Home / featured / ದಕ್ಷಿಣ ಭಾರತದ ವೃಚಾರಿಕ ಸಂತ ಪೆರಿಯಾರ್ ಕುರಿತು

ದಕ್ಷಿಣ ಭಾರತದ ವೃಚಾರಿಕ ಸಂತ ಪೆರಿಯಾರ್ ಕುರಿತು

 

ಜನನ/ಜೀವನ: ಪೆರಿಯಾರ್ ಅಥವಾ ರಾಮಸ್ವಾಮಿ ಜನಿಸಿದ್ದು 1879ರ ಸೆಪ್ಟಂಬರ್‌ 17 ರಂದು. ಅಂದಿನ ಮದ್ರಾಸ್ ರಾಜ್ಯದ ಕೊಯಮತ್ತೂರು ಜಿಲ್ಲೆಯ ಈರೋಡಿನ ಶ್ರೀಮಂತ ಬಲಿಜ ಕುಟುಂಬದಲ್ಲಿ ಹುಟ್ಟಿದ ರಾಮಸ್ವಾಮಿಯವರ ಮನೆಯ ಭಾಷೆ ಕನ್ನಡವಾಗಿತ್ತು. ತಂದೆ ವೆಂಕಟಪ್ಪ ನಾಯಕರ್ , ತಾಯಿ ಚಿನ್ನತಾಯಮ್ಮ. ಕೇವಲ 5 ವರ್ಷಗಳ ಕಾಲ ವಿದ್ಯಾಭ್ಯಾಸ ನಡೆಸಿದ ರಾಮಸ್ವಾಮಿ ತನ್ನ 12ನೇ ವಯಸ್ಸಿನಲ್ಲೇ ತಂದೆ ನಡೆಸುತ್ತಿದ್ದ ವ್ಯಾಪಾರಕ್ಕೆ ನೆರವಾಗತೊಡಗಿದರು.

ಪೆರಿಯಾರ್ ಅಥವ ರಾಮಸ್ವಾಮಿಗೆ 19 ವರ್ಷದವರಾಗಿದ್ದಾಗ ಮದುವೆಯಾಯಿತು, ಪತ್ನಿ ನಾಗಮ್ಮಾಯಿ. ಈ ದಂಪತಿಗೆ ಜನಿಸಿದ ಒಬ್ಬಳೇ ಮಗಳು ಕೇವಲ 5 ತಿಂಗಳು ಮಾತ್ರ ಬದುಕಿದ್ದಳು. ಇದೇ ವೇಳೆ ತಮ್ಮ ಮನೆಯಲ್ಲಿ ತಂದೆಯವರು ಏರ್ಪಡಿಸುತ್ತಿದ್ದ ಪ್ರವಚನಗಳನ್ನು ಕೇಳುತ್ತಿದ್ದರು. ತಮ್ಮ ಮನೆಯ ಆತಿಥ್ಯ ಸ್ವೀಕರಿಸಿ ಪುರಾಣಗಳನ್ನು ಓದುತ್ತಿದ್ದ ಪಂಡಿತ ಮಹಾಶಯರನ್ನು ರಾಮಸ್ವಾಮಿ ಗಮನಿಸುತ್ತಿದ್ದರು. ಪಂಡಿತರ ಮಾತುಗಳಲ್ಲಿನ ವಿರೋಧಾಭಾಸಗಳನ್ನು ಕುರಿತು ಪ್ರಶ್ನಿಸುತ್ತಿದ್ದರು.

ನಾಸ್ತಿಕರಾಗಿ ಬದಲಾದದ್ದಕ್ಕೆ ಕಾರಣ:-

ಕೌಟುಂಬಿಕ ವಿಚಾರವಾಗಿ ತಂದೆಯವರು ಕಟುವಾಗಿ ಬೈಯ್ದದ್ದರಿಂದ ರಾಮಸ್ವಾಮಿ ಮನೆ ಬಿಟ್ಟು ಹೊರಟರು. ಅಲ್ಲಿ ಇಲ್ಲಿ ತಿರುಗಾಡಿ, ವಾರಣಾಸಿ ತಲುಪಿದರು. ಕಾಶಿ ಅಥವಾ ವಾರಣಾಸಿ ಅನ್ನುವುದು ಹಿಂದೂಗಳ ಅತ್ಯಂತ ಪವಿತ್ರ ಕ್ಷೇತ್ರವಾಗಿತ್ತು.

ಕಾಶಿಯಲ್ಲಿ ವಿಶ್ವನಾಥನ ದರ್ಶನ ಮಾಡಿದ ರಾಮಸ್ವಾಮಿಯವರಿಗೆ ಅಲ್ಲಿ ನಡೆಯುತ್ತಿದ್ದ ಚಟುವಟಿಕೆಗಳು ಬೇಸರ ತಂದವು.

ಭಿಕ್ಷುಕರ ಕಾಟ, ಗಂಗಾ ನದಿಯಲ್ಲಿ ತೇಲುತ್ತಿದ್ದ ಹೆಣಗಳನ್ನು ಕಂಡು ಬೇಸರಗೊಂಡರು. ಇದೇ ವೇಳೆ 1904ರಲ್ಲಿ ರಾಮಸ್ವಾಮಿಯವರ ಬದುಕನ್ನು ಬದಲಿಸುವಂತ ಒಂದು ಘಟನೆ ನಡೆಯಿತು. ಕಾಶಿಯಲ್ಲಿನ ಛತ್ರಗಳಲ್ಲಿ ಕೇವಲ ಬ್ರಾಹ್ಮಣರಿಗೆ ಮಾತ್ರ ಉಚಿತವಾಗಿ ಊಟ ಹಾಕಲಾಗುತ್ತಿತ್ತು. ಹಸಿವೆಯಿಂದ ಕಂಗೆಟ್ಟಿದ್ದ ರಾಮಸ್ವಾಮಿ ಹೇಗಾದರೂ ಮಾಡಿ ಊಟಮಾಡಬೇಕೆಂದು ಜನಿವಾರ ಧರಿಸಿ, ಛತ್ರವೊಂದಕ್ಕೆ ಹೋದರು.

ಆದರೆ ಮೀಸೆ ಬಿಟ್ಟಿದ್ದ ಇವರನ್ನು ಬ್ರಾಹ್ಮಣರಲ್ಲವೆಂದು ಗುರುತಿಸಿದ ಕಾವಲುಗಾರರು, ಅಪಮಾನಗೊಳಿಸಿ ಹೊರಗೆ ತಳ್ಳಿದರು. ಆದರೆ ಛತ್ರದಿಂದ ಹೊರಬಿದ್ದ ರಾಮಸ್ವಾಮಿ ಕಣ್ಣಿಗೆ, ಆ ಕಟ್ಟಡ ನಿರ್ಮಿಸಲು ಹಣ ನೀಡಿದ್ದ ವ್ಯಕ್ತಿ, ದಕ್ಷಿಣ ಭಾರತದ ದ್ರಾವಿಡ ಜನಾಂಗದ ಶ್ರೀಮಂತ ವರ್ತಕನೆಂಬುದು ಗೊತ್ತಾಯಿತು. ತಮ್ಮವನೇ ಆದ ಮನುಷ್ಯ ಕೊಟ್ಟ ಹಣದಿಂದ ನಿರ್ಮಿಸಲಾಗಿರುವ ಛತ್ರದಲ್ಲಿ ತಮಗೇ ಅನ್ನ ಹಾಕಲು ನಿರಾಕರಿಸಿದ್ದರ ಬಗ್ಗೆ ಚಿಂತಿಸಿದರು.

ಇದು ವೈದಿಕರು ಮತ್ತು ಜಾತಿ ಪದ್ಧತಿ ಬಗ್ಗೆ ರಾಮಸ್ವಾಮಿಯವರಲ್ಲಿ ತಿರಸ್ಕಾರ ಹುಟ್ಟುವಂತೆ ಮಾಡಿತು. ಕಾಶಿಯಲ್ಲಿ ನಡೆದ ಘಟನೆ ಮನಸ್ಸಿಗೆ ದೊಡ್ಡ ಗಾಯವುಂಟುಮಾಡಿತ್ತು, ಹಿಂದೂ ಧರ್ಮದ ಬಗ್ಗೆ ಇದ್ದ ಒಳ್ಳೆಯ ಭಾವನೆಗಳನ್ನು ನಾಶಗೊಳಿಸಿತು. ಆವರೆಗೆ ಆಸ್ತಿಕನಾಗಿದ್ದ ರಾಮಸ್ವಾಮಿ ಅಲ್ಲಿನಿಂದ ಮುಂದಕ್ಕೆ ನಾಸ್ತಿಕರಾಗಿ ಬದಲಾದರು. ತಂದೆಯ ಮಾತಿನಿಂದ ಬೇಸರಗೊಂಡು ಮನೆ ಬಿಟ್ಟಿದ್ದ ರಾಮಸ್ವಾಮಿ ಮನೆಗೆ ಹಿಂತಿರುಗಿದರು.

ಈರೋಡಿನ ಪ್ರಸಿದ್ಧ ವಾಣಿಜ್ಯೋದ್ಯಮಿಯಾಗಿ:-

ಇವರು ವಾಪಸ್ ಮನೆಗೆ ಬಂದ ಮೇಲೆ ತಂದೆ, ಎಲ್ಲಾ ವ್ಯಾಪಾರ ವಹಿವಾಟನ್ನು ಇವರಿಗೆ ಒಪ್ಪಿಸಿದರು. ಮಂಡಿಯ ಹೆಸರನ್ನು ಈ.ವಿ.ರಾಮಸ್ವಾಮಿ ನಾಯ್ಕರ್ ಮಂಡಿ ಎಂದು ಬದಲಾಯಿಸಲಾಯಿತು. 1905ರ ನಂತರ ತಮ್ಮ ವಹಿವಾಟನ್ನು ಚೆನ್ನಾಗಿ ನಡೆಸಿದ ರಾಮಸ್ವಾಮಿ, ಈರೋಡಿನ ಪ್ರಸಿದ್ಧ ವಾಣಿಜ್ಯೋದ್ಯಮಿಯಾಗಿ ಬದಲಾದರು. ಸಾರ್ವಜನಿಕ ಜೀವನವನ್ನು ಪ್ರವೇಶಿಸಿ, ಹಲವಾರು ಸಂಘ ಸಂಸ್ಥೆಗಳ ಪದಾಧಿಕಾರಿಯಾದರು. ಸಾಮಾಜಿಕ ಸೇವೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡರು

ಅದೇ ವೇಳೆ ಈರೋಡಿನಲ್ಲಿ ಪ್ಲೇಗ್ ರೋಗ ದಾಳಿ ಮಾಡಿತು. ನೂರಾರು ಜನರು ಪ್ರಾಣ ಕಳೆದುಕೊಂಡರು, ಜೀವ ಉಳಿಸಿಕೊಳ್ಳುವ ಸಲುವಾಗಿ ಸಾವಿರಾರು ಜನರು ಊರು ಬಿಟ್ಟರು. ಮೃತಪಟ್ಟವರ ಶವ ಸಂಸ್ಕಾರ ಮಾಡಲು ಅವರ ಹತ್ತಿರದ ಸಂಬಂಧಿಗಳೇ ನಿರಾಕರಿಸಿದಾಗ, ರಾಮಸ್ವಾಮಿಯವರು ಮುಂದೆ ನಿಂತ ಶವ ಸಂಸ್ಕಾರ ಮಾಡಿದರು.

1909ರಲ್ಲಿ ತಮ್ಮ ಸಂಪ್ರದಾಯಸ್ಥ ಕುಟುಂಬವನ್ನು ಧಿಕ್ಕರಿಸಿ, ಕೇವಲ 9ನೇ ವಯಸ್ಸಿನಲ್ಲಿ ಬಾಲ ವಿಧವೆಯಾಗಿದ್ದ ತಮ್ಮ ತಂಗಿಯ ಮಗಳಿಗೆ ಮರು ವಿವಾಹ ಮಾಡಿಸಿದರು. 1918ರಲ್ಲಿ ಈ ರೋಡು ಮುನ್ಸಿಪಾಲಿಟಿಯ ಅಧ್ಯಕ್ಷರಾದರು, ಜನರ ಕಲ್ಯಾಣಕ್ಕಾಗಿ ಹಲವು ಯೋಜನೆ ಕೈಗೊಂಡರು. ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಿಕೊಟ್ಟು ಮೆಚ್ಚುಗೆಗೆ ಪಾತ್ರರಾದರು.

ಅಸಹಕಾರ ಚಳವಳಿಯಲ್ಲಿ ಸಕ್ರಿಯ ಪಾತ್ರ:-

ಇದೇ ವೇಳೆ ಕಾಂಗ್ರೆಸ್ ಮುಖಂಡ ಸಿ.ರಾಜಗೋಪಾಲಾಚಾರಿ ಮತ್ತು ರಾಮಸ್ವಾಮಿ ನಡುವೆ ಸ್ನೇಹ ಬೆಳೆಯಿತು. ರಾಜಗೋಪಾಲಾಚಾರಿಯವರು ರಾಮಸ್ವಾಮಿಯವರನ್ನು ಮಹಾತ್ಮಗಾಂಧಿ ನೇತೃತ್ವದ ಸ್ವಾತಂತ್ರ್ಯ ಚಳವಳಿ ಮತ್ತು ಕಾಂಗ್ರೆಸ್ ಪಕ್ಷವನ್ನು ಸೇರಲು ಒತ್ತಾಯಿಸಿದರು. ಈರೋಡು ಪುರಸಭೆ ಅಧ್ಯಕ್ಷನ ಸ್ಥಾನ ತ್ಯಜಿಸಿದ ರಾಮಸ್ವಾಮಿ 1919ರಲ್ಲಿ ಕಾಂಗ್ರೆಸ್ ಪಕ್ಷ ಸೇರಿದರು.

ಗಾಂಧೀಜಿಯವರ ಪ್ರೇರಣೆಯಂತೆ 29 ವಿವಿಧ ಸಂಘ ಸಂಸ್ಥೆಗಳಲ್ಲಿ ತಾವು ಹೊಂದಿದ್ದ ಸ್ಥಾನಮಾನಗಳನ್ನು ತ್ಯಜಿಸಿದರು. ವಾರ್ಷಿಕವಾಗಿ 20 ಸಾವಿರ ರೂಪಾಯಿ ವರಮಾನ ತರುತ್ತಿದ್ದ ಕೌಟುಂಬಿಕ ವ್ಯವಹಾರವನ್ನು ಮುಚ್ಚಿದರು. ಮಹಾತ್ಮ ಗಾಂಧಿಯವರನ್ನು ತಮ್ಮ ನಾಯಕರೆಂದು ಪರಿಗಣಿಸಿದ ರಾಮಸ್ವಾಮಿ , ತತ್ವಾದರ್ಶಗಳಿಗೆ ಬದ್ಧರಾಗಿ ಜೀವನ ಆರಂಭಿಸಿದರು. ದುಬಾರಿ ಬೆಲೆಯ ವಸ್ತ್ರಗಳನ್ನು ತ್ಯಜಿಸಿ ಖಾದಿ ಬಟ್ಟೆ ಧರಿಸಿ, ಸರಳ ಜೀವನ ನಡೆಸಿದರು.

ಬ್ರಿಟಿಷ್ ಆಡಳಿತದ ವಿರುದ್ಧ 1920ರಲ್ಲಿ ನಡೆದ ಅಸಹಕಾರ ಚಳವಳಿಯಲ್ಲಿ ಸಕ್ರಿಯ ಪಾತ್ರವಹಿಸಿದರು. ಈರೋಡಿನಲ್ಲಿ ಹೆಂಡ ಮಾರಾಟ ವಿರೋಧಿಸಿ ಬಂಧನಕ್ಕೊಳಗಾದರು. 1922ರಲ್ಲಿ ರಾಮಸ್ವಾಮಿಯವರನ್ನು ತಮಿಳುನಾಡು ಕಾಂಗ್ರೆಸ್‌ ಅಧ್ಯಕ್ಷರಾಗಿ ನೇಮಕಮಾಡಲಾಯಿತು.

1925ರಲ್ಲಿ ಕಂಚಿಯಲ್ಲಿ ನಡೆದ ಪ್ರಾದೇಶಿಕ ಕಾಂಗ್ರೆಸ್ ಸಮಾವೇಶದಲ್ಲಿ ದೇವಸ್ಥಾನಗಳನ್ನು ಪ್ರವೇಶಿಸಲು ಅಸ್ಪೃಶ್ಯರಿಗೆ ಅವಕಾಶ ನೀಡಬೇಕು ಮತ್ತು ಬ್ರಾಹ್ಮಣೇತರರಿಗೆ ಮೀಸಲಾತಿ ನೀಡಬೇಕು ಅನ್ನುವ ನಿರ್ಣಯ ಮಂಡಿಸಿದರು. ಆದರೆ ಕಾಂಗ್ರೆಸ್ ಪಕ್ಷದ ಬ್ರಾಹ್ಮಣ ಸದಸ್ಯರು ಇದನ್ನು ವಿರೋಧಿಸಿದರು. ಬ್ರಾಹ್ಮಣ ಸದಸ್ಯರ ಜಾತಿವಾದವನ್ನು ಖಂಡಿಸಿ ಸಿಡಿದೆದ್ದ ರಾಮಸ್ವಾಮಿಯವರು ಕಾಂಗ್ರೆಸ್ ಪಕ್ಷ ತ್ಯಜಿಸಿದರು,

ಸಾಮಾಜಿಕ ಪ್ರತಿಭಟನೆ/ ಸಾಮಾಜಿಕ ಸೇವೆ:-

ಕಾಂಗ್ರೆಸ್‌ನಿಂದ ಹೊರ ಬಂದ ರಾಮಸ್ವಾಮಿ, ದ್ರಾವಿಡ ಜನರ ಉದ್ಧಾರಕ್ಕಾಗಿ ‘ಆತ್ಮಗೌರವ ಚಳವಳಿ’ ಹುಟ್ಟುಹಾಕಿದರು. ವೈದಿಕ ಧರ್ಮವನ್ನು ಕಟುವಾಗಿ ಟೀಕಿಸಿದರು, ಗೊಡ್ಡು ಸಂಪ್ರದಾಯಗಳನ್ನು ವಿರೋಧಿಸಬೇಕೆಂದು ಕರೆ ನೀಡಿದರು. 1926ರಿಂದಲೂ ತಮಿಳುನಾಡಿನ ಹಲವೆಡೆ ಸಮಾವೇಶಗಳನ್ನು ಏರ್ಪಡಿಸಿ ಅರಿವು ಮೂಡಿಸಿದರು.

ಮನುಸ್ಮೃತಿ ಮತ್ತು ರಾಮಾಯಣವನ್ನು ಸುಡುವುದಾಗಿ ಘೋಷಿಸಿದರು.[೩] ಬ್ರಾಹ್ಮಣ ರಾಜ್ಯವನ್ನು ನಿರ್ಮೂಲನೆ ಮಾಡುವುದೇ ನನ್ನ ಗುರಿ ಎಂದು ಗುಡುಗಿದರು. 1928ರಲ್ಲಿ Revolt ಎಂಬ ಇಂಗ್ಲಿಷ್ ಮ್ಯಾಗಜಿನ್ ಪ್ರಕಟಿಸಿದರು. 1929ರಲ್ಲಿ ಯಾವುದೇ ರೀತಿಯ ಮಂತ್ರಗಳಿಲ್ಲದೆ, ಆಡಂಬರವಿಲ್ಲದೆ ಕೇವಲ ಹಾರ ಬದಲಾಯಿಸಿಕೊಂಡು, ಮಾತೃಭಾಷೆಯಲ್ಲಿ ವೈವಾಹಿಕ ಘೋಷಣೆ ಮಾಡುವ ಸ್ವಾಭಿಮಾನಿ ವಿವಾಹ ಪದ್ಧತಿ ಆರಂಭಿಸಿದರು.

ಅಂತರ್ ಜಾತಿ ವಿವಾಹ, ವಿಧವಾ ವಿವಾಹ ಗಳನ್ನು ಪ್ರೋತ್ಸಾಹಿಸಿದರು. 1929ರಿಂದ 1932ರ ವರೆಗೆ ವಿದೇಶಗಳ ಪ್ರವಾಸ ಮಾಡಿದ ಪೆರಿಯಾರ್, ಮಲೇಶಿಯಾ, ಈಜಿಪ್ಟ್, ಟರ್ಕಿ, ಗ್ರೀಸ್, ರಷ್ಯಾ, ಜರ್ಮನಿ, ಇಂಗ್ಲೆಂಡ್‌,ಸ್ಪೇನ್, ಫ್ರಾನ್ಸ್, ಪೋರ್ಚುಗಲ್ ಮತ್ತು ಶ್ರೀಲಂಕಾ ದೇಶಕ್ಕೂ ಭೇಟಿ ನೀಡಿದರು. ಆ ದೇಶಗಳಲ್ಲಿನ ಸಾಮಾಜಿಕ ಪರಿಸ್ಥಿತಿ ಬಗ್ಗೆ ಅಧ್ಯಯನ ಮಾಡಿದರು.

ಸಾಮಾಜಿಕ ಮತ್ತು ಆರ್ಥಿಕ ವಿಚಾರಗಳಲ್ಲಿ ಪೆರಿಯಾರ್ ಅವರು ಮಾರ್ಕ್ಸ್‌ ವಾದವನ್ನು ಒಪ್ಪುತ್ತಿದ್ದರು, ಆದರೆ ಖಾಸಗಿ ಮಾಲೀಕತ್ವವನ್ನೇ ರದ್ದುಪಡಿಸುವುದು ಪೆರಿಯಾರ್‌ಗೆ ಒಪ್ಪಿಗೆಯಾಗಿರಲಿಲ್ಲ. 1937ರಲ್ಲಿ ಸಿ.ರಾಜಗೋಪಾಲಾಚಾರಿಯವರು ಅಂದಿನ ಮದ್ರಾಸ್ ಪ್ರೆಸಿಡೆನ್ಸಿಯ ಮುಖ್ಯಮಂತ್ರಿಯಾಗಿದ್ದರು, ಅವರು ಹಿಂದಿಯನ್ನು ಶಾಲೆಗಳಲ್ಲಿ ಕಡ್ಡಾಯಗೊಳಿಸಿದರು. ಈ ಧೋರಣೆ, ತಮಿಳು ಭಾಷೆ ಮತ್ತು ಸಂಸ್ಕೃತಿ ಮೇಲಿನ ದಾಳಿ ಎಂದು ಸಾರಿದ ಪೆರಿಯಾರ್ ತೀವ್ರ ಹೋರಾಟ ಆರಂಭಿಸಿದರು.

ಸಾಮಾಜಿಕ ಕ್ರಾಂತಿ:-

ಪೆರಿಯಾರ್[೪] ತಮಿಳುನಾಡಿನಲ್ಲಿಯೆ ಬಹುದೊಡ್ಡ ಸಾಮಾಜಿಕ ಕ್ರಾಂತಿ[೫]ಯನ್ನೆ ಮಾಡಿದವರು. ಜಾತಿ ವಿಷವೃಕ್ಷವನ್ನು ಬುಡ ಮಟ್ಟ ಕಿತ್ತೊಗೆಯಲು ಕೊಡಲಿ ಹಿಡಿದು ನಿಂತವರು. ಹಿಂದೂ ಧರ್ಮದೊಳಗೆ ಇರುವ ಜಾತಿಯ ಒಳಜಗಳ, ಹತ್ಯೆಗಳ ಹಿಂದೆ ಸಾಮಾಜಿಕ ಅಸಮಾನತೆಗಳು ಸದಾ ಕೆಲಸ ಮಾಡುತ್ತಿದೆ. ಇದು ಕೋಮು ಗಲಭೆಗಿಂತ ಹೆಚ್ಚು ಅನಾಹುತವನ್ನು ಉಂಟುಮಾಡುತ್ತದೆ.

ಹಿಂದೂಸ್ಥಾನದ ಚರಿತ್ರೆಯಲ್ಲಿ ಜಾತಿ ದ್ವೇಷದ ಬೀಜ ಬಿತ್ತಿದ ಸಂಪ್ರದಾಯವಾದಿಗಳ ವಿರುದ್ಧ ಪೆರಿಯಾರ್ ಸಾಮಾಜಿಕ ನ್ಯಾಯದ ಹೋರಾಟಗಾರನಾಗಿ ಬಹುಜನರಿಗೆ ದನಿಯದವರು. ತಮಿಳುನಾಡಿನಲ್ಲಿ ದ್ರಾವಿಡ ಚಳುವಳಿ ಹುಟ್ಟು ಹಾಕಿದ ಪೆರಿಯಾರ್ ದೇವರು, ಧರ್ಮಗ್ರಂಥಗಳನ್ನು ಚರಂಡಿಗೆ ಎಸೆದರು. ಜುಟ್ಟು-ಜನಿವಾರಗಳನ್ನು ಕಂಡ ಕಂಡಲ್ಲಿ ಕಿತ್ತೆಸೆಯುವಂತೆ ಕರೆ ನೀಡಿದರು.

ಮನುವಾದಿಗಳನ್ನು ವಿರೂಪಗೊಳಿಸಿದರು. ಅದಕ್ಕೆ ಕಾರಣ ಸ್ಪಷ್ಟವಾಗಿದೆ. ಶತಮಾನಗಳಿಂದಲೂ ಜಾತಿಯ ಹೆಸರಿನಲ್ಲಿ ಈ ದೇಶದ ಬಹು ಜನರನ್ನು ಶಿಕ್ಷಣ-ಮನುಷ್ಯ ಸಹಜ ಸಂಬಂಧಗಳಿಂದಲೂ ದೂರವಿಟ್ಟವರ್‍ಯಾರು? ಇಂದು ಸಾಮಾಜಿಕ ನ್ಯಾಯ, ಸಮಾನತೆ, ಹಕ್ಕುಗಳಿಗಾಗಿ ಹೋರಾಡುವ ಮನಸ್ಸುಗಳಲ್ಲಿ ಕರಗದಷ್ಟು ಇತಿಹಾಸದ ನೋವಿದೆ ಅಥವಾ ನೋವಿನ ಕಾವಿದೆ ಎಂಬುದನ್ನು ಪೆರಿಯಾರ್ ಅವರನ್ನು ವಿರೋಧಿಸುವವರು ಅರ್ಥಮಾಡಿಕೊಳ್ಳಬೇಕು.

ಜಾತಿ ರಹಿತ ನೆಲೆಯಲ್ಲಿ ಮಹಿಳಾ ಹಕ್ಕು ಕಾಯ್ದೆಯ ಜಾರಿಗೆ 30 ರ ದಶಕದಲ್ಲಿಯೇ ದೊಡ್ಡ ದನಿ ಎತ್ತಿದ ಪೆರಿಯಾರ್ ನಾಡಿನಲ್ಲಿ ಗೋಮತಿ ಎಂಬ ಹೆಣ್ಣು ಮಗಳು ಹಿಂದೂ ಮತದೊಳಗಿನ ಜಾತಿಯ ಕ್ರೌರ್ಯಕ್ಕೆ ಬಲಿಯಾಗಿದ್ದಾಳೆ. ಜಾತಿ ಕಲಹಕ್ಕೆ ಹಳ್ಳಿಗೆ ಹಳ್ಳಿಯೆ ಉರಿದು ಹೊಗೆಯಾಡುತ್ತಿದೆ. ತಮಿಳುನಾಡಿನ ತಿರುನೆಲ್ವೇಲಿ ಜಿಲ್ಲೆಯ ಸೀವಲಪೇರಿ ಗ್ರಾಮದ ಮೇಲ್ಜಾತಿಯ ಹುಡುಗಿ ಗೋಮತಿ ಅದೇ ಗ್ರಾಮದ ದಲಿತ ಹುಡುಗ ಮುರುಗನ್‌ನನ್ನು ಪ್ರೀತಿಸುತ್ತಿದ್ದಳು. ಇದನ್ನು ಸಹಿಸದ ಹುಡುಗಿಯ ಸಹೋದರರು ಒಡಹುಟ್ಟಿದ ಸಹೋದರಿ ಗೋಮತಿಯ ಗಂಟಲಿಗೆ ಆಸಿಡ್ ಸುರಿದು‍, ಸಾಲದೆಂಬಂತೆ ಆಕೆಯ ಕುತ್ತಿಗೆಗೆ ಹಗ್ಗ ಬಿಗಿದು ಅಮಾನುಷವಾಗಿ ಕೊಂದು ಹಾಕಿದರು. (ಸೆ 13, 2013)

ದಲಿತರನ್ನು ಮುಟ್ಟಿದ್ದಕ್ಕೆ, ಪ್ರಕೃತಿದತ್ತ ಪ್ರೀತಿಯನ್ನು ಸಾರಿದ್ದಕ್ಕೆ, ಮುಗ್ದ ಜೀವಗಳು ಮರ್ಯಾದಾ ಹತ್ಯೆಗೆ ಬಲಿಯಾಗುತ್ತಿರುವುದರ ಹಿಂದೆ ಯಾವ ಧರ್ಮದ ದಾರಿ ದೀವಿಗೆ ಇದೆ? ಭಾರತದಲ್ಲಿನ ಕೋಮು ಗಲಭೆಗಳು ಹಿಂದೂ-ಮುಸ್ಲಿಂರ ನಡುವಿನ ಕ್ರೂರ ಮಾರಾಮಾರಿಯನ್ನೆ ಉಲ್ಲೇಖಿಸಿರುತ್ತವೆ. ಈ ಕಾರಣದಿಂದಲೆ ಅಂಬೇಡ್ಕರ್ ಅವರು ’ನಾನು ಹಿಂದೂ ಆಗಿ ಹುಟ್ಟಿದ್ದೇನೆ, ಆದರೆ ಹಿಂದೂ ಆಗಿ ಸಾಯಲಾರೆ’ ಎಂದು ಬೌದ್ಧ ಧರ್ಮವನ್ನು ಅನುಸರಿಸಿದ್ದು.

ದ್ರಾವಿಡನಾಡು ಸಮ್ಮೇಳನ ಸಂಘಟಕರಾಗಿ:-

1939ರಲ್ಲಿ ದ್ರಾವಿಡನಾಡು ಸಮ್ಮೇಳನ ಸಂಘಟಿಸಿದ ಪೆರಿಯಾರ್[೬], ತಮಿಳು, ತೆಲುಗು, ಕನ್ನಡ, ಮಲಯಾಳಿ ಭಾಷೆಗಳನ್ನಾಡುವ ಜನರನ್ನು ಸೇರಿಸಿ ದ್ರಾವಿಡ ರಾಜ್ಯ ನಿರ್ಮಾಣ ಮಾಡಬೇಕೆನ್ನುವ ಆಶಯ ಹೊಂದಿದ್ದರು. ಭಾರತ ಸ್ವಾತಂತ್ರ್ಯ ಪಡೆಯುವ ಸಂದರ್ಭದಲ್ಲಿ ಪಾಕಿಸ್ತಾನದ ರೀತಿಯಲ್ಲಿ, ಪ್ರತ್ಯೇಕ ದ್ರಾವಿಡನಾಡು ಅಸ್ತಿತ್ವಕ್ಕೆ ಬರಬೇಕೆಂದು ಪೆರಿಯಾರ್ ಒತ್ತಾಯಿಸಿದ್ದರು.

1916ರಲ್ಲಿ ಸ್ಥಾಪನೆಯಾಗಿದ್ದ ಸೌತ್ ಇಂಡಿಯನ್ ಲಿಬರೇಷನ್ ಪಕ್ಷ, ಜಸ್ಟಿಸ್ ಪಾರ್ಟಿ ಎಂದು ಹೆಸರಾಗಿತ್ತು. 1938ರಿಂದ 1944ರ ವರೆಗೆ ಪೆರಿಯಾರ್, ಜಸ್ಟಿಸ್ ಪಾರ್ಟಿ ಮುನ್ನಡೆಸಿದರು. ಇದೇ ಜಸ್ಟಿಸ್ ಪಾರ್ಟಿ, 1944ರಲ್ಲಿ ದ್ರಾವಿಡ ಕಳಗಂ ಎಂದು ಬದಲಾಯಿತು. ನಗರವಾಸಿಗಳು, ಹಳ್ಳಿಗರು ಮತ್ತು ವಿದ್ಯಾರ್ಥಿಗಳು ದ್ರಾವಿಡ ಕಳಗಂ ಪಕ್ಷದ ತತ್ವಗಳಿಂದ ಆಕರ್ಷಿತರಾದರು. ದ್ರಾವಿಡ ಕಳಗಂ ಪಕ್ಷ, ಸಾಮಾಜಿಕ ಸುಧಾರಣೆಯನ್ನು ತೀವ್ರಗೊಳಿಸಿತು.

ಅಸ್ಪೃಶ್ಯತೆ ನಿವಾರಣೆಗೆ ತೀವ್ರ ತರವಾದ ಹೋರಾಟ ಆರಂಭವಾಯಿತು. 9ನೇ ಜುಲೈ 1948ರಲ್ಲಿ ಪೆರಿಯಾರ್ ಅವರು ಮಣಿಯಮ್ಮಾಯಿಯವರನ್ನು ಎರಡನೇ ಪತ್ನಿಯಾಗಿ ಸ್ವೀಕರಿಸಿದರು. ತಮಗಿಂತ 42 ವರ್ಷ ಚಿಕ್ಕ ವಯಸ್ಸಿನ ಹೆಣ್ಣುಮಗಳನ್ನು ವಿವಾಹವಾಗಿ, ಪೆರಿಯಾರ್ ತಪ್ಪು ಉದಾಹರಣೆ ಸೃಷ್ಟಿಸುತ್ತಿದ್ದಾರೆ, ಸಮಾಜಕ್ಕೆ ತಪ್ಪು ಸಂದೇಶ ನೀಡುತ್ತಿದ್ದಾರೆ ಎಂದು ಕೆಲವರು ಆರೋಪಿಸಿದರು.

ಆದರೆ ಇವರಿಗೆಲ್ಲಾ, ಚುನಾವಣಾ ರಾಜಕಾರಣದಲ್ಲಿ ಪಾಲ್ಗೊಂಡು ಅಧಿಕಾರ ಹಿಡಿಯುವ ಆಸೆಯಿತ್ತು, ಅದಕ್ಕಾಗಿ ಪೆರಿಯಾರ್‌ರಿಂದ ದೂರಾಗಲು ಸಮಯ ಕಾಯುತ್ತಿದ್ದರು. ಸಾಮಾಜಿಕ ಪಿಡುಗುಗಳ ವಿರುದ್ಧ ಹೋರಾಡುವ ವ್ಯಕ್ತಿಗಳು ಮತ್ತು ಚಳವಳಿಗಳು ತಮ್ಮ ದಾರಿಯಿಂದ ಹಿಂದೆ ಸರಿಯಬಾರದು ಮತ್ತು ಚುನಾವಣಾ ರಾಜಕಾರಣಕ್ಕೆ ಹೋಗಬಾರದು ಅನ್ನುವುದು ಪೆರಿಯಾರ್ ವಾದವಾಗಿತ್ತು.

ದ್ರಾವಿಡನಾಡು ಎಂಬ ಪರಿಕಲ್ಪನೆಯನ್ನು ನಂತರ ತಮಿಳುನಾಡಿಗೆ ಮಾರ್ಪಡಿಸಲಾಯಿತು. [83] ಇದು ದಕ್ಷಿಣ ಭಾರತದ ಮಾತ್ರವಲ್ಲದೆ ಸಿಲೋನ್‌ನನ್ನೂ ಒಳಗೊಂಡಂತೆ ತಮಿಳು ಜನರ ಒಕ್ಕೂಟದ ಪ್ರಸ್ತಾಪಕ್ಕೆ ಕಾರಣವಾಯಿತು. [84] 1953 ರಲ್ಲಿ, ಪೆರಿಯಾರ್ ಮದ್ರಾಸ್ ಅನ್ನು ತಮಿಳುನಾಡಿನ ರಾಜಧಾನಿಯಾಗಿ ಸಂರಕ್ಷಿಸಲು ಸಹಾಯ ಮಾಡಿದರು, ನಂತರ ಇದನ್ನು ಅವರು ಹೆಚ್ಚು ಸಾಮಾನ್ಯವಾದ ದ್ರಾವಿಡನಾಡಿಗೆ ಬದಲಿಸಿದರು. [85] 1955 ರಲ್ಲಿ ಪೆರಿಯಾರ್ ರಾಷ್ಟ್ರಧ್ವಜವನ್ನು ಸುಡುವುದಾಗಿ ಬೆದರಿಕೆ ಹಾಕಿದರು, ಆದರೆ ಹಿಂದಿಯನ್ನು ಕಡ್ಡಾಯಗೊಳಿಸಬಾರದು ಎಂಬ ಮುಖ್ಯಮಂತ್ರಿ ಕಾಮರಾಜ್ ಅವರ ಪ್ರತಿಜ್ಞೆಯ ಮೇರೆಗೆ ಅವರು ಈ ಕ್ರಮವನ್ನು ಮುಂದೂಡಿದರು. [33] 1957 ರ ಅವರ ಭಾಷಣದಲ್ಲಿ ಸುತಂತರಾ ತಮಿಳುನಾಡು ಎನ್? (ಏಕೆ ಸ್ವತಂತ್ರ ತಮಿಳುನಾಡು?), ಅವರು ಭಾರತದ ಕೇಂದ್ರ ಸರ್ಕಾರವನ್ನು ಟೀಕಿಸಿದರು, ಭಾರತದ ಸಂವಿಧಾನವನ್ನು ಸುಡಲು ಸಾವಿರಾರು ತಮಿಳರನ್ನು ಪ್ರೇರೇಪಿಸಿದರು. ಈ ಕ್ರಮಕ್ಕೆ ಕಾರಣವೆಂದರೆ ಜಾತಿ ವ್ಯವಸ್ಥೆಯನ್ನು ಕಾಪಾಡುವ ಜವಾಬ್ದಾರಿಯನ್ನು ಪೆರಿಯಾರ್ ಸರ್ಕಾರಕ್ಕೆ ವಹಿಸಿದ್ದರು. ಪ್ರತ್ಯೇಕತೆಗೆ ಕಾರಣಗಳನ್ನು ತಿಳಿಸಿದ ನಂತರ ಮತ್ತು ಅದರ ವಿರುದ್ಧ ಅಭಿಪ್ರಾಯಗಳನ್ನು ತಿರಸ್ಕರಿಸಿದ ನಂತರ, ಅವರು ಜೂನ್ 5 ರಂದು ಭಾರತದ ನಕ್ಷೆಯನ್ನು ಸೇರಲು ಮತ್ತು ಸುಡಲು “ಯುದ್ಧದ ಕೂಗು” ಯೊಂದಿಗೆ ತಮ್ಮ ಭಾಷಣವನ್ನು ಮುಚ್ಚಿದರು. ಭಾರತೀಯ ಸಂವಿಧಾನವನ್ನು ಸುಟ್ಟುಹಾಕಿದ್ದಕ್ಕಾಗಿ ಪೆರಿಯಾರ್‌ಗೆ ಆರು ತಿಂಗಳ ಜೈಲು ಶಿಕ್ಷೆ ವಿಧಿಸಲಾಯಿತು.

ವೈಚಾರಿಕ ಮನೋಭಾವ:-

ಹಿಂದೂ ಧರ್ಮದಲ್ಲಿನ ಜಾತಿ ಪದ್ಧತಿಯನ್ನು ಆಧಾರ ಸಹಿತ ವಿರೋಧಿಸಿದ ಅವರು ‘‘ಜಾತಿಯಿಂದ ಮನುಷ್ಯ ಅವಮಾನಿತನಾಗುತ್ತಾನೆ ಹಾಗೂ ಧರ್ಮದಿಂದ ಜಾತಿ ಅವಮಾನಿತವಾಗುತ್ತದೆ. ನಾವು ಒಂದನ್ನು ಜೀವಂತ ಉಳಿಸಿಕೊಂಡು ಮತ್ತೊಂದನ್ನು ನಾಶಪಡಿಸುವುದಾದರೂ ಹೇಗೆ’’ ಎಂದು ಪ್ರಶ್ನಿಸಿದ್ದಾರೆ.

‘‘ಆಧ್ಯಾತ್ಮ ಮತ್ತು ಭಾವನಾತ್ಮಕತೆಗಳ ಮೂಲಕ ಮುಕ್ತಿ ಪ್ರಾಪ್ತಿಗಾಗಿ ದೇವರನ್ನು ಸಾಕ್ಷಾತ್ಕರಿಸಿಕೊಳ್ಳಲು ಮಾಡಿದ ವಿಫಲ ಪ್ರಯತ್ನಗಳನ್ನು ಪಕ್ಕಕ್ಕಿಟ್ಟು; ಇತಿಹಾಸದ ಉದ್ದಕ್ಕೂ ಮಾನವ ತನ್ನ ವಿಮರ್ಶಾತ್ಮಕ ಬುದ್ದಿಯನ್ನು ಪರಿಣಾಮಕಾರಿಯಾಗಿ ಉಪಯೋಗಿಸಿಕೊಂಡಿದ್ದರೆ, ಮಾನವ ಸಮಾಜದ ಪ್ರಗತಿ ಅನೇಕಪಟ್ಟು ಹೆಚ್ಚಾಗಿ, ವೇಗವಾಗಿ ಮತ್ತು ಉನ್ನತ ಮಟ್ಟದ್ದಾಗಿ ಇರುತ್ತಿತ್ತು’’ ಎಂದು ಅಭಿಪ್ರಾಯಪಡುತ್ತಾರೆ. ಪೆರಿಯಾರರ ನಾಸ್ತಿಕವಾದ ಮೇಲ್ಮಟ್ಟದ ಬೌದ್ದಿಕ ಹಂತದಲ್ಲಿ ದೇವರ ಅಸ್ತಿತ್ವವನ್ನು ತಿರಸ್ಕರಿಸುವುದೇ ಆಗಿದೆ.

1949ರಲ್ಲಿ ಪೆರಿಯಾರರ ಮೆಚ್ಚಿನ ಶಿಷ್ಯ ಸಿ.ಎನ್.ಅಣ್ಣಾದುರೈ ಅವರು ಡಿಎಂಕೆ ಅಥವಾ ದ್ರಾವಿಡ ಮುನ್ನೇತ್ರ ಕಳಗಂ ಹೆಸರಿನಲ್ಲಿ ಪ್ರತ್ಯೇಕ ಪಕ್ಷ ಸ್ಥಾಪಿಸಿದರು. ಕೆಲವರ್ಷಗಳ ನಂತರ ಅಣ್ಣಾದುರೈ ತಮಿಳುನಾಡಿನ ಮುಖ್ಯಮಂತ್ರಿಯಾದರು. ತಮಿಳುನಾಡಿನ ಮಾಜಿ ಸಿಎಂಗಳಾದ ಕರುಣಾನಿಧಿ ಮತ್ತು ಎಂ.ಜಿ.ರಾಮಚಂದ್ರನ್ ಅಣ್ಣಾ ಶಿಷ್ಯರೇ. ತಮ್ಮಿಂದ ಯಾರೇ ದೂರವಾದರೂ ಧೃತಿಗೆಡದ ಪೆರಿಯಾರ್‌, ತಮ್ಮ ಹೋರಾಟ ಮುಂದುವರಿಸಿದರು.

1956ರಲ್ಲಿ ಅಂದಿನ ಮದ್ರಾಸಿನ ಮರಿನಾ ಬೀಚ್‌ನಲ್ಲಿ ಶ್ರೀರಾಮನ ಚಿತ್ರಗಳನ್ನು ಸುಟ್ಟರು, ಆ ವೇಳೆ ಪೆರಿಯಾರ್‌ರನ್ನು ಬಂಧಿಸಿ ಜೈಲಿನಲ್ಲಿ ಇರಿಸಲಾಗಿತ್ತು. ಮನುಷ್ಯರೆಲ್ಲರೂ ಸಮಾನರೇ, ಮುಗ್ಧ ಜನರನ್ನು ಶೋಷಣೆ ಮಾಡುವ ಸಲುವಾಗಿಯಷ್ಟೇ ಜಾತಿ ಮತ್ತು ವರ್ಗಗಳನ್ನು ಸೃಷ್ಟಿಸಲಾಗಿದೆ ಎಂದು ಪೆರಿಯಾರ್ ಸಾರುತ್ತಿದ್ದರು.

ಭಾರತದಲ್ಲಿ ಜಾತಿ ದ್ವೇಷದ ಬೀಜ ಬಿತ್ತಿದ ಸಂಪ್ರದಾಯವಾದಿಗಳ ವಿರುದ್ಧ ಯುದ್ಧ ಸಾರಿದ ಪೆರಿಯಾರ್, ಧರ್ಮಗ್ರಂಥಗಳನ್ನು ಚರಂಡಿಗೆ ಎಸೆದರು. ಜುಟ್ಟು, ಜನಿವಾರಗಳನ್ನು ಕಿತ್ತೆಸೆಯುವಂತೆ ಕೂಗು ಹಾಕಿದರು. ತಮಿಳುನಾಡಿನಲ್ಲಿ ಬಹಳ ದೊಡ್ಡ ಸಾಮಾಜಿಕ ಕ್ರಾಂತಿ ಮಾಡಿದ ಪೆರಿಯಾರ್, ಜಾತಿಯ ವಿಷವೃಕ್ಷವನ್ನು ಬುಡಮಟ್ಟದಿಂದಲೇ ಕಿತ್ತೊಗೆಯಲು ಪ್ರಯತ್ನಿಸಿದರು, ಮೂಢನಂಬಿಕೆ ಮತ್ತು ಕಂದಾಚಾರಗಳ ವಿರುದ್ಧ ದೊಡ್ಡ ಹೋರಾಟವನ್ನೇ ನಡೆಸಿದರು.

ಮೇಲ್ಜಾತಿಯಲ್ಲಿ ಜನಿಸಿದ್ದರೂ ಅಸ್ಪೃಶ್ಯತೆಯನ್ನು ಆಚರಿಸಿದ ಸಮಾಜದ ಇತರ ಜಾತಿಗಳ ವಿರುದ್ಧ ಹೋರಾಡಿದರು. ನಾಸ್ತಿಕ ಮತು ಬೌಧ್ಧ ಮತದ ಅನುಯಾಯಿಗಳಾಗಿದ್ದ ಪೆರಿಯಾರರು ಬ್ರಾಹ್ಮಣ ಜಾತಿ ಮತ್ತು ಇತರ ಮೇಲು ಜಾತಿಗಳ ಅಂದಿನ ಧೋರಣೆಗಳ ವಿರೋಧಿಗಳಾಗಿದ್ದರು.

ಮಾರ್ಕ್ಸ್ ಮತ್ತು ಲೆನಿನ್ ಸಾಹಿತ್ಯ ಪ್ರಭಾವ:-

ಪೆರಿಯಾರ್ ಅವರ ಮೇಲೆ 1917ರಲ್ಲಿ ರಷ್ಯಾದಲ್ಲಿ ನಡೆದ ಸಮಾಜವಾದಿ ಕ್ರಾಂತಿಯೂ ಪರಿಣಾಮ ಬೀರಿತ್ತು. ಮಾರ್ಕ್ಸ್ ಮತ್ತು ಲೆನಿನ್ ಸಾಹಿತ್ಯವನ್ನೂ ಪೆರಿಯಾರ್ ಓದಿದ್ದರು. ಒಂದು ಹಾವನ್ನು ಮತ್ತು ಒಬ್ಬ ಕೆಟ್ಟ ಬ್ರಾಹ್ಮಣತ್ವ ಹೊಂದಿರುವ ವ್ಯಕ್ತಿಯನ್ನು ನೋಡಿದರೇ ಮೊದಲು ಬ್ರಾಹ್ಮಣತ್ವವನ್ನು ಕೊಲ್ಲು, ಆಮೇಲೆ ಹಾವನ್ನು ಕೊಲ್ಲು ಎನ್ನುತ್ತಿದ್ದರು ಪೆರಿಯಾರ್.

ಈ ಮಾತಿನ ಅರ್ಥ, ಒಂದು ಹಾವು ಒಬ್ಬ ಮನುಷ್ಯನನ್ನು ಕಚ್ಚಬಹುದು, ಅದೂ ಕೂಡ, ಆತ ನನಗೆ ಕೇಡು ಮಾಡಬಹುದೆಂಬ ಭಯದಲ್ಲಿ ಅಷ್ಟೇ. ಆದರೆ ದುಷ್ಟ ಸ್ವಭಾವದ ವ್ಯಕ್ತಿ, ತನ್ನ ಸಿದ್ಧಾಂತದಿಂದ ಇಡೀ ದೇಶ ಅಥವಾ ರಾಜ್ಯವನ್ನೇ ನಾಶಮಾಡಬಲ್ಲ ಅನ್ನುವುದು. 1970ರಲ್ಲಿ ವಿಶ್ವ ಸಂಸ್ಥೆಯ ಅಂಗ ಸಂಸ್ಥೆಯಾದ ಯುನೆಸ್ಕೊ ಪೆರಿಯಾರ್‌ ರವರನ್ನು ಗೌರವಿಸಿತ್ತು.

ಪೆರಿಯಾರ್‌ ಅವರನ್ನು ಹೊಸ ಯುಗದ ಸಂತ, ಆಗ್ನೇಯ ಏಷ್ಯಾದ ಸಾಕ್ರೆಟಿಸ್, ಸಾಮಾಜಿಕ ಚಳವಳಿಯ ಹರಿಕಾರ, ಅಜ್ಞಾನ ಮತ್ತು ಮೌಢ್ಯತೆಯ ಶತ್ರು ಎಂದು ಕೊಂಡಾಡಿತ್ತು. 94 ವರ್ಷಗಳ ಕಾಲ ಬದುಕಿದ್ದ ಪೆರಿಯಾರ್, ತಮ್ಮ ಬದುಕಿನ ಸುಮಾರು ಐವತ್ತಕ್ಕೂ ಹೆಚ್ಚು ವರ್ಷಗಳನ್ನು ಜನರಲ್ಲಿ ಅರಿವು ಮೂಡಿಸಲು ಮುಡಿಪಾಗಿಟ್ಟಿದ್ದರು. ವೈದಿಕ ಧರ್ಮದ ವಿರುದ್ಧ, ದ್ರಾವಿಡ ಚಳವಳಿ ಹುಟ್ಟುಹಾಕಿದ್ದರು.

ದೇಶದಲ್ಲಿ ಹೊಸ ಕ್ರಾಂತಿಯ ಅಲೆಯನ್ನೇ ಎಬ್ಬಿಸಿದ್ದ ಪೆರಿಯಾರ್ ಹೋರಾಟ, ಎಲ್ಲರಿಗೂ ಸ್ಫೂರ್ತಿದಾಯಕವಾದುದು. ಆದರೂ ಈ ಹೋರಾಟದ ಪರಿಣಾಮ, ಕರ್ನಾಟಕ ರಾಜ್ಯದ ಮೇಲೆ ಹೆಚ್ಚಿನ ಮಟ್ಟದಲ್ಲಿ ಆದಂತೆ ಕಾಣುವುದಿಲ್ಲ. ಭಾರತ ದೇಶದಲ್ಲಿ ಮಾತ್ರವಲ್ಲ, ಜಗತ್ತಿನ ಯಾವದೇಶದಲ್ಲೂ ಪೆರಿಯಾರ್‌ ರೀತಿಯಲ್ಲಿ ಹೋರಾಟ ನಡೆಸಿದ ಮತ್ತೊಬ್ಬರು ಸಿಗುವುದು ಕಷ್ಟ.

ಮೇಲ್ಜಾತಿಯಲ್ಲಿ ಜನಿಸಿದ್ದರೂಅಸ್ಪೃಶ್ಯತೆ ಯನ್ನು ಆಚರಿಸಿದ ಸಮಾಜದ ಇತರ ಜಾತಿಗಳ ವಿರುದ್ಧ ಹೋರಾಡಿದರು. ನಾಸ್ತಿಕ ಮತು ಬೌಧ್ಧ ಮತದ ಅನುಯಾಯಿಗಳಾಗಿದ್ದ ಪೆರಿಯಾರರು ಬ್ರಾಹ್ಮಣ ಜಾತಿ ಮತ್ತು ಇತರ ಮೇಲು ಜಾತಿಗಳ ಅಂದಿನ ಧೋರಣೆಗಳ ವಿರೋಧಿಗಳಾಗಿದ್ದರು.ದೇವರು ಮತ್ತು ದೆವ್ವದ ಕುರಿತು ಬಹಳ ಚೆನ್ನಾಗಿ ತಿಳಿದುಕೊಂಡು ಜನರಿಗೆ ತಿಳಿಸಿದರು.

ಯುನೆಸ್ಕೋ ಅವರಿಗೆ ನೀಡಿರುವ ಪ್ರಶಸ್ತಿ ಪತ್ರ:

ಯುನೆಸ್ಕೋ ಅವರಿಗೆ ನೀಡಿರುವ ಪ್ರಶಸ್ತಿ ಪತ್ರ ಹೀಗೆ ಹೇಳುತ್ತದೆ: “ಇವರು ನವಯುಗದ ಪ್ರವಾದಿ, ದಕ್ಷಿಣ ಪೂರ್ವ ಏಷ್ಯಾದಲ್ಲಿನ ಸಾಕ್ರೆಟಿಸ್. ಕ್ರಾಂತಿಕಾರಕ ಬದಲಾವಣೆಗಳ ಪಿತಾಮಹರಾದ ಈತ ಎಲ್ಲಾ ರೀತಿಯ ಅಜ್ಞಾನ, ಮೂಢನಂಬಿಕೆ, ಕಟ್ಟುಪಾಡು, ಮನುಷ್ಯ ಮನುಷ್ಯನ ನಡುವಿನ ಭೇದಗಳಿಗೆ ಕಡುವಿರೋಧಿಯಾಗಿದ್ದಾರೆ”.

ನಿಧನ:

ರಾಮಸ್ವಾಮಿ ಪೆರಿಯಾರರು ಡಿಸೆಂಬರ್ 24, 1973ರಲ್ಲಿ ತಮ್ಮ 94ನೆಯ ವಯಸ್ಸಿನಲ್ಲಿ ನಿಧನರಾದರು. ಭಾರತೀಯ ಸಮಾಜದಲ್ಲಿ ಮೂಲಭೂತ ಬದಲಾವಣೆಗಳಿಗಾಗಿ ತಮ್ಮ ಸ್ವಾರ್ಥ ತ್ಯಜಿಸಿ ತಾವು ನಂಬಿದ್ದ ಧ್ಯೆಯ, ಮಾನವೀಯತೆ, ಸಮಾನತೆ, ಸ್ವಾಭಿಮಾನಗಳಿಗಾಗಿ ಶ್ರಮಿಸಿದ ರಾಮಸ್ವಾಮಿ ನಾಯ್ಕರ್ ಅವರು ಹಲವು ನಿಟ್ಟಿನಲ್ಲಿ ಸ್ಮರಣೀಯರಾಗಿದ್ದಾರೆ.

About nagaraj

Check Also

20 ನೇ ಕಲ್ಯಾಣ ಪರ್ವ ಕ್ಷಣಗಣನೆ ಆರಂಭ

ಲೇಖಕರು – ಸಂಗಮೇಶ ಎನ್ ಜವಾದಿ. ಪತ್ರಕರ್ತ, ಪ್ರಗತಿಪರ ಚಿಂತಕರು. ಬೀದರ ಜಿಲ್ಲೆ. ವಿಶ್ವ ಗುರು ಬಸವಣ್ಣನವರ ನೇತೃತ್ವದಲ್ಲಿ ಅಂದು …

ಕಿತ್ತೂರು ಚೆನ್ನಮ್ಮನ ಜ್ಯೋತಿಯಾತ್ರೆಯ ವೇಳಾಪಟ್ಟಿ

ಚನ್ನಮ್ಮನ ಕಿತ್ತೂರು : ಕಿತ್ತೂರು ಉತ್ಸವದ ಅಂಗವಾಗಿ ರಾಣಿ ಚನ್ನಮ್ಮ ವಿಜಯ ಜ್ಯೋತಿ‌ ಯಾತ್ರೆಯು ಅಕ್ಟೋಬರ್ 18 ರಿಂದ ಅಕ್ಟೋಬರ್ …

ವೈದ್ದಿಕರ ಕುತಂತ್ರದಿಂದ ಲಿಂಗಾಯತ ಧರ್ಮದ ಹೋರಾಟಕ್ಕೆ ಹಿನ್ನಡೆ

ಲಿಂಗಾಯತ ಕ್ರಾಂತಿ: ಲಿಂಗಾಯತ ಧರ್ಮ ಉದಯವಾಗಿದ್ದು 12 ಶತಮಾನದ ಆರಂಭದಲ್ಲಿ ಎಂಬುವುದು ಜಗತ್ತಿನ ಶ್ರೇಷ್ಠ ತತ್ವಜ್ಞಾನಿ, ಸಮಾನತೆಯ ಪ್ರತಿಪಾಧಕ, ಲಿಂಗಬೇದವನ್ನು …

ಡಾ. ಎಂ.ಬಿ ಪಾಟೀಲ ಕರ್ನಾಟಕದ ಮುಂದಿನ ಮುಖ್ಯಮಂತ್ರಿಯಾಗಲಿ

ನೇಗಿನಹಾಳ : ನಾಡಿನ ನೆಲ, ಜಲ, ಶಿಕ್ಷಣ ಹಾಗೂ ಜನಸಾಮಾನ್ಯರ ಜೀವನೋಪಾಯಕ್ಕಾಗಿ ಹತ್ತಾರು ಯೋಜನೆಗಳನ್ನು ಅನುಷ್ಠಾನಗೊಳಿಸಿ ವಿಜಯಪುರ ಜಿಲ್ಲೆಯ ಬೆಳಕಾಗಿರುವ …

ಕರ್ನಾಟಕದ ಭವಿಷ್ಯದ ಮುಖ್ಯಮಂತ್ರಿ ಶ್ರೀ ಡಾ. ಎಂ.ಬಿ ಪಾಟೀಲರ ಜನ್ಮದಿನ

ಲಿಂಗಾಯತ ಕ್ರಾಂತಿ: ಲಿಂಗಾಯತರ ಪ್ರಶ್ನಾತೀತ ನಾಯಕ, ಕರ್ನಾಟಕದ ಭವಿಷ್ಯದ ಮುಖ್ಯಮಂತ್ರಿಗಳು, ನೇರ ನಡೆ-ನುಡಿಯ ಲಿಂಗಾಯತ ಕ್ರಾಂತಿ ಪತ್ರಿಕೆಯ ಮಾರ್ಗದರ್ಶಕರಾದ ಸನ್ಮಾನ್ಯಶ್ರೀ …

ಹಸಿರುಕ್ರಾಂತಿ ಪತ್ರಿಕೆಯ ಸಂಸ್ಥಾಪಕ ಶ್ರೀ ಕಲ್ಯಾಣರಾವ್ ಜಿ ಮುಚಳಂಬಿ ಲಿಂಗೈಕ್ಯ

ಬೆಳಗಾವಿ: ರೈತ ಚಳವಳಿಗಳಿಗಳ ಮುಂಚೂಣಿ ನಾಯಕ, ಹಸಿರು ಕ್ರಾಂತಿ ಪತ್ರಿಕೆಯ ಸಂಸ್ಥಾಪಕ ಸಂಪಾದಕ ಕಲ್ಯಾಣರಾವ್ ಗುರಬಸಪ್ಪ ಮುಚಳಂಬಿಯವರು ಅವರು ಬೆಳಗಾವಿ …

ನೂತನ ಸಂಸತ್ ಭವನಕ್ಕೆ ಅನುಭವ ಮಂಟಪ ಎಂದು ಹೆಸರಿಡಲು ನಿಜಗುಣಾನಂದ ಸ್ವಾಮೀಜಿ ಒತ್ತಾಯ

ಬೈಲೂರು: ದೆಹಲಿಯಲ್ಲಿ ನೂತನವಾಗಿ ನಿರ್ಮಿಸುತ್ತಿರುವ ಸಂಸತ್ ಭವನಕ್ಕೆ “ಅನುಭವ ಮಂಟಪ” ಎಂದು ನಾಮಕರಣ ಮಾಡಬೇಕು ಎಂದು ಬೈಲೂರು ನಿಷ್ಕಲ ಮಂಟಪದ …

ಅಕ್ಟೋಬರ್ 3ರಂದು “ಶಿವಬಸವ ಕಾರುಣ್ಯ” ದ ಗುರು ಪ್ರವೇಶ

ಲಿಂಗಾಯತ ಕ್ರಾಂತಿ: ಉತ್ತರಕನ್ನಡ ಜಿಲ್ಲೆ ಹಳಿಯಾಳದ ಅಂಗಡಿ ಕುಟುಂಬದ ನೂತನ ಮನೆ “ಶಿವಬಸವ ಗುರುಕಾರುಣ್ಯ” ದ ಗುರು ಪ್ರವೇಶವು ಅಕ್ಟೋಬರ್ …

ಅಕ್ಕನ ಸಮರ್ಪಣಾ ಭಾವ

ಭಾರತೀಯ ಭಕ್ತಿ ಸಾಹಿತ್ಯದ ಚರಿತ್ರೆಯಲ್ಲಿ ಅಕ್ಕಮಹಾದೇವಿ ಒಬ್ಬ ವಿಶಿಷ್ಟ ಸಾಧಕಿ, ಯೋಗಿಣಿಯಾಗಿ ಕಂಡುಬರುತ್ತಾಳೆ. ಆಕೆಯ ಪ್ರೀತಿ ಪ್ರೇಮ ವಿನೂತನ ವಿಸ್ಮಯದ …

ಪ್ರಭು ಚನ್ನಬಸವ ಸ್ವಾಮೀಜಿ ವಿರಚಿತ ಮಹಾತ್ಮರ ಚರಿತಾಮೃತ ಗ್ರಂಥ ಲೋಕಾರ್ಪಣೆ

ಬೆಂಗಳೂರು: ಬೆಳಗಾವಿ ಜಿಲ್ಲೆಯ ಅಥಣಿಯ ಶ್ರೀ ಮೋಟಗಿ ಮಠ ಬೆಂಗಳೂರಿನಲ್ಲಿ ಆಯೋಜಿಸಿದ್ದ ಶ್ರೀ ಪ್ರಭು ಚನ್ನಬಸವ ಸ್ವಾಮೀಜಿ (ಅಥಣೀಶ) ವಿರಚಿತ …

ರಂಭಾಪುರಿ ಶ್ರೀಗಳು ಢೋಂಗಿತನ ಬಿಡಲಿ

ತಮ್ಮ ಸ್ವಾರ್ಥಕ್ಕೆ ಪಂಚಪೀಠಗಳನ್ನು ಒಡೆದು ಆಳುವ ನೀತಿ ಅನುಸರಿಸುತ್ತಿರುವ ಬಾಳೆಹೊನ್ನೂರು ಶ್ರೀ ರಂಭಾಪುರಿ ಜಗದ್ಗುರು ವೀರಸೋಮೇಶ್ವರ ಶಿವಾಚಾರ್ಯ ಭಗವತ್ಪಾದರು ಬೇರೆಯವರನ್ನು …

“ವೇದಕ್ಕೆ ಒರೆಯ ಕಟ್ಟುವೆ” – ಕೃತಿ ಲೋಕಾರ್ಪಣೆ

ಲಿಂಗಾಯತರಿಗೆ ಲಿಂಗಾಯತ ಧರ್ಮದ ಇತಿಹಾಸವೇ ಗೊತ್ತಿಲ್ಲದಿರುವುದು ದೊಡ್ಡ ದುರಂತ ಲಿಂಗಾಯತ ಧರ್ಮೀಯರು ವೈದಿಕ ಆಚರಣೆಯ ಸೆಳೆತಕ್ಕೆ ಸಿಲುಕಿಕೊಂಡಿದ್ದಾರೆ. ಡಾ.ಜೆ.ಎಸ್.ಪಾಟೀಲರ ” …

“ಲಿಂಗಾನಂದರ ವಚನಧರ್ಮ ಚಳುವಳಿಗೆ” ಡಾಕ್ಟರೇಟ್ ಪದವಿ

ಲಿಂಗಾಯತ ಕ್ರಾಂತಿ : ಸುಮಾರು 50 ವರ್ಷಗಳಾಚೆಯ ನೈಜ ಬಸವತತ್ವ ಪ್ರಸಾರ, ಶರಣಧರ್ಮದ ವೈಚಾರಿಕ ಚಿಂತನೆಗಳನ್ನು ಹಳ್ಳಿಗೆ ಏಕರಾತ್ರಿ ಪಟ್ಟಣಕ್ಕೆ …

“ಅವಕಾಶ ವಂಚಿತರಿಗೆ ಬೆಳಕಾದ ಸಜ್ಜನ ರಾಜಕಾರಣಿ ಸಿದ್ದಪ್ಪ ಕಂಬಳಿಯವರು”

ರಾಜಕೀಯ ಇತಿಹಾಸದಲ್ಲಿ ಮೈಲಿಗಲ್ಲು ಸಾಧಿಸಿದ ಕರ್ನಾಟಕ ಮಹಾಪುರುಷ ಶರಣ ಸಿದ್ದಪ್ಪ ಕಂಬಳಿಯವರು. ಶಾಲಾ ಕಾಲೇಜುಗಳ ತೊರೆದು ಕೋರ್ಟ್ ಕಛೇರಿ ಬಹಿಷ್ಕಾರ …

ಸೆಪ್ಟೆಂಬರ್ 25ರಂದು ಮಹಾತ್ಮರ ಚರಿತಾಮೃತ ಗ್ರಂಥ ಬಿಡುಗಡೆ: ಪೂಜ್ಯ ನಿಜಗುಣಾನಂದ ಶ್ರೀಗಳು

ಬೆಳಗಾವಿ: ಭಾರತ ಬಹುತ್ವದ ಭಾರತಕ್ಕೆ ಧಾರ್ಮಿಕ ಗ್ರಂಥವಾಗಿ ಮಹಾತ್ಮರ ಚರಿತಾಮೃತ ಅಥಣಿಯ ಪ್ರಭು ಚನ್ನಬಸವ ಸ್ವಾಮೀಜಿ ಗ್ರಂಥ ರಚಿಸಿದ್ದಾರೆ ಎಂದು …

Leave a Reply

Your email address will not be published.