Home / General News / ನೇಗಿನಹಾಳ ಗ್ರಾಮಕ್ಕೆ ಜಿಲ್ಲಾಧಿಕಾರಿ ಎಮ್.ಜಿ ಹಿರೇಮಠ ದಿಢೀರ ಬೇಟಿ

ನೇಗಿನಹಾಳ ಗ್ರಾಮಕ್ಕೆ ಜಿಲ್ಲಾಧಿಕಾರಿ ಎಮ್.ಜಿ ಹಿರೇಮಠ ದಿಢೀರ ಬೇಟಿ

ನೇಗಿನಹಾಳ : ಗ್ರಾಮದಲ್ಲಿ ಹೆಚ್ಚಿದ ಕೊರೊನಾ ಸೋಂಕು ಹಾಗೂ ಮೃತರ ಸಂಖ್ಯೆಯನ್ನು ಅರಿತು ಇಲ್ಲಿನ ವಾಸ್ಥವ ಸಮಸ್ಯೆಗಳನ್ನು ಪರಿವೀಕ್ಷಣೆ ಮಾಡಲು ಮುಂಜಾನೆಯಿಂದ ಮಧ್ಯಾಹ್ನದವರೆಗೆ ಸ್ಥಳೀಯ ಶಾಸಕರು, ಜನಪ್ರತಿನಿಧಿಗಳ ಜೊತೆಗೂಡಿ ಗ್ರಾಮ ಪಂಚಾಯತಿಯಲ್ಲಿ ಸಭೆ ಕರೆದು ಇಲ್ಲಿನ ಸ್ಥಳೀಯ ಸಮಸ್ಯೆಗಳನ್ನು ಆಲಿಸಿದರು. ಅಧಿಕಾರಿಗಳು, ಗ್ರಾ.ಪಂ ಆಡಳಿತ ಮಂಡಳಿ ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿಗಳಿಗೆ ಸಹಕಾರ ನೀಡಿದ್ದರೆ ಅಂತಹ ವ್ಯಕ್ತಿಗಳ ಮೇಲೆ ನಿರ್ಧಾಕ್ಷಣ್ಯವಾಗಿ ಕ್ರಮಕೈಗೊಳ್ಳಬೇಕೆಂದು ತಿಳಿಸಿದರು. ಗ್ರಾಮದಲ್ಲಿನ ಕೊರೊನಾ ಸೋಂಕಿತರ ಸಂಖ್ಯೆಯನ್ನು ತಡೆಗಟ್ಟಲು ಪಂಚಾಯತಿ ಹಾಗೂ ಆರೋಗ್ಯ ಇಲಾಖೆಯವರು ಜೊತೆಗೂಡಿ ಕಾರ್ಯಪಡೆ ರಚಿಸಬೇಕೆಂದು ಜಿಲ್ಲಾಧಿಕಾರಿ ಎಮ್.ಜಿ ಹಿರೇಮಠ ತಿಳಿಸಿದರು.
ಗ್ರಾಮದ ಪಂಚಾಯತಿಯ ಸಭಾಂಗಣದಲ್ಲಿ ಕರೆದ ತುರ್ತು ಸಭೆಯನ್ನು ಕರೆದು ಮಾತನಾಡಿದ ಅವರು ಗ್ರಾಮದ ಕೊರೊನಾ ಸೋಂಕಿತರ ಮನೆಗಳಿಗೆ ಬೇಟಿ ನೀಡಿ ಆರೋಗ್ಯ ವಿಚಾರಿಸಿ ಮನೆಯ ಎಲ್ಲ ಸದಸ್ಯರ ಸೆಚ್ಯುರೇಶನ್ ಮತ್ತು ಟೆಂಪರೇಚರ್ ಪರೀಕ್ಷೆಯನ್ನು ತಾವೇ ಖುದ್ದಾಗಿ ಮುಂದೆ ನಿಂತು ಮಾಡಿಸಿದರು. ಸೋಂಕಿತರಿಗೆ ಕ್ವಾರಂಟೈನ್ ಕೇಂದ್ರಗಳಲ್ಲಿ ಉಳಿದುಕೊಳ್ಳಲು ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು. ಗ್ರಾಮದಲ್ಲಿ ನಡೆಸಿರುವ ಸ್ಯಾನಿಟೈಸರ್ ವ್ಯವಸ್ಥೆಯನ್ನು ವಿಕ್ಷೀಸಿದರು. ಜೊತೆಗೆ ಪಾದಯಾತ್ರೆಯ ಮೂಲಕ ಎಸ್ಸಿ. ಎಸ್ಟಿ ಕಾಲನಿಯ ಮನೆ-ಮನೆಗೆ ತೆರಳಿ ಕೊರೊನಾ ಸೋಂಕಿನ ಲಕ್ಷಣ ಕಂಡುಬಂದವರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆಯಬೇಕು, ಯಾರು ಭಯಪಟ್ಟು ಮನೆಯಲ್ಲಿಯೇ ಜೀವ ಕಳಿದುಕೊಳ್ಳಬಾರದು ಚಿಕಿತ್ಸೆಯಿಂದ ರೋಗ ಮುಕ್ತರಾಗುತ್ತಿರಿ ಎಂದು ಸಲಹೆ ನೀಡಿದರು. ಕೆಲವು ಮನೆಗಳಲ್ಲಿ ಸ್ಯಾಚುರೇಶನ್ ಹಾಗೂ ಟೆಂಪರೆಚರ್ ಚಿಕಿತ್ಸೆ ಮಾಡಿಸಿದರು. ಕೊರೊನಾದಿಂದ ಮೃತರಾದ ಕುಟುಂಬದವರಿಗೆ ಸಾಂತ್ವನ ತಿಳಿಸಿ ಎಲ್ಲ ಸದಸ್ಯರ ರ್‍ಯಾಪಿಡ್ ಚಿಕಿತ್ಸೆ ಮಾಡಿಸಿದರು.
ಶಾಸಕ ಮಹಾಂತೇಶ ದೊಡ್ಡಗೌಡರ ಮಾತನಾಡಿ ಗ್ರಾಮದಲ್ಲಿ ಕೋವಿಡ್ ಕೇರ್ ಸೆಂಟರ್ ಆರಂಭಿಸಲಾಗುತ್ತಿದೆ. ಕೊರೊನಾ ಸೋಂಕು ಕಂಡುಬಂದಿರುವ ರೋಗಿಗಳು ಕೋವಿಡ್ ಕೇರ್ ಸೆಂಟರ್ ನಲ್ಲಿಯೇ ಕ್ವಾರಂಟೈನ್ ಆಗಬೇಕು ಇಲ್ಲಿ ಆಹಾರ, ಮುಂಜಾನೆ ಯೋಗ, ವೈದ್ಯಕೀಯ ಸೇವೆಗೆ ಸಂಬಂಧಿಸಿದಂತೆ ಎಲ್ಲ ರೀತಿಯ ಅನುಕೂಲ ಮಾಡಲಾಗುವುದು. ಗ್ರಾಮದ ಎಲ್ಲ ವಾರ್ಡಗಳಲ್ಲಿ ಗ್ರಾ.ಪಂ ಸದಸ್ಯರ ಸಹಕಾರದ ಮೂಲಕ ಮನೆ-ಮನೆಗೆ ತೆರಳಿ ರ್‍ಯಾಪಿಡ್ ಚಿಕಿತ್ಸೆ ಮಾಡುವ ಕಾರ್ಯ ಆರಂಭಿಸಲು ಸಲಹೆ ನೀಡಿದರು.
ಜಿ.ಪಂ ಸದಸ್ಯೆ ರೋಹಿಣಿ ಪಾಟೀಲ ಮಾತನಾಡಿ ಗ್ರಾಮದಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರ ನಮ್ಮ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ೪೦,೦೦೦ ಜನರು ಚಿಕಿತ್ಸೆ ಪಡೆಯುವ ಒಂದೇ ಸರಕಾರಿ ಆಸ್ಪತ್ರೆ, ಇಲ್ಲಿ ಒಬ್ಬರೇ ವೈದ್ಯರಿದ್ದು ಅವರು ಸಹ ತಾತ್ಕಾಲಿಕ ಇದ್ದಾರೆ. ಅವರು ಕೊರೊನಾ ಸೊಂಕಿಗೆ ತುತ್ತಾದರೆ ಬೇರೆ ವೈದ್ಯರು ಬರಲಿಲ್ಲಾ ಇತಂಹ ಸಂದರ್ಭದಲ್ಲಿ ಕೊರೊನಾ ಸೋಂಕು ಪ್ರತಿ ಮನೆ-ಮನೆಗೆ ಹಬ್ಬಿದಲ್ಲದೇ ಚಿಕಿತ್ಸೆ ಪಡೆಯದೇ ಹಲವಾರು ಜನರು ಮರಣ ಹೊಂದಿದ್ದಾರೆ. ಆದರಿಂದ ಗ್ರಾಮದ ಆಸ್ಪತ್ರೆ ಮೇಲಧರ್ಜೆಗೆರಿಸಿ ಖಾಯಂ ಇರುವ ಇಬ್ಬರು ವೈದ್ಯರನ್ನು ನೇಮಿಸಿ ಎಂದು ತಿಳಿಸಿದರು.


ನೇಗಿನಹಾಳ ಗ್ರಾ.ಪಂ ಬಹಳಷ್ಟು ದೊಡ್ಡದಿದ್ದು ಇಲ್ಲಿ ಖಾಯಂ ಪಂಚಾಯತ್ ಅಭಿವೃದ್ಧಿ ಅಧಿಕಾರಿ ನೇಮಕವಿಲ್ಲ ತಾತ್ಕಾಲಿಕ ಇರುವುದರಿಂದ ಅಭಿವೃದ್ಧಿ ಕಾರ್ಯಗಳು ನಿಧಾನಗತಿಯಲ್ಲಿ ನಡೆಯುತ್ತಿದ್ದು ಬಹಳಷ್ಟು ಸಮಸ್ಯೆಗಳಾಗುತ್ತಿವೆ ಆದರಿಂದ ಖಾಯಂ ಆಗಿ ಇರುವತ್ತೆ ಅಧಿಕಾರಿ ನೇಮಿಸಬೇಕೆಂದು ಹಾಗೂ ಗ್ರಾಮದಲ್ಲಿ ಪ್ರತಿದಿನ ಸಾಯುತ್ತಿರುವ ಶವಗಳನ್ನು ಭಸ್ಮ ಮಾಡಲು ಕರೆಂಟ್ ಮೂಲಕ ಸುಡುವ ಯಂತ್ರವನ್ನು ನೀಡುವಂತೆ ಗ್ರಾ.ಪಂ ಅದ್ಯಕ್ಷರು, ಸದಸ್ಯರು ಹಾಗೂ ಗ್ರಾಮಸ್ಥರು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.


ಈ ಸಂದರ್ಭದಲ್ಲಿ ಬೈಲಹೊಂಗಲ ಉಪವಿಭಾಗಧಿಕಾರಿ ಶಶಿಧರ ಬಗಲಿ, ತಹಶಿಲ್ದಾರ್ ಬಸವರಾಜ ನಾಗರಾಳ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಮಹೇಶ ಊಣ್ಣಿ, ಪಿ.ಎಸ್.ಆಯ್ ಈರಣ್ಣಾ ರೀತ್ತಿ,  ವೈದ್ಯಾಧಿಕಾರಿ ಡಾ ಸಂಜಯ ಸಿದ್ಧನ್ನವರ, ಡಾ. ಮಹಾಂತೇಶ ಹಿರೇಮಠ, ಡಾ. ಸೋಮನಿಂಗ ಪಾಶ್ವಾಪೂರ, ಡಾ. ಅರುಣ ಕುಂಕೂರ, ಗಣ್ಯರಾದ ಕಾಶಿನಾಥ ಇನಾಮದಾರ, ಗ್ರಾ.ಪಂ ಅಧ್ಯಕ್ಷ ಶಿವಾಜಿ ಮುತ್ತಗಿ, ಸದಸ್ಯರಾದ ಗಂಗಪ್ಪ ತೋರಣಗಟ್ಟಿ, ಮಹಾದೇವ ಮಡಿವಾಳರ, ಧರ್ಮರಾಜ ತಪರಿ, ಸುಭಾಷ್ ರೂಮೋಜಿ, ನಾಗಪ್ಪ ಭೂವಿ, ನಾಗರಾಜ ನರಸಣ್ಣವರ, ಮಹಾದೇವಿ ಕೋಟಗಿ, ಪಂಚಾಯತ ಅಭಿವೃದ್ಧಿ ಅಧಿಕಾರಿ ಮಡಿವಾಳಪ್ಪ ಅವಕ್ಕನವರ, ಗ್ರಾಮ ಲೆಕ್ಕಾಧಿಕಾರಿ ಛತ್ರಪತಿ ಎನ್.ಕೆ, ಆರೋಗ್ಯ ಇಲಾಖೆ ಸಿಬ್ಬಂದಿಗಳು, ಅಂಗನವಾಡಿ, ಆಶಾ ಕಾರ್ಯಕರ್ತೆಯರು ಹಾಗೂ ಗ್ರಾಮದ ಮುಖಂಡರು ಉಪಸ್ಥಿತರಿದ್ದರು.


ಗ್ರಾಮ ಪಂಚಾಯತಿಯಲ್ಲಿ ಕರೆದ ತುರ್ತು ಸಭೆಯಲ್ಲಿ ಜಿಲ್ಲಾಧಿಕಾರಿ ಎಮ್.ಜಿ ಹಿರೇಮಠ ಮಾತನಾಡಿದರು. ಶಾಸಕ ಮಹಾಂತೇಶ ದೊಡ್ಡಗೌಡರ, ಜಿ.ಪಂ ಸದಸ್ಯೆ ರೋಹಿಣಿ ಪಾಟೀಲ ಉಪಸ್ಥಿತರಿದ್ದರು.

ಗ್ರಾಮದ ಪ್ರಮುಖ ಬೀದಿಗಳಲ್ಲಿ ಜಾತಾ ಮಾಡಿ ಕೊರೊನಾ ಸೋಂಕಿತರ ಮನೆಗೆ ಬೇಟಿ ನೀಡಿ ಕ್ವಾರಂಟೈನ್ ಆಗುವಂತೆ ವಿನಂತಿಸಿದರು.

ಕೊರೊನಾ ಸೋಂಕಿನಿಂದ ಮೃತರಾದ ಮನೆಗೆ ಬೇಟಿ ನೀಡಿ ಕುಟುಂಬಸ್ಥರಿಗೆ ರ್‍ಯಾಪಿಡ್ ಪರೀಕ್ಷೆ ಮಾಡಿಸಿದರು.

ಬಿಸಿಎಮ್ ವಸತಿ ನಿಲಯದಲ್ಲಿ ನಾಳೆಯಿಂದ ಕೋವಿಡ್ ಕೇರ್ ಸೆಂಟರ್ ಮಾಡುವಂತೆ ಸೂಚಿಸಿದರು.

ಗ್ರಾಮದಲ್ಲಿ ಕರೆಂಟ್ ಚಾಲಿತ ಚಿತಾಗಾರ ನಿರ್ಮಿಸುವಂತೆ ಗ್ರಾಮಸ್ಥರು ಮನವಿ ಮಾಡಿದರು.

About nagaraj

Check Also

20 ನೇ ಕಲ್ಯಾಣ ಪರ್ವ ಕ್ಷಣಗಣನೆ ಆರಂಭ

ಲೇಖಕರು – ಸಂಗಮೇಶ ಎನ್ ಜವಾದಿ. ಪತ್ರಕರ್ತ, ಪ್ರಗತಿಪರ ಚಿಂತಕರು. ಬೀದರ ಜಿಲ್ಲೆ. ವಿಶ್ವ ಗುರು ಬಸವಣ್ಣನವರ ನೇತೃತ್ವದಲ್ಲಿ ಅಂದು …

ಕಿತ್ತೂರು ಚೆನ್ನಮ್ಮನ ಜ್ಯೋತಿಯಾತ್ರೆಯ ವೇಳಾಪಟ್ಟಿ

ಚನ್ನಮ್ಮನ ಕಿತ್ತೂರು : ಕಿತ್ತೂರು ಉತ್ಸವದ ಅಂಗವಾಗಿ ರಾಣಿ ಚನ್ನಮ್ಮ ವಿಜಯ ಜ್ಯೋತಿ‌ ಯಾತ್ರೆಯು ಅಕ್ಟೋಬರ್ 18 ರಿಂದ ಅಕ್ಟೋಬರ್ …

ವೈದ್ದಿಕರ ಕುತಂತ್ರದಿಂದ ಲಿಂಗಾಯತ ಧರ್ಮದ ಹೋರಾಟಕ್ಕೆ ಹಿನ್ನಡೆ

ಲಿಂಗಾಯತ ಕ್ರಾಂತಿ: ಲಿಂಗಾಯತ ಧರ್ಮ ಉದಯವಾಗಿದ್ದು 12 ಶತಮಾನದ ಆರಂಭದಲ್ಲಿ ಎಂಬುವುದು ಜಗತ್ತಿನ ಶ್ರೇಷ್ಠ ತತ್ವಜ್ಞಾನಿ, ಸಮಾನತೆಯ ಪ್ರತಿಪಾಧಕ, ಲಿಂಗಬೇದವನ್ನು …

ಡಾ. ಎಂ.ಬಿ ಪಾಟೀಲ ಕರ್ನಾಟಕದ ಮುಂದಿನ ಮುಖ್ಯಮಂತ್ರಿಯಾಗಲಿ

ನೇಗಿನಹಾಳ : ನಾಡಿನ ನೆಲ, ಜಲ, ಶಿಕ್ಷಣ ಹಾಗೂ ಜನಸಾಮಾನ್ಯರ ಜೀವನೋಪಾಯಕ್ಕಾಗಿ ಹತ್ತಾರು ಯೋಜನೆಗಳನ್ನು ಅನುಷ್ಠಾನಗೊಳಿಸಿ ವಿಜಯಪುರ ಜಿಲ್ಲೆಯ ಬೆಳಕಾಗಿರುವ …

ಕರ್ನಾಟಕದ ಭವಿಷ್ಯದ ಮುಖ್ಯಮಂತ್ರಿ ಶ್ರೀ ಡಾ. ಎಂ.ಬಿ ಪಾಟೀಲರ ಜನ್ಮದಿನ

ಲಿಂಗಾಯತ ಕ್ರಾಂತಿ: ಲಿಂಗಾಯತರ ಪ್ರಶ್ನಾತೀತ ನಾಯಕ, ಕರ್ನಾಟಕದ ಭವಿಷ್ಯದ ಮುಖ್ಯಮಂತ್ರಿಗಳು, ನೇರ ನಡೆ-ನುಡಿಯ ಲಿಂಗಾಯತ ಕ್ರಾಂತಿ ಪತ್ರಿಕೆಯ ಮಾರ್ಗದರ್ಶಕರಾದ ಸನ್ಮಾನ್ಯಶ್ರೀ …

ಹಸಿರುಕ್ರಾಂತಿ ಪತ್ರಿಕೆಯ ಸಂಸ್ಥಾಪಕ ಶ್ರೀ ಕಲ್ಯಾಣರಾವ್ ಜಿ ಮುಚಳಂಬಿ ಲಿಂಗೈಕ್ಯ

ಬೆಳಗಾವಿ: ರೈತ ಚಳವಳಿಗಳಿಗಳ ಮುಂಚೂಣಿ ನಾಯಕ, ಹಸಿರು ಕ್ರಾಂತಿ ಪತ್ರಿಕೆಯ ಸಂಸ್ಥಾಪಕ ಸಂಪಾದಕ ಕಲ್ಯಾಣರಾವ್ ಗುರಬಸಪ್ಪ ಮುಚಳಂಬಿಯವರು ಅವರು ಬೆಳಗಾವಿ …

ನೂತನ ಸಂಸತ್ ಭವನಕ್ಕೆ ಅನುಭವ ಮಂಟಪ ಎಂದು ಹೆಸರಿಡಲು ನಿಜಗುಣಾನಂದ ಸ್ವಾಮೀಜಿ ಒತ್ತಾಯ

ಬೈಲೂರು: ದೆಹಲಿಯಲ್ಲಿ ನೂತನವಾಗಿ ನಿರ್ಮಿಸುತ್ತಿರುವ ಸಂಸತ್ ಭವನಕ್ಕೆ “ಅನುಭವ ಮಂಟಪ” ಎಂದು ನಾಮಕರಣ ಮಾಡಬೇಕು ಎಂದು ಬೈಲೂರು ನಿಷ್ಕಲ ಮಂಟಪದ …

ಅಕ್ಟೋಬರ್ 3ರಂದು “ಶಿವಬಸವ ಕಾರುಣ್ಯ” ದ ಗುರು ಪ್ರವೇಶ

ಲಿಂಗಾಯತ ಕ್ರಾಂತಿ: ಉತ್ತರಕನ್ನಡ ಜಿಲ್ಲೆ ಹಳಿಯಾಳದ ಅಂಗಡಿ ಕುಟುಂಬದ ನೂತನ ಮನೆ “ಶಿವಬಸವ ಗುರುಕಾರುಣ್ಯ” ದ ಗುರು ಪ್ರವೇಶವು ಅಕ್ಟೋಬರ್ …

ಅಕ್ಕನ ಸಮರ್ಪಣಾ ಭಾವ

ಭಾರತೀಯ ಭಕ್ತಿ ಸಾಹಿತ್ಯದ ಚರಿತ್ರೆಯಲ್ಲಿ ಅಕ್ಕಮಹಾದೇವಿ ಒಬ್ಬ ವಿಶಿಷ್ಟ ಸಾಧಕಿ, ಯೋಗಿಣಿಯಾಗಿ ಕಂಡುಬರುತ್ತಾಳೆ. ಆಕೆಯ ಪ್ರೀತಿ ಪ್ರೇಮ ವಿನೂತನ ವಿಸ್ಮಯದ …

ಪ್ರಭು ಚನ್ನಬಸವ ಸ್ವಾಮೀಜಿ ವಿರಚಿತ ಮಹಾತ್ಮರ ಚರಿತಾಮೃತ ಗ್ರಂಥ ಲೋಕಾರ್ಪಣೆ

ಬೆಂಗಳೂರು: ಬೆಳಗಾವಿ ಜಿಲ್ಲೆಯ ಅಥಣಿಯ ಶ್ರೀ ಮೋಟಗಿ ಮಠ ಬೆಂಗಳೂರಿನಲ್ಲಿ ಆಯೋಜಿಸಿದ್ದ ಶ್ರೀ ಪ್ರಭು ಚನ್ನಬಸವ ಸ್ವಾಮೀಜಿ (ಅಥಣೀಶ) ವಿರಚಿತ …

ರಂಭಾಪುರಿ ಶ್ರೀಗಳು ಢೋಂಗಿತನ ಬಿಡಲಿ

ತಮ್ಮ ಸ್ವಾರ್ಥಕ್ಕೆ ಪಂಚಪೀಠಗಳನ್ನು ಒಡೆದು ಆಳುವ ನೀತಿ ಅನುಸರಿಸುತ್ತಿರುವ ಬಾಳೆಹೊನ್ನೂರು ಶ್ರೀ ರಂಭಾಪುರಿ ಜಗದ್ಗುರು ವೀರಸೋಮೇಶ್ವರ ಶಿವಾಚಾರ್ಯ ಭಗವತ್ಪಾದರು ಬೇರೆಯವರನ್ನು …

“ವೇದಕ್ಕೆ ಒರೆಯ ಕಟ್ಟುವೆ” – ಕೃತಿ ಲೋಕಾರ್ಪಣೆ

ಲಿಂಗಾಯತರಿಗೆ ಲಿಂಗಾಯತ ಧರ್ಮದ ಇತಿಹಾಸವೇ ಗೊತ್ತಿಲ್ಲದಿರುವುದು ದೊಡ್ಡ ದುರಂತ ಲಿಂಗಾಯತ ಧರ್ಮೀಯರು ವೈದಿಕ ಆಚರಣೆಯ ಸೆಳೆತಕ್ಕೆ ಸಿಲುಕಿಕೊಂಡಿದ್ದಾರೆ. ಡಾ.ಜೆ.ಎಸ್.ಪಾಟೀಲರ ” …

“ಲಿಂಗಾನಂದರ ವಚನಧರ್ಮ ಚಳುವಳಿಗೆ” ಡಾಕ್ಟರೇಟ್ ಪದವಿ

ಲಿಂಗಾಯತ ಕ್ರಾಂತಿ : ಸುಮಾರು 50 ವರ್ಷಗಳಾಚೆಯ ನೈಜ ಬಸವತತ್ವ ಪ್ರಸಾರ, ಶರಣಧರ್ಮದ ವೈಚಾರಿಕ ಚಿಂತನೆಗಳನ್ನು ಹಳ್ಳಿಗೆ ಏಕರಾತ್ರಿ ಪಟ್ಟಣಕ್ಕೆ …

“ಅವಕಾಶ ವಂಚಿತರಿಗೆ ಬೆಳಕಾದ ಸಜ್ಜನ ರಾಜಕಾರಣಿ ಸಿದ್ದಪ್ಪ ಕಂಬಳಿಯವರು”

ರಾಜಕೀಯ ಇತಿಹಾಸದಲ್ಲಿ ಮೈಲಿಗಲ್ಲು ಸಾಧಿಸಿದ ಕರ್ನಾಟಕ ಮಹಾಪುರುಷ ಶರಣ ಸಿದ್ದಪ್ಪ ಕಂಬಳಿಯವರು. ಶಾಲಾ ಕಾಲೇಜುಗಳ ತೊರೆದು ಕೋರ್ಟ್ ಕಛೇರಿ ಬಹಿಷ್ಕಾರ …

ಸೆಪ್ಟೆಂಬರ್ 25ರಂದು ಮಹಾತ್ಮರ ಚರಿತಾಮೃತ ಗ್ರಂಥ ಬಿಡುಗಡೆ: ಪೂಜ್ಯ ನಿಜಗುಣಾನಂದ ಶ್ರೀಗಳು

ಬೆಳಗಾವಿ: ಭಾರತ ಬಹುತ್ವದ ಭಾರತಕ್ಕೆ ಧಾರ್ಮಿಕ ಗ್ರಂಥವಾಗಿ ಮಹಾತ್ಮರ ಚರಿತಾಮೃತ ಅಥಣಿಯ ಪ್ರಭು ಚನ್ನಬಸವ ಸ್ವಾಮೀಜಿ ಗ್ರಂಥ ರಚಿಸಿದ್ದಾರೆ ಎಂದು …

Leave a Reply

Your email address will not be published.