಶ್ರೀಗಳು ಬರೀ ಮಠಾಧೀಶರಾಗಿ ಇರದೆ , ಚರಜಂಗಮರಾಗಿ ಶರಣರ ಮಾರ್ಗವನ್ನು ಹಿಡಿದು ಅನ್ನ ದಾಸೋಹ, ಜ್ಞಾನ ದಾಸೋಹಗಳನ್ನು ಮಠದ ಎರಡು ಕಣ್ಣುಗಳಾಗಿ ಮಾಡಿದ್ದಾರೆ. ಮಾನವ ಕುಲವೇ ತನ್ನ ಕುಟುಂಬ ಎಂದು ವಿಶ್ವ ಪ್ರಜ್ಞೆಯನ್ನು ಹೊಂದಿದ ಪೂಜ್ಯರು, ಜಾತಿ ರಹಿತ ಕಲ್ಯಾಣ ರಾಜ್ಯ ಕಟ್ಟಬೇಕೆಂಬುದು ಅವರ ಪ್ರಮುಖ ಉದ್ದೇಶವಾಗಿದೆ. ಪ್ರಜಾಪ್ರಭುತ್ವದ ವ್ಯವಸ್ಥೆಯನ್ನು ಹೊಂದಿರುವ ನಮ್ಮ ದೇಶ ಅನೇಕ ಜಟಿಲವಾದ ಸಮಸ್ಯೆಗಳನ್ನು ಎದುರಿಸುತ್ತಿದೆ. ಅದಕ್ಕಾಗಿ ಪೂಜ್ಯರು ಅಜ್ಞಾನ,ಮೌಢ್ಯತೆ, ಅಂಧಶ್ರದ್ಧೆ, ಭಯೋತ್ಪಾದನೆ, ಜಾತಿಯತೆ, ಬಡತನದಂಥ ಹತ್ತು ಹಲವಾರು ಸಮಸ್ಯೆಗಳಿಗೆ ಪೂಜ್ಯರು ಶ್ರೀಗಳು ಸ್ಪಂದಿಸುತ್ತಾರೆ.
ಬಸವ ಶಿಶುಗಳ ದಿನಾಚರಣೆ ಎಂದು ಪೂಜ್ಯ ಶ್ರೀ ಬಸವಲಿಂಗ ಪಟ್ಟದ್ದೇವರು ಪ್ರತಿ ವರ್ಷ ತಮ್ಮ ಹುಟ್ಟು ಹಬ್ಬ ಅಗಸ್ಟ್ 25 ಕ್ಕೆ ಸುದೈವಿ ಮಕ್ಕಳ (ಬಸವ ಶಿಶುಗಳ) ದಿನಾಚರಣೆಯಾಗಿ ಆಚರಿಸುತ್ತಾರೆ. ಒಬ್ಬ ಮಠಾಧೀಶರಾಗಿ ಪೂಜ್ಯರು ಅನಾಥ ಮಕ್ಕಳಿಗೆ ತಾಯಿಯಾಗಿ, ತನ್ನ ಮಮತೆಯ ಮಡಿಲಲ್ಲಿ ಪ್ರೀತಿ ವಾತ್ಸಲ್ಯಗಳಿಂದ ನೋಡಿಕೊಳ್ಳುತ್ತಾರೆ. ಅನಾಥ ಎಂದರೆ ಮಕ್ಕಳ ಮೃದು ಮನಸ್ಸಿನ ಮೇಲೆ ಪರಿಣಾಮ ಬೀರುತ್ತದೆ ಎಂಬ ಕಾಳಜಿಯಿಂದ ಬಸವ ಶಿಶುಗಳು ಎಂದು ಕರೆಯುತ್ತಾರೆ. ತಮ್ಮ ಜನ್ಮ ದಿನವನ್ನು ಸುದೈವಿ ಮಕ್ಕಳ ದಿನಾಚರಣೆಯಾಗಿ ಆಚರಿಸುತ್ತಿರುವ ಪೂಜ್ಯ ಶ್ರೀ ಬಸವಲಿಂಗ ಪಟ್ಟದ್ದೇವರ ಮಹತ್ವದ ಕಾರ್ಯಕ್ಕೆ ಹೃತ್ಪೂರ್ವಕ ಭಕ್ತಿಯ ಅಭಿನಂದನೆಗಳು.
–ಜಯಶ್ರೀ ಸುಕಾಲೆ ಬೀದರ್
Check Also
ಲೇಖಕರು – ಸಂಗಮೇಶ ಎನ್ ಜವಾದಿ. ಪತ್ರಕರ್ತ, ಪ್ರಗತಿಪರ ಚಿಂತಕರು. ಬೀದರ ಜಿಲ್ಲೆ. ವಿಶ್ವ ಗುರು ಬಸವಣ್ಣನವರ ನೇತೃತ್ವದಲ್ಲಿ ಅಂದು …
ಚನ್ನಮ್ಮನ ಕಿತ್ತೂರು : ಕಿತ್ತೂರು ಉತ್ಸವದ ಅಂಗವಾಗಿ ರಾಣಿ ಚನ್ನಮ್ಮ ವಿಜಯ ಜ್ಯೋತಿ ಯಾತ್ರೆಯು ಅಕ್ಟೋಬರ್ 18 ರಿಂದ ಅಕ್ಟೋಬರ್ …
ಲಿಂಗಾಯತ ಕ್ರಾಂತಿ: ಲಿಂಗಾಯತ ಧರ್ಮ ಉದಯವಾಗಿದ್ದು 12 ಶತಮಾನದ ಆರಂಭದಲ್ಲಿ ಎಂಬುವುದು ಜಗತ್ತಿನ ಶ್ರೇಷ್ಠ ತತ್ವಜ್ಞಾನಿ, ಸಮಾನತೆಯ ಪ್ರತಿಪಾಧಕ, ಲಿಂಗಬೇದವನ್ನು …
ನೇಗಿನಹಾಳ : ನಾಡಿನ ನೆಲ, ಜಲ, ಶಿಕ್ಷಣ ಹಾಗೂ ಜನಸಾಮಾನ್ಯರ ಜೀವನೋಪಾಯಕ್ಕಾಗಿ ಹತ್ತಾರು ಯೋಜನೆಗಳನ್ನು ಅನುಷ್ಠಾನಗೊಳಿಸಿ ವಿಜಯಪುರ ಜಿಲ್ಲೆಯ ಬೆಳಕಾಗಿರುವ …
ಲಿಂಗಾಯತ ಕ್ರಾಂತಿ: ಲಿಂಗಾಯತರ ಪ್ರಶ್ನಾತೀತ ನಾಯಕ, ಕರ್ನಾಟಕದ ಭವಿಷ್ಯದ ಮುಖ್ಯಮಂತ್ರಿಗಳು, ನೇರ ನಡೆ-ನುಡಿಯ ಲಿಂಗಾಯತ ಕ್ರಾಂತಿ ಪತ್ರಿಕೆಯ ಮಾರ್ಗದರ್ಶಕರಾದ ಸನ್ಮಾನ್ಯಶ್ರೀ …
ಬೆಳಗಾವಿ: ರೈತ ಚಳವಳಿಗಳಿಗಳ ಮುಂಚೂಣಿ ನಾಯಕ, ಹಸಿರು ಕ್ರಾಂತಿ ಪತ್ರಿಕೆಯ ಸಂಸ್ಥಾಪಕ ಸಂಪಾದಕ ಕಲ್ಯಾಣರಾವ್ ಗುರಬಸಪ್ಪ ಮುಚಳಂಬಿಯವರು ಅವರು ಬೆಳಗಾವಿ …
ಬೈಲೂರು: ದೆಹಲಿಯಲ್ಲಿ ನೂತನವಾಗಿ ನಿರ್ಮಿಸುತ್ತಿರುವ ಸಂಸತ್ ಭವನಕ್ಕೆ “ಅನುಭವ ಮಂಟಪ” ಎಂದು ನಾಮಕರಣ ಮಾಡಬೇಕು ಎಂದು ಬೈಲೂರು ನಿಷ್ಕಲ ಮಂಟಪದ …
ಲಿಂಗಾಯತ ಕ್ರಾಂತಿ: ಉತ್ತರಕನ್ನಡ ಜಿಲ್ಲೆ ಹಳಿಯಾಳದ ಅಂಗಡಿ ಕುಟುಂಬದ ನೂತನ ಮನೆ “ಶಿವಬಸವ ಗುರುಕಾರುಣ್ಯ” ದ ಗುರು ಪ್ರವೇಶವು ಅಕ್ಟೋಬರ್ …
ಭಾರತೀಯ ಭಕ್ತಿ ಸಾಹಿತ್ಯದ ಚರಿತ್ರೆಯಲ್ಲಿ ಅಕ್ಕಮಹಾದೇವಿ ಒಬ್ಬ ವಿಶಿಷ್ಟ ಸಾಧಕಿ, ಯೋಗಿಣಿಯಾಗಿ ಕಂಡುಬರುತ್ತಾಳೆ. ಆಕೆಯ ಪ್ರೀತಿ ಪ್ರೇಮ ವಿನೂತನ ವಿಸ್ಮಯದ …
ಬೆಂಗಳೂರು: ಬೆಳಗಾವಿ ಜಿಲ್ಲೆಯ ಅಥಣಿಯ ಶ್ರೀ ಮೋಟಗಿ ಮಠ ಬೆಂಗಳೂರಿನಲ್ಲಿ ಆಯೋಜಿಸಿದ್ದ ಶ್ರೀ ಪ್ರಭು ಚನ್ನಬಸವ ಸ್ವಾಮೀಜಿ (ಅಥಣೀಶ) ವಿರಚಿತ …
ತಮ್ಮ ಸ್ವಾರ್ಥಕ್ಕೆ ಪಂಚಪೀಠಗಳನ್ನು ಒಡೆದು ಆಳುವ ನೀತಿ ಅನುಸರಿಸುತ್ತಿರುವ ಬಾಳೆಹೊನ್ನೂರು ಶ್ರೀ ರಂಭಾಪುರಿ ಜಗದ್ಗುರು ವೀರಸೋಮೇಶ್ವರ ಶಿವಾಚಾರ್ಯ ಭಗವತ್ಪಾದರು ಬೇರೆಯವರನ್ನು …
ಲಿಂಗಾಯತರಿಗೆ ಲಿಂಗಾಯತ ಧರ್ಮದ ಇತಿಹಾಸವೇ ಗೊತ್ತಿಲ್ಲದಿರುವುದು ದೊಡ್ಡ ದುರಂತ ಲಿಂಗಾಯತ ಧರ್ಮೀಯರು ವೈದಿಕ ಆಚರಣೆಯ ಸೆಳೆತಕ್ಕೆ ಸಿಲುಕಿಕೊಂಡಿದ್ದಾರೆ. ಡಾ.ಜೆ.ಎಸ್.ಪಾಟೀಲರ ” …
ಲಿಂಗಾಯತ ಕ್ರಾಂತಿ : ಸುಮಾರು 50 ವರ್ಷಗಳಾಚೆಯ ನೈಜ ಬಸವತತ್ವ ಪ್ರಸಾರ, ಶರಣಧರ್ಮದ ವೈಚಾರಿಕ ಚಿಂತನೆಗಳನ್ನು ಹಳ್ಳಿಗೆ ಏಕರಾತ್ರಿ ಪಟ್ಟಣಕ್ಕೆ …
ರಾಜಕೀಯ ಇತಿಹಾಸದಲ್ಲಿ ಮೈಲಿಗಲ್ಲು ಸಾಧಿಸಿದ ಕರ್ನಾಟಕ ಮಹಾಪುರುಷ ಶರಣ ಸಿದ್ದಪ್ಪ ಕಂಬಳಿಯವರು. ಶಾಲಾ ಕಾಲೇಜುಗಳ ತೊರೆದು ಕೋರ್ಟ್ ಕಛೇರಿ ಬಹಿಷ್ಕಾರ …
ಬೆಳಗಾವಿ: ಭಾರತ ಬಹುತ್ವದ ಭಾರತಕ್ಕೆ ಧಾರ್ಮಿಕ ಗ್ರಂಥವಾಗಿ ಮಹಾತ್ಮರ ಚರಿತಾಮೃತ ಅಥಣಿಯ ಪ್ರಭು ಚನ್ನಬಸವ ಸ್ವಾಮೀಜಿ ಗ್ರಂಥ ರಚಿಸಿದ್ದಾರೆ ಎಂದು …