Home / featured / ರಂಭಾಪುರಿ ಶ್ರೀಗಳು ಢೋಂಗಿತನ ಬಿಡಲಿ

ರಂಭಾಪುರಿ ಶ್ರೀಗಳು ಢೋಂಗಿತನ ಬಿಡಲಿ

ತಮ್ಮ ಸ್ವಾರ್ಥಕ್ಕೆ ಪಂಚಪೀಠಗಳನ್ನು ಒಡೆದು ಆಳುವ ನೀತಿ ಅನುಸರಿಸುತ್ತಿರುವ ಬಾಳೆಹೊನ್ನೂರು ಶ್ರೀ ರಂಭಾಪುರಿ ಜಗದ್ಗುರು ವೀರಸೋಮೇಶ್ವರ ಶಿವಾಚಾರ್ಯ ಭಗವತ್ಪಾದರು ಬೇರೆಯವರನ್ನು ಟೀಕಿಸುವ ಮೊದಲು ಆತ್ಮಾವಲೋಕನ ಮಾಡಿಕೊಳ್ಳಬೇಕು.

ಬೆಂಗಳೂರಿನ ವಿಜಯನಗರದ ಬಸವ ಸುಜ್ಞಾನ ಮಂಟಪದಲ್ಲಿ ಮಂಗಳವಾರ (14.9.2021) ವೀರಶೈವ-ಲಿಂಗಾಯತ ಸಂಘಟನಾ ವೇದಿಕೆ ಏರ್ಪಡಿಸಿದ್ದ ಶ್ರೀ ವೀರಭದ್ರೇಶ್ವರ ಜಯಂತ್ಯುತ್ಸವದಲ್ಲಿ ಆಶೀರ್ವಚನ ನೀಡುವಾಗ ಜಗದ್ಗುರುಗಳು ಆಡಿರುವ ಮಾತುಗಳು ನಿಜಕ್ಕೂ ವಿಷಾದನೀಯ.

ಇವತ್ತು ರಂಭಾಪುರಿ ಶ್ರೀಗಳು ತಮ್ಮ ಶಾಖಾ ಮಠಗಳನ್ನೇ ಒಡೆದು ಆಳುತ್ತಿರುವ ವಿಚಾರ ಜಗಜ್ಜಾಹೀರಾಗಿದೆ. ಹೀಗಾಗಿ ಇವತ್ತು ಯಾರೂ ಇವರ ಹತ್ತಿರಕ್ಕೆ ಹೋಗಲು ಹಾತೊರೆಯುತ್ತಿಲ್ಲ. ಬದಲಾಗಿ ದೂರವಾಗುತ್ತಿದ್ದಾರೆ. ಇದಕ್ಕೆ ಸ್ಪಷ್ಟ ಉದಾಹರಣೆ ಇತ್ತೀಚೆಗಿನ ಉಜ್ಜಯಿನಿ ಪೀಠದ ಪೀಠಾಧಿಪತಿ ನೇಮಕದ ಪ್ರಕರಣವೇ ಸಾಕ್ಷಿ.

ಈ ಪ್ರಕರಣದಲ್ಲಿ ರಂಭಾಪುರಿ ಶ್ರೀಗಳ ವಿರುದ್ಧ ಬೆಂಗಳೂರಿನಲ್ಲಿ 100ಕ್ಕೂ ಹೆಚ್ಚು ಜನ ಸ್ವಾಮೀಜಿಗಳು ಹಾಗೂ ಕಲ್ಬುರ್ಗಿ ಯಲ್ಲಿ 350ಕ್ಕೂ ಹೆಚ್ಚು ಜನ ಸ್ವಾಮೀಜಿಗಳು ಕಠಿಣ ಠರಾವು ಪಾಸು ಮಾಡಿದ್ದಾರೆ. ಭವಿಷ್ಯದಲ್ಲಿ ಇವರ ಜೊತೆ ಮುನ್ನಡೆಯದಂತೆ ತೀರ್ಮಾನಿಸಿದ್ದಾರೆ.

ಈಗಾಗಲೇ ರಂಭಾಪುರಿ ಶ್ರೀಗಳು ಉತ್ತರ ಕರ್ನಾಟಕದ ಸ್ವಾಮಿಗಳು ಮತ್ತು ಮೈಸೂರು ಭಾಗದ ಸ್ವಾಮಿಗಳು ಎಂದು ವಿಭಜನೆ ಮಾಡುವ ಮೂಲಕ ತಮ್ಮ ಬೇಳೆ ಬೇಯಿಸಿಕೊಳ್ಳುವ ಕುಟಿಲ ಪ್ರಯತ್ನ ಮಾಡುತ್ತಿದ್ದಾರೆ.

ಸ್ವಾಮೀಜಿಗಳ ಕರ್ತವ್ಯ ಧರ್ಮ ರಕ್ಷಣೆ. ಆದರೆ, ಇವರೇ ಧರ್ಮವನ್ನು ಒಡೆಯುವ ಕೆಲಸ ಮಾಡುತ್ತಿದ್ದಾರೆ. ಈ ಕಾರಣಕ್ಕಾಗಿಯೇ ರಂಭಾಪುರಿ ಶ್ರೀಗಳ ಮಠದ ಏಳ್ಗೆಗೆ ಹಗಲಿರುಳೂ ತನು-ಮನ-ಧನಗಳ ಧಾರೆಯೆರೆದು ದುಡಿದ ಖಾಸಾ ಭಕ್ತರು ಇವರಿಂದ ದೂರವಾಗಿದ್ದಾರೆ.

ಇವರ ಅಂತರಂಗದಲ್ಲಿ ಎಷ್ಟೆಲ್ಲಾ ಸಂಕುಚಿತತೆ ತುಂಬಿದೆ ಎಂಬುದನ್ನು ಇವರನ್ನು ಹತ್ತಿರದಿಂದ ಬಲ್ಲವರಿಗಷ್ಟೇ ಗೊತ್ತು. ಆದ್ದರಿಂದ, ವೇದಿಕೆ ಏರಿದಾಕ್ಷಣ ತಮ್ಮ ಹಳಸಲು ಹೇಳಿಕೆಗಳನ್ನು ಪದೇ ಪದೇ ಉದ್ಧರಿಸುವ ಇವರ ಮನಸ್ಥಿತಿಗೆ ಧಿಕ್ಕಾರವಿರಲಿ.

ತಮ್ಮ ಸವಕಲು ಧೋರಣೆಯ ವರ್ತನೆ ಬಿಟ್ಟು ಶಾಖಾ ಮಠಾಧೀಶರ ಏಳ್ಗೆ ಹಾಗೂ ಸಮಾಜದ ಬಾಂಧವರು, ಭಕ್ತರು ಶಿಕ್ಷಣ, ಉದ್ಯೋಗ ಮತ್ತು ಸಾಮಾಜಿಕವಾಗಿ ಉನ್ನತಿ ಹೊಂದಲು ಏನು ಬೇಕೊ ಆ ಕೆಲಸ ಮಾಡಲು ಮೊದಲು ಮುಂದಾಗಲಿ.

About nagaraj

Check Also

20 ನೇ ಕಲ್ಯಾಣ ಪರ್ವ ಕ್ಷಣಗಣನೆ ಆರಂಭ

ಲೇಖಕರು – ಸಂಗಮೇಶ ಎನ್ ಜವಾದಿ. ಪತ್ರಕರ್ತ, ಪ್ರಗತಿಪರ ಚಿಂತಕರು. ಬೀದರ ಜಿಲ್ಲೆ. ವಿಶ್ವ ಗುರು ಬಸವಣ್ಣನವರ ನೇತೃತ್ವದಲ್ಲಿ ಅಂದು …

ಕಿತ್ತೂರು ಚೆನ್ನಮ್ಮನ ಜ್ಯೋತಿಯಾತ್ರೆಯ ವೇಳಾಪಟ್ಟಿ

ಚನ್ನಮ್ಮನ ಕಿತ್ತೂರು : ಕಿತ್ತೂರು ಉತ್ಸವದ ಅಂಗವಾಗಿ ರಾಣಿ ಚನ್ನಮ್ಮ ವಿಜಯ ಜ್ಯೋತಿ‌ ಯಾತ್ರೆಯು ಅಕ್ಟೋಬರ್ 18 ರಿಂದ ಅಕ್ಟೋಬರ್ …

ವೈದ್ದಿಕರ ಕುತಂತ್ರದಿಂದ ಲಿಂಗಾಯತ ಧರ್ಮದ ಹೋರಾಟಕ್ಕೆ ಹಿನ್ನಡೆ

ಲಿಂಗಾಯತ ಕ್ರಾಂತಿ: ಲಿಂಗಾಯತ ಧರ್ಮ ಉದಯವಾಗಿದ್ದು 12 ಶತಮಾನದ ಆರಂಭದಲ್ಲಿ ಎಂಬುವುದು ಜಗತ್ತಿನ ಶ್ರೇಷ್ಠ ತತ್ವಜ್ಞಾನಿ, ಸಮಾನತೆಯ ಪ್ರತಿಪಾಧಕ, ಲಿಂಗಬೇದವನ್ನು …

ಡಾ. ಎಂ.ಬಿ ಪಾಟೀಲ ಕರ್ನಾಟಕದ ಮುಂದಿನ ಮುಖ್ಯಮಂತ್ರಿಯಾಗಲಿ

ನೇಗಿನಹಾಳ : ನಾಡಿನ ನೆಲ, ಜಲ, ಶಿಕ್ಷಣ ಹಾಗೂ ಜನಸಾಮಾನ್ಯರ ಜೀವನೋಪಾಯಕ್ಕಾಗಿ ಹತ್ತಾರು ಯೋಜನೆಗಳನ್ನು ಅನುಷ್ಠಾನಗೊಳಿಸಿ ವಿಜಯಪುರ ಜಿಲ್ಲೆಯ ಬೆಳಕಾಗಿರುವ …

ಕರ್ನಾಟಕದ ಭವಿಷ್ಯದ ಮುಖ್ಯಮಂತ್ರಿ ಶ್ರೀ ಡಾ. ಎಂ.ಬಿ ಪಾಟೀಲರ ಜನ್ಮದಿನ

ಲಿಂಗಾಯತ ಕ್ರಾಂತಿ: ಲಿಂಗಾಯತರ ಪ್ರಶ್ನಾತೀತ ನಾಯಕ, ಕರ್ನಾಟಕದ ಭವಿಷ್ಯದ ಮುಖ್ಯಮಂತ್ರಿಗಳು, ನೇರ ನಡೆ-ನುಡಿಯ ಲಿಂಗಾಯತ ಕ್ರಾಂತಿ ಪತ್ರಿಕೆಯ ಮಾರ್ಗದರ್ಶಕರಾದ ಸನ್ಮಾನ್ಯಶ್ರೀ …

ಹಸಿರುಕ್ರಾಂತಿ ಪತ್ರಿಕೆಯ ಸಂಸ್ಥಾಪಕ ಶ್ರೀ ಕಲ್ಯಾಣರಾವ್ ಜಿ ಮುಚಳಂಬಿ ಲಿಂಗೈಕ್ಯ

ಬೆಳಗಾವಿ: ರೈತ ಚಳವಳಿಗಳಿಗಳ ಮುಂಚೂಣಿ ನಾಯಕ, ಹಸಿರು ಕ್ರಾಂತಿ ಪತ್ರಿಕೆಯ ಸಂಸ್ಥಾಪಕ ಸಂಪಾದಕ ಕಲ್ಯಾಣರಾವ್ ಗುರಬಸಪ್ಪ ಮುಚಳಂಬಿಯವರು ಅವರು ಬೆಳಗಾವಿ …

ನೂತನ ಸಂಸತ್ ಭವನಕ್ಕೆ ಅನುಭವ ಮಂಟಪ ಎಂದು ಹೆಸರಿಡಲು ನಿಜಗುಣಾನಂದ ಸ್ವಾಮೀಜಿ ಒತ್ತಾಯ

ಬೈಲೂರು: ದೆಹಲಿಯಲ್ಲಿ ನೂತನವಾಗಿ ನಿರ್ಮಿಸುತ್ತಿರುವ ಸಂಸತ್ ಭವನಕ್ಕೆ “ಅನುಭವ ಮಂಟಪ” ಎಂದು ನಾಮಕರಣ ಮಾಡಬೇಕು ಎಂದು ಬೈಲೂರು ನಿಷ್ಕಲ ಮಂಟಪದ …

ಅಕ್ಟೋಬರ್ 3ರಂದು “ಶಿವಬಸವ ಕಾರುಣ್ಯ” ದ ಗುರು ಪ್ರವೇಶ

ಲಿಂಗಾಯತ ಕ್ರಾಂತಿ: ಉತ್ತರಕನ್ನಡ ಜಿಲ್ಲೆ ಹಳಿಯಾಳದ ಅಂಗಡಿ ಕುಟುಂಬದ ನೂತನ ಮನೆ “ಶಿವಬಸವ ಗುರುಕಾರುಣ್ಯ” ದ ಗುರು ಪ್ರವೇಶವು ಅಕ್ಟೋಬರ್ …

ಅಕ್ಕನ ಸಮರ್ಪಣಾ ಭಾವ

ಭಾರತೀಯ ಭಕ್ತಿ ಸಾಹಿತ್ಯದ ಚರಿತ್ರೆಯಲ್ಲಿ ಅಕ್ಕಮಹಾದೇವಿ ಒಬ್ಬ ವಿಶಿಷ್ಟ ಸಾಧಕಿ, ಯೋಗಿಣಿಯಾಗಿ ಕಂಡುಬರುತ್ತಾಳೆ. ಆಕೆಯ ಪ್ರೀತಿ ಪ್ರೇಮ ವಿನೂತನ ವಿಸ್ಮಯದ …

ಪ್ರಭು ಚನ್ನಬಸವ ಸ್ವಾಮೀಜಿ ವಿರಚಿತ ಮಹಾತ್ಮರ ಚರಿತಾಮೃತ ಗ್ರಂಥ ಲೋಕಾರ್ಪಣೆ

ಬೆಂಗಳೂರು: ಬೆಳಗಾವಿ ಜಿಲ್ಲೆಯ ಅಥಣಿಯ ಶ್ರೀ ಮೋಟಗಿ ಮಠ ಬೆಂಗಳೂರಿನಲ್ಲಿ ಆಯೋಜಿಸಿದ್ದ ಶ್ರೀ ಪ್ರಭು ಚನ್ನಬಸವ ಸ್ವಾಮೀಜಿ (ಅಥಣೀಶ) ವಿರಚಿತ …

“ವೇದಕ್ಕೆ ಒರೆಯ ಕಟ್ಟುವೆ” – ಕೃತಿ ಲೋಕಾರ್ಪಣೆ

ಲಿಂಗಾಯತರಿಗೆ ಲಿಂಗಾಯತ ಧರ್ಮದ ಇತಿಹಾಸವೇ ಗೊತ್ತಿಲ್ಲದಿರುವುದು ದೊಡ್ಡ ದುರಂತ ಲಿಂಗಾಯತ ಧರ್ಮೀಯರು ವೈದಿಕ ಆಚರಣೆಯ ಸೆಳೆತಕ್ಕೆ ಸಿಲುಕಿಕೊಂಡಿದ್ದಾರೆ. ಡಾ.ಜೆ.ಎಸ್.ಪಾಟೀಲರ ” …

“ಲಿಂಗಾನಂದರ ವಚನಧರ್ಮ ಚಳುವಳಿಗೆ” ಡಾಕ್ಟರೇಟ್ ಪದವಿ

ಲಿಂಗಾಯತ ಕ್ರಾಂತಿ : ಸುಮಾರು 50 ವರ್ಷಗಳಾಚೆಯ ನೈಜ ಬಸವತತ್ವ ಪ್ರಸಾರ, ಶರಣಧರ್ಮದ ವೈಚಾರಿಕ ಚಿಂತನೆಗಳನ್ನು ಹಳ್ಳಿಗೆ ಏಕರಾತ್ರಿ ಪಟ್ಟಣಕ್ಕೆ …

“ಅವಕಾಶ ವಂಚಿತರಿಗೆ ಬೆಳಕಾದ ಸಜ್ಜನ ರಾಜಕಾರಣಿ ಸಿದ್ದಪ್ಪ ಕಂಬಳಿಯವರು”

ರಾಜಕೀಯ ಇತಿಹಾಸದಲ್ಲಿ ಮೈಲಿಗಲ್ಲು ಸಾಧಿಸಿದ ಕರ್ನಾಟಕ ಮಹಾಪುರುಷ ಶರಣ ಸಿದ್ದಪ್ಪ ಕಂಬಳಿಯವರು. ಶಾಲಾ ಕಾಲೇಜುಗಳ ತೊರೆದು ಕೋರ್ಟ್ ಕಛೇರಿ ಬಹಿಷ್ಕಾರ …

ಸೆಪ್ಟೆಂಬರ್ 25ರಂದು ಮಹಾತ್ಮರ ಚರಿತಾಮೃತ ಗ್ರಂಥ ಬಿಡುಗಡೆ: ಪೂಜ್ಯ ನಿಜಗುಣಾನಂದ ಶ್ರೀಗಳು

ಬೆಳಗಾವಿ: ಭಾರತ ಬಹುತ್ವದ ಭಾರತಕ್ಕೆ ಧಾರ್ಮಿಕ ಗ್ರಂಥವಾಗಿ ಮಹಾತ್ಮರ ಚರಿತಾಮೃತ ಅಥಣಿಯ ಪ್ರಭು ಚನ್ನಬಸವ ಸ್ವಾಮೀಜಿ ಗ್ರಂಥ ರಚಿಸಿದ್ದಾರೆ ಎಂದು …

“ನೊಬೆಲ್” ಎಂಬ ಮನುಕುಲದ ದ್ರುವತಾರೆ…🌟

ನೂರು ವರ್ಷಗಳ ಹಿಂದೆ ಒಬ್ಬ ಉದ್ಯಮಿ ಬೆಳಗಿನ ಕಾಫ಼ಿ ಸೇವಿಸುತ್ತ ಅಂದಿನ ದಿನಪತ್ರಿಕೆಯೊಂದನ್ನ ಕೈಗೆತ್ತಿಕೊಂಡು ಓದಲು ಪ್ರಾರಂಭಿಸುತ್ತಾನೆ. ಅದರಲ್ಲಿನ ಒಂದು …

Leave a Reply

Your email address will not be published.