Home / featured / ಕರ್ನಾಟಕದ ಭವಿಷ್ಯದ ಮುಖ್ಯಮಂತ್ರಿ ಶ್ರೀ ಡಾ. ಎಂ.ಬಿ ಪಾಟೀಲರ ಜನ್ಮದಿನ

ಕರ್ನಾಟಕದ ಭವಿಷ್ಯದ ಮುಖ್ಯಮಂತ್ರಿ ಶ್ರೀ ಡಾ. ಎಂ.ಬಿ ಪಾಟೀಲರ ಜನ್ಮದಿನ

ಲಿಂಗಾಯತ ಕ್ರಾಂತಿ: ಲಿಂಗಾಯತರ ಪ್ರಶ್ನಾತೀತ ನಾಯಕ, ಕರ್ನಾಟಕದ ಭವಿಷ್ಯದ ಮುಖ್ಯಮಂತ್ರಿಗಳು, ನೇರ ನಡೆ-ನುಡಿಯ ಲಿಂಗಾಯತ ಕ್ರಾಂತಿ ಪತ್ರಿಕೆಯ ಮಾರ್ಗದರ್ಶಕರಾದ ಸನ್ಮಾನ್ಯಶ್ರೀ ಡಾ. ಎಂ.ಬಿ.ಪಾಟೀಲ(ಮಲ್ಲನಗೌಡ ಬಸನಗೌಡ ಪಾಟೀಲ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು.

ಶ್ರೀಯುತರಿಗೆ ಸೃಷ್ಟಿಕರ್ತ ಪರಮಾತ್ಮನ ಆಶೀರ್ವಾದ ಧರ್ಮಗುರು ಬಸವಣ್ಣನವರ, ಬಸವಾದಿ ಶರಣರ, ಸಂತರ, ಮಹಾಂತರ ಮಾರ್ಗದರ್ಶನ ಸದಾಕಾಲವೂ ಇರಲೇಂದು ಕರ್ನಾಟಕದ ಸಮಸ್ತ ಜನತೆಯ ಪರವಾಗಿ ಬೇಡಿಕೊಳ್ಳುತ್ತೇವೆ.

ಸನ್ಮಾನ್ಯಶ್ರೀ ಡಾ. ಎಂ.ಬಿ.ಪಾಟೀಲ(ಮಲ್ಲನಗೌಡ ಬಸನಗೌಡ ಪಾಟೀಲ)ರು ಬಬಲೇಶ್ವರ ವಿಧಾನ ಸಭಾ ಕ್ಷೇತ್ರದ ಹಾಲಿ ಶಾಸಕರು. ಮಾಜಿ ಗೃಹ ಮತ್ತು ಜಲಸಂಪನ್ಮೂಲ ಸಚಿವರು, ವಿಜಯಪುರದ ಮಾಜಿ ಸಂಸದರು, ಬಿ.ಎಲ್.ಡಿ.ಈ.ಸಂಸ್ಥೆಯ ಅಧ್ಯಕ್ಷರು, ಉದ್ಯಮಿಗಳು, ಲಿಂಗಾಯತ ಧರ್ಮೀಯರ ಪಕ್ಷಾತೀತ ನಾಯಕರಾಗಿದ್ದು ಇವರ ಪರಿಚಯವನ್ನು ತಪ್ಪದೇ ತಿಳಿಯಿರಿ.

ಸನ್ಮಾನ್ಯ ಎಂ.ಬಿ ಪಾಟೀಲರು ವಿಜಯಪುರ ಜಿಲ್ಲೆಯ ತಿಕೋಟಾ ತಾಲ್ಲೂಕಿನ ತೊರವಿ ಗ್ರಾಮದಲ್ಲಿ 7ನೇ ಅಕ್ಟೋಬರ 1964ರಂದು ತಂದೆ ಬಸನಗೌಡರು ತಾಯಿ ಕಮಲಾದೇವಿಯವರ ಉದರದಲ್ಲಿ ಜನಿಸಿದರು.
ಬೆಂಗಳೂರಿನ ಪೂರ್ಣಪ್ರಜ್ಞ ಶಾಲೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣವನ್ನು ವಿಜಯಪುರದ ದರಬಾರ ಪ್ರೌಢ ಶಾಲೆಯಲ್ಲಿ ಪಡೆದಿದ್ದಾರೆ.
ಸಿವಿಲ್ ಇಂಜಿನಿಯರಿಂಗ್ ಪದವಿಯನ್ನು ವಚನ ಪಿತಾಮಹ ಡಾ.ಫ.ಗು.ಹಳಕಟ್ಟಿ ತಾಂತ್ರಿಕ ಹಾಗೂ ಅಭಿಯಾಂತ್ರಿಕ ಮಹಾವಿದ್ಯಾಲಯ, ವಿಜಯಪುರದಲ್ಲಿ ಪಡೆದಿದ್ದಾರೆ.

ಶ್ರೀಯುತರ ಧರ್ಮಪತ್ನಿ ಆಶಾ ಪಾಟೀಲಯವರನ್ನು ಮದುವೆಯಾಗಿದ್ದು ಅವರಿಗೆ ಬಸನಗೌಡ ಹಾಗೂ ಧ್ರುವ ಎಂಬ ಇಬ್ಬರು ಮಕ್ಕಳಿದ್ದು ವಿಜಯಪುರ ನಗರದಲ್ಲಿ ವಾಸವಾಗಿದ್ದಾರೆ.

ಮಕ್ಕಳಿಗೆ ಧಾರ್ಮಿಕ, ಶೈಕ್ಷಣಿಕ,ರಾಜಕೀಯ, ಪರಿಸರ ಕಾಳಜಿಯ ಹಲವಾರು ಯೋಜನೆಗಳಲ್ಲಿ ಮುಂದಾಳತ್ವ ವಹಿಸಿ ಸಮಾಜಸೇವೆಯಲ್ಲಿ ತಮ್ಮ ಸುಖ-ಸಂತೋಷ ಕಾಣಬೇಕೆಂಬ ಧ್ಯೇಯವನ್ನು ಕಲಿಸಿದ್ದಾರೆ. ಇಂದು ಸನ್ಮಾನ್ಯಶ್ರೀ ಡಾ. ಎಂ ಬಿ ಪಾಟೀಲರು ಮಾಡಿದ ಐತಿಹಾಸಿಕ ನೀರಾವರಿ ಯೋಜನೆಗಳು, ಅರಣ್ಯ ಅಭಿವೃದ್ಧಿಗೆ ಕೋಟಿವೃಕ್ಷ ಅಭಿಯಾನ, ಲಿಂಗಾಯತ ಸ್ವತಂತ್ರ ಧರ್ಮದ ಕುರಿತು ಮಾಡಿದ ಹೋರಾಟದಲ್ಲಿ ಮುಖಂಡತ್ವ ವಹಿಸಿಕೊಂಡಿದ್ದರಿಂದ ಅವರ ಹೆಸರು ಜಗತ್ತಿನಾದ್ಯಂತ ಜನಮನ್ನಣೆ ಗಳಿಸಿತು.

1991ರಲ್ಲಿ ತಂದೆ ಲಿಂಗೈಕ್ಯ ಬಿ.ಎಂ.ಪಾಟೀಲರು ನಿಧನರಾದಾಗ, ತಂದೆಯ ತೆರವಾದ ಶಾಸಕ ಸ್ಥಾನಕ್ಕೆ ತಮ್ಮ 27ನೇ ವಯಸ್ಸಿನಲ್ಲಿ ತಿಕೋಟಾ ಕ್ಷೇತ್ರದ ಉಪಚುನಾವಣೆಯಲ್ಲಿ ಎಂ.ಬಿ.ಪಾಟೀಲರು ಸ್ಪರ್ಧಿಸಿ ಪ್ರಥಮ ಬಾರಿಗೆ ಬಾರಿಗೆ ವಿಧಾನಸಭೆ ಪ್ರವೇಶ ಮಾಡಿದರು.

1994 ಮತ್ತು 1999ರಲ್ಲಿ ನಡೆದ ಚುನಾವಣೆಯಲ್ಲಿ ಶಿವಾನಂದ ಪಾಟೀಲರ ವಿರುದ್ಧ ಸೋತರು. ನಂತರ ವಿಜಯಪುರ ಲೋಕಸಭಾ ಕ್ಷೇತ್ರದಿಂದ 1998ರಲ್ಲಿ ಕಾಂಗ್ರೆಸ್‌ನಿಂದ ಲೋಕಸಭೆ ಆಯ್ಕೆಯಾಗಿದ್ದರು.
2004ರಲ್ಲಿ ತಿಕೋಟಾ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಎರಡನೇ ಬಾರಿಗೆ ವಿಧಾನಸಭೆ ಪ್ರವೇಶ.

2008, 2013ಮತ್ತು 2018ರಲ್ಲಿ ವಿಜಯಪುರ ಜಿಲ್ಲೆಯ ಬಬಲೇಶ್ವರ ವಿಧಾನ ಸಭಾ ಕ್ಷೇತ್ರದಿಂದ ಹ್ಯಾಟ್ರಿಕ್ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ.

2013ರಲ್ಲಿ ಕರ್ನಾಟಕದ ದಿಮಂತ ನಾಯಕ, ಮತ್ತೊಬ್ಬ ದೇವರಾಜ್ ಅರಸ್ ಎಂದೇ ಖ್ಯಾತಿಯನ್ನು ಹೊಂದಿದ್ದ ಸನ್ಮಾನ್ಯಶ್ರೀ ಸಿದ್ದರಾಮಯ್ಯನವರ
ಸಂಪುಟದಲ್ಲಿ ಜಲಸಂಪನ್ಮೂಲ ಸಚಿವರಾಗಿ ಸುಮಾರು 55,000 ಕೋಟಿ ರೂಗಳಷ್ಟು ನೀರಾವರಿ ಕಾಮಗಾರಿ ಮಾಡಿ ಬರಡು(ಬರದ) ನಾಡು ಎಂದೇ ಖ್ಯಾತಿ ಪಡೆದಿದ್ದ ವಿಜಯಪುರ ಜಿಲ್ಲೆಗೆ ಹಲವಾರು ಬೃಹತ್ ಕಾಲುವೆಗಳ ನಿರ್ಮಿಸಿ ನೀರು ಹರಿಸಿದ ಕೀರ್ತಿ ಡಾ. ಎಂ ಬಿ ಪಾಟೀಲರದ್ದು. ಆಧುನಿಕ ಭಗೀರಥ ಎಂದೇ ಬಿರುದಾಂಕಿತನಾದರು.

ಪೂಜ್ಯಶ್ರೀ ಸಿದ್ದೇಶ್ವರ ಮಹಾಸ್ವಾಮಿಗಳು ವಿಜಯಪುರ ಜಿಲ್ಲೆಯ ನೀರಾವರಿ ಯೋಜನೆಗಳನ್ನು ಕಂಡು ನೀರು ಅಂದ್ರೆ ಎಂ.ಬಿ ಪಾಟೀಲರು, ಎಂ.ಬಿ ಪಾಟೀಲರು ಅಂದ್ರೆ ನೀರು ಎಂದು ಹಾಡಿ ಹೊಗಳಿದರು.

2018ರಲ್ಲಿ ಎಚ್.ಡಿ.ಕುಮಾರಸ್ವಾಮಿ ಸಂಪುಟದಲ್ಲಿ ಗೃಹ ಸಚಿವರಾಗಿದ್ದರು. ಈ ಸಂದರ್ಭದಲ್ಲಿ ಪೋಲಿಸ್ ಇಲಾಖೆಯ ಸಿಬ್ಬಂದಿಯ ವೇತನ ನವೀಕರಣದ ಸುತ್ತೋಲೆ ಹಲವಾರು ವರ್ಷಗಳಿಂದ ನೆನೆಗುದಿ ಬಿದಿದ್ದನ್ನು ಮರುಪರಿಶೀಲನೆ ಮಾಡಿ ವೇತನ ಹೆಚ್ಚಿಸಿಲು ಸಹಕಾರಿಯಾದರು.

2018ರಲ್ಲಿ ಇವರ ರಾಜಕೀಯ ಸೇವೆಯನ್ನು ಗುರುತಿಸಿ ಕಾಂಗ್ರೆಸ್ ಪಕ್ಷ ಎಐಸಿಸಿ, ಕೆಪಿಸಿಸಿ ಸಮನ್ವಯ ಸಮಿತಿ ಸದಸ್ಯರನ್ನಾಗಿ ನೇಮಿಸಿದರು.

1990ರಿಂದ 2005ರ ವರೆಗೆ ಬಿ.ಎಲ್‌.ಡಿ.ಇ. ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಹುದ್ದೆ, 2005ರಿಂದ ಬಿ.ಎಲ್‌.ಡಿ.ಇ. ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ಲಿಂಗಾಯತ ಧರ್ಮದ ತಾಯಿಬೇರಾದ ವಚನ ಸಾಹಿತ್ಯ ರಕ್ಷಣೆ ಹಾಗೂ ಲಿಂ. ಫ.ಗು ಹಳಕಟ್ಟಿಯವರ ಶಿವಾನುಭವ ಪತ್ರಿಕೆಯ ಮರು ವರದಿಗಳನ್ನು ಮುದ್ರಿಸಲು ಸರಕಾರದ ಬೆನ್ನುಹತ್ತಿದ್ದಾರೆ. ಲಿಂಗಾಯತ ಧರ್ಮದ ಹೋರಾಟದಲ್ಲಿ ಜವಾಬ್ದಾರಿಯುತವಾಗಿ ನೆರವೇರಿಸಿದರು. ಜಾಗತಿಕ ಲಿಂಗಾಯತ ಮಹಾಸಭೆಗೆ ಭದ್ರ ಬುನಾದಿ ಹಾಕಿ ಪೋಷಕರಾಗಿ ಬೆಳೆಸುತ್ತಿದ್ದಾರೆ. ಸದ್ಯ ಜಾಗತಿಕ ಲಿಂಗಾಯತ ಮಹಾಸಭೆ 10,000ಕ್ಕೂ ಅಧಿಕ ಸದಸ್ಯರನ್ನು ಹೊಂದಿ ಅಂತರರಾಷ್ಟ್ರೀಯ ಮಟ್ಟದಲ್ಲಿ ಒಂದು ಬೃಹತ್ ಲಿಂಗಾಯತ ಸಂಘಟನೆಯಾಗಿ ಹೊರಹೊಮ್ಮಿದೆ. ನಮ್ಮ ಲಿಂಗಾಯತ ಕ್ರಾಂತಿ ಪತ್ರಿಕೆಯಂತಹ ಹಲವಾರು ಮಾದ್ಯಮಗಳು ಸಮಾಜದ ಸಂಘಟನೆಯಲ್ಲಿ ಕಾರ್ಯನಿರ್ವಹಿಸುತ್ತಿವೆ.

ಇಂತಹ ಮಹಾನ್ ಚೇತನದ ಜನ್ಮದಿನಕ್ಕೆ ಮತ್ತೊಮ್ಮೆ ಹಾರ್ದಿಕ ಶುಭಾಶಯಗಳು.

About nagaraj

Check Also

20 ನೇ ಕಲ್ಯಾಣ ಪರ್ವ ಕ್ಷಣಗಣನೆ ಆರಂಭ

ಲೇಖಕರು – ಸಂಗಮೇಶ ಎನ್ ಜವಾದಿ. ಪತ್ರಕರ್ತ, ಪ್ರಗತಿಪರ ಚಿಂತಕರು. ಬೀದರ ಜಿಲ್ಲೆ. ವಿಶ್ವ ಗುರು ಬಸವಣ್ಣನವರ ನೇತೃತ್ವದಲ್ಲಿ ಅಂದು …

ಕಿತ್ತೂರು ಚೆನ್ನಮ್ಮನ ಜ್ಯೋತಿಯಾತ್ರೆಯ ವೇಳಾಪಟ್ಟಿ

ಚನ್ನಮ್ಮನ ಕಿತ್ತೂರು : ಕಿತ್ತೂರು ಉತ್ಸವದ ಅಂಗವಾಗಿ ರಾಣಿ ಚನ್ನಮ್ಮ ವಿಜಯ ಜ್ಯೋತಿ‌ ಯಾತ್ರೆಯು ಅಕ್ಟೋಬರ್ 18 ರಿಂದ ಅಕ್ಟೋಬರ್ …

ವೈದ್ದಿಕರ ಕುತಂತ್ರದಿಂದ ಲಿಂಗಾಯತ ಧರ್ಮದ ಹೋರಾಟಕ್ಕೆ ಹಿನ್ನಡೆ

ಲಿಂಗಾಯತ ಕ್ರಾಂತಿ: ಲಿಂಗಾಯತ ಧರ್ಮ ಉದಯವಾಗಿದ್ದು 12 ಶತಮಾನದ ಆರಂಭದಲ್ಲಿ ಎಂಬುವುದು ಜಗತ್ತಿನ ಶ್ರೇಷ್ಠ ತತ್ವಜ್ಞಾನಿ, ಸಮಾನತೆಯ ಪ್ರತಿಪಾಧಕ, ಲಿಂಗಬೇದವನ್ನು …

ಡಾ. ಎಂ.ಬಿ ಪಾಟೀಲ ಕರ್ನಾಟಕದ ಮುಂದಿನ ಮುಖ್ಯಮಂತ್ರಿಯಾಗಲಿ

ನೇಗಿನಹಾಳ : ನಾಡಿನ ನೆಲ, ಜಲ, ಶಿಕ್ಷಣ ಹಾಗೂ ಜನಸಾಮಾನ್ಯರ ಜೀವನೋಪಾಯಕ್ಕಾಗಿ ಹತ್ತಾರು ಯೋಜನೆಗಳನ್ನು ಅನುಷ್ಠಾನಗೊಳಿಸಿ ವಿಜಯಪುರ ಜಿಲ್ಲೆಯ ಬೆಳಕಾಗಿರುವ …

ಹಸಿರುಕ್ರಾಂತಿ ಪತ್ರಿಕೆಯ ಸಂಸ್ಥಾಪಕ ಶ್ರೀ ಕಲ್ಯಾಣರಾವ್ ಜಿ ಮುಚಳಂಬಿ ಲಿಂಗೈಕ್ಯ

ಬೆಳಗಾವಿ: ರೈತ ಚಳವಳಿಗಳಿಗಳ ಮುಂಚೂಣಿ ನಾಯಕ, ಹಸಿರು ಕ್ರಾಂತಿ ಪತ್ರಿಕೆಯ ಸಂಸ್ಥಾಪಕ ಸಂಪಾದಕ ಕಲ್ಯಾಣರಾವ್ ಗುರಬಸಪ್ಪ ಮುಚಳಂಬಿಯವರು ಅವರು ಬೆಳಗಾವಿ …

ನೂತನ ಸಂಸತ್ ಭವನಕ್ಕೆ ಅನುಭವ ಮಂಟಪ ಎಂದು ಹೆಸರಿಡಲು ನಿಜಗುಣಾನಂದ ಸ್ವಾಮೀಜಿ ಒತ್ತಾಯ

ಬೈಲೂರು: ದೆಹಲಿಯಲ್ಲಿ ನೂತನವಾಗಿ ನಿರ್ಮಿಸುತ್ತಿರುವ ಸಂಸತ್ ಭವನಕ್ಕೆ “ಅನುಭವ ಮಂಟಪ” ಎಂದು ನಾಮಕರಣ ಮಾಡಬೇಕು ಎಂದು ಬೈಲೂರು ನಿಷ್ಕಲ ಮಂಟಪದ …

ಅಕ್ಟೋಬರ್ 3ರಂದು “ಶಿವಬಸವ ಕಾರುಣ್ಯ” ದ ಗುರು ಪ್ರವೇಶ

ಲಿಂಗಾಯತ ಕ್ರಾಂತಿ: ಉತ್ತರಕನ್ನಡ ಜಿಲ್ಲೆ ಹಳಿಯಾಳದ ಅಂಗಡಿ ಕುಟುಂಬದ ನೂತನ ಮನೆ “ಶಿವಬಸವ ಗುರುಕಾರುಣ್ಯ” ದ ಗುರು ಪ್ರವೇಶವು ಅಕ್ಟೋಬರ್ …

ಅಕ್ಕನ ಸಮರ್ಪಣಾ ಭಾವ

ಭಾರತೀಯ ಭಕ್ತಿ ಸಾಹಿತ್ಯದ ಚರಿತ್ರೆಯಲ್ಲಿ ಅಕ್ಕಮಹಾದೇವಿ ಒಬ್ಬ ವಿಶಿಷ್ಟ ಸಾಧಕಿ, ಯೋಗಿಣಿಯಾಗಿ ಕಂಡುಬರುತ್ತಾಳೆ. ಆಕೆಯ ಪ್ರೀತಿ ಪ್ರೇಮ ವಿನೂತನ ವಿಸ್ಮಯದ …

ಪ್ರಭು ಚನ್ನಬಸವ ಸ್ವಾಮೀಜಿ ವಿರಚಿತ ಮಹಾತ್ಮರ ಚರಿತಾಮೃತ ಗ್ರಂಥ ಲೋಕಾರ್ಪಣೆ

ಬೆಂಗಳೂರು: ಬೆಳಗಾವಿ ಜಿಲ್ಲೆಯ ಅಥಣಿಯ ಶ್ರೀ ಮೋಟಗಿ ಮಠ ಬೆಂಗಳೂರಿನಲ್ಲಿ ಆಯೋಜಿಸಿದ್ದ ಶ್ರೀ ಪ್ರಭು ಚನ್ನಬಸವ ಸ್ವಾಮೀಜಿ (ಅಥಣೀಶ) ವಿರಚಿತ …

ರಂಭಾಪುರಿ ಶ್ರೀಗಳು ಢೋಂಗಿತನ ಬಿಡಲಿ

ತಮ್ಮ ಸ್ವಾರ್ಥಕ್ಕೆ ಪಂಚಪೀಠಗಳನ್ನು ಒಡೆದು ಆಳುವ ನೀತಿ ಅನುಸರಿಸುತ್ತಿರುವ ಬಾಳೆಹೊನ್ನೂರು ಶ್ರೀ ರಂಭಾಪುರಿ ಜಗದ್ಗುರು ವೀರಸೋಮೇಶ್ವರ ಶಿವಾಚಾರ್ಯ ಭಗವತ್ಪಾದರು ಬೇರೆಯವರನ್ನು …

“ವೇದಕ್ಕೆ ಒರೆಯ ಕಟ್ಟುವೆ” – ಕೃತಿ ಲೋಕಾರ್ಪಣೆ

ಲಿಂಗಾಯತರಿಗೆ ಲಿಂಗಾಯತ ಧರ್ಮದ ಇತಿಹಾಸವೇ ಗೊತ್ತಿಲ್ಲದಿರುವುದು ದೊಡ್ಡ ದುರಂತ ಲಿಂಗಾಯತ ಧರ್ಮೀಯರು ವೈದಿಕ ಆಚರಣೆಯ ಸೆಳೆತಕ್ಕೆ ಸಿಲುಕಿಕೊಂಡಿದ್ದಾರೆ. ಡಾ.ಜೆ.ಎಸ್.ಪಾಟೀಲರ ” …

“ಲಿಂಗಾನಂದರ ವಚನಧರ್ಮ ಚಳುವಳಿಗೆ” ಡಾಕ್ಟರೇಟ್ ಪದವಿ

ಲಿಂಗಾಯತ ಕ್ರಾಂತಿ : ಸುಮಾರು 50 ವರ್ಷಗಳಾಚೆಯ ನೈಜ ಬಸವತತ್ವ ಪ್ರಸಾರ, ಶರಣಧರ್ಮದ ವೈಚಾರಿಕ ಚಿಂತನೆಗಳನ್ನು ಹಳ್ಳಿಗೆ ಏಕರಾತ್ರಿ ಪಟ್ಟಣಕ್ಕೆ …

“ಅವಕಾಶ ವಂಚಿತರಿಗೆ ಬೆಳಕಾದ ಸಜ್ಜನ ರಾಜಕಾರಣಿ ಸಿದ್ದಪ್ಪ ಕಂಬಳಿಯವರು”

ರಾಜಕೀಯ ಇತಿಹಾಸದಲ್ಲಿ ಮೈಲಿಗಲ್ಲು ಸಾಧಿಸಿದ ಕರ್ನಾಟಕ ಮಹಾಪುರುಷ ಶರಣ ಸಿದ್ದಪ್ಪ ಕಂಬಳಿಯವರು. ಶಾಲಾ ಕಾಲೇಜುಗಳ ತೊರೆದು ಕೋರ್ಟ್ ಕಛೇರಿ ಬಹಿಷ್ಕಾರ …

ಸೆಪ್ಟೆಂಬರ್ 25ರಂದು ಮಹಾತ್ಮರ ಚರಿತಾಮೃತ ಗ್ರಂಥ ಬಿಡುಗಡೆ: ಪೂಜ್ಯ ನಿಜಗುಣಾನಂದ ಶ್ರೀಗಳು

ಬೆಳಗಾವಿ: ಭಾರತ ಬಹುತ್ವದ ಭಾರತಕ್ಕೆ ಧಾರ್ಮಿಕ ಗ್ರಂಥವಾಗಿ ಮಹಾತ್ಮರ ಚರಿತಾಮೃತ ಅಥಣಿಯ ಪ್ರಭು ಚನ್ನಬಸವ ಸ್ವಾಮೀಜಿ ಗ್ರಂಥ ರಚಿಸಿದ್ದಾರೆ ಎಂದು …

“ನೊಬೆಲ್” ಎಂಬ ಮನುಕುಲದ ದ್ರುವತಾರೆ…🌟

ನೂರು ವರ್ಷಗಳ ಹಿಂದೆ ಒಬ್ಬ ಉದ್ಯಮಿ ಬೆಳಗಿನ ಕಾಫ಼ಿ ಸೇವಿಸುತ್ತ ಅಂದಿನ ದಿನಪತ್ರಿಕೆಯೊಂದನ್ನ ಕೈಗೆತ್ತಿಕೊಂಡು ಓದಲು ಪ್ರಾರಂಭಿಸುತ್ತಾನೆ. ಅದರಲ್ಲಿನ ಒಂದು …

Leave a Reply

Your email address will not be published.