Home / featured / ಕಿತ್ತೂರು ಚೆನ್ನಮ್ಮನ ಜ್ಯೋತಿಯಾತ್ರೆಯ ವೇಳಾಪಟ್ಟಿ

ಕಿತ್ತೂರು ಚೆನ್ನಮ್ಮನ ಜ್ಯೋತಿಯಾತ್ರೆಯ ವೇಳಾಪಟ್ಟಿ

ಚನ್ನಮ್ಮನ ಕಿತ್ತೂರು : ಕಿತ್ತೂರು ಉತ್ಸವದ ಅಂಗವಾಗಿ ರಾಣಿ ಚನ್ನಮ್ಮ ವಿಜಯ ಜ್ಯೋತಿ‌ ಯಾತ್ರೆಯು ಅಕ್ಟೋಬರ್ 18 ರಿಂದ ಅಕ್ಟೋಬರ್ 23 ರವರೆಗೆ ಜಿಲ್ಲೆಯಾದ್ಯಂತ ಸಂಚರಿಸಲಿದೆ.

ಅಕ್ಟೋಬರ್ 18 ರಂದು ಬೆಳಿಗ್ಗೆ 9 ಗಂಟೆಗೆ ಬೈಲಹೊಂಗಲದಿಂದ ಜ್ಯೋತಿ ಯಾತ್ರೆಯು ಪ್ರಾರಂಭಗೊಳ್ಳಲಿದ್ದು, ಅಕ್ಟೋಬರ್ 23 ರಂದು ಬೆಳಿಗ್ಗೆ 10 ಗಂಟೆಗೆ ಕಿತ್ತೂರಿನ ಚನ್ನಮ್ಮ ವೃತ್ತಕ್ಕೆ ಆಗಮಿಸಲಿದೆ.

ವೀರ ಜ್ಯೋತಿ ಯಾತ್ರೆಯ ವೇಳಾಪಟ್ಟಿ :

ಅಕ್ಟೋಬರ್ 18 (ಸೋಮವಾರ) ರಂದು ಬೆಳಿಗ್ಗೆ 9 ಗಂಟೆಗೆ ಬೈಲಹೊಂಗಲದಿಂದ ಜ್ಯೋತಿ ಯಾತ್ರೆಯ ಮೆರವಣಿಗೆ ಆರಂಭಗೊಳ್ಳಲಿದೆ. ಬೆಳಿಗ್ಗೆ 10 ಗಂಟೆಗೆ ಆನಿಗೋಳ ಗ್ರಾಮದಲ್ಲಿ ಜ್ಯೋತಿಯ ಸ್ವಾಗತ ಹಾಗೂ ಬಿಳ್ಕೋಡುಗೆ ಕಾರ್ಯಕ್ರಮ ನಡೆಯಲಿದೆ. ನಂತರ, ಬೆಳಿಗ್ಗೆ 10: 30 ಗಂಟೆಗೆ ಆನಿಗೋಳದಿಂದ – ಕೆಂಗಾನೂರ – ಗರ್ಜೂರ ಮಾರ್ಗವಾಗಿ ಸಂಗೊಳ್ಳಿಗೆ ಜ್ಯೋತಿ ತಲುಪಲಿದೆ.

ಮಧ್ಯಾಹ್ನ 2:30 ಗಂಟೆಗೆ ಸಂಗೊಳ್ಳಿಯಿಂದ ತುರಮರಿ- ಹುಣಶಿಕಟ್ಟಿ- ಇಟಗಿ ಕ್ರಾಸ್ ಮಾರ್ಗವಾಗಿ ಇಟಗಿಗೆ ಜ್ಯೋತಿ ತಲುಪಲಿದೆ. ಸಂಜೆ 4 ಗಂಟೆಗೆ ಇಟಗಿಯಿಂದ ಜ್ಯೋತಿಯ ಬೀಳ್ಕೊಡುಗೆ ನಡೆಯಲಿದೆ.

ಜ್ಯೋತಿಯು ಸಾಯಂಕಾಲ 6 ಗಂಟೆಗೆ ತೋಲಗಿ-ಬೇಕವಾಡ ಮಾರ್ಗವಾಗಿ ನಂದಗಡ ಗ್ರಾಮಕ್ಕೆ ಆಗಮಿಸಿ, ಸಾಯಂಕಾಲ 7:30 ಗಂಟೆಗೆ ಖಾನಾಪೂರ ತಲುಪಲಿದ್ದು, ವಾಸ್ತವ್ಯ ವ್ಯವಸ್ಥೆ ಮಾಡಲಾಗಿದೆ.

ಅಕ್ಟೋಬರ್ 19 ರಂದು ಬೆಳಿಗ್ಗೆ 9 ಗಂಟೆಗೆ ಖಾಪೂರದಿಂದ ಜ್ಯೋತಿಯನ್ನು ಬೀಳ್ಕೊಡಲಾಗುವುದು. ಬೆಳಿಗ್ಗೆ 11 ಗಂಟೆಗೆ
ಜ್ಯೋತಿಯು ಬೆಳಗಾವಿಗೆ ಆಗಮಿಸಲಿದ್ದು,ನಂತರ ಬೀಳ್ಕೊಡಲಾಗುವುದು. ಮಧ್ಯಾಹ್ನ 1 ಗಂಟೆಗೆ ಕಾಕತಿ ಹಾಗೂ ಮಧ್ಯಾಹ್ನ 2:30 ಗಂಟೆಗೆ ಹುಕ್ಕೇರಿಗೆ ಆಗಮಿಸಲಿದೆ. ಮಧ್ಯಾಹ್ನ 03.30 ಗಂಟೆಗೆ ಹುಕ್ಕೇರಿಯಿಂದ ತೆರಳಿ, ಸಾಯಂಕಾಲ 04.30 ಕ್ಕೆ ಸಂಕೇಶ್ವರ ಹಾಗೂ ಸಾಯಂಕಾಲ 7:30 ಕ್ಕೆ ನಿಪ್ಪಾಣಿಗೆ ಆಗಮಿಸಲಿದ್ದು, ವಾಸ್ತವ್ಯ ವ್ಯವಸ್ಥೆ ಮಾಡಲಾಗಿದೆ.

ಅಕ್ಟೋಬರ್ 20 ರಂದು ಬೆಳಿಗ್ಗೆ 9 ಗಂಟೆಗೆ ನಿಪ್ಪಾಣಿಯಿಂದ ಯಾತ್ರೆ ಪ್ರಾರಂಭಿಸಿ, 11 ಗಂಟೆಗೆ ಚಿಕ್ಕೋಡಿ ತಲುಪಲಿದೆ. ಮಧ್ಯಾಹ್ನ 2:30 ಕ್ಕೆ ಕಾಗವಾಡಕ್ಕೆ ತಲುಪಲಿದೆ ಮತ್ತು ಸಾಯಂಕಾಲ 4 ಗಂಟೆಗೆ ಕಾಗವಾಡದಿಂದ ತೆರಳಿ, ಸಾಯಂಕಾಲ 7:30 ಕ್ಕೆ ಅಥಣಿ ತಲುಪಲಿದ್ದು, ಅಥಣಿಯಲ್ಲಿ ವಾಸ್ತವ್ಯದ ವ್ಯವಸ್ಥೆ ಮಾಡಲಾಗಿದೆ.

ಅಕ್ಟೋಬರ್ 21 ರಂದು ಬೆಳಿಗ್ಗೆ 9 ಗಂಟೆಗೆ ಅಥಣಿಯಿಂದ ತೆರಳಿ, ಮಧ್ಯಾಹ್ನ 12 ಗಂಟೆಗೆ ರಾಯಬಾಗ ತಲುಪಲಿದೆ. ಮಧ್ಯಾಹ್ನ 2:30 ಕ್ಕೆ ಕಂಕಣವಾಡಿ- ಗುರ್ಲಾಪೂರ ಕ್ರಾಸ್ ಮಾರ್ಗವಾಗಿ ಮೂಡಲಗಿ ತಲುಪಲಿದೆ. ನಂತರ, ಮಧ್ಯಾಹ್ನ 3:30 ಕ್ಕೆ ಮೂಡಲಗಿಯಿಂದ‌ ತೆರಳಿ, ಸಾಯಂಕಾಲ 5 ಗಂಟೆಗೆ ಗೋಕಾಕ ತಲುಪಲಿದೆ. ಸಾಯಂಕಾಲ 7:30 ಕ್ಕೆ ಯರಗಟ್ಟಿಗೆ ಆಗಮಿಸಿ, ವಾಸ್ತವ್ಯವಿರಲಿದೆ.

ಅಕ್ಟೋಬರ್ 22 ರಂದು ಬೆಳಿಗ್ಗೆ 9 ಗಂಟೆಗೆ ಯರಗಟ್ಟಿಯಿಂದ ತೆರಳಿ, ಮಧ್ಯಾಹ್ನ 1 ಗಂಟೆಗೆ ಚಂದರಗಿ-ಗೊಡಚಿ ಮಾರ್ಗವಾಗಿ ರಾಮದುರ್ಗ ತಲುಪಲಿದೆ. ಮಧ್ಯಾಹ್ನ 1:30 ಕ್ಕೆ ರಾಮದುರ್ಗದಿಂದ ತೆರಳಿ, 2:30 ಕ್ಕೆ ಸವದತ್ತಿ ತಲುಪಲಿದೆ. ಮಧ್ಯಾಹ್ನ 3:30ಕ್ಕೆ ಸವದತ್ತಿಯಿಂದ ತೆರಳಿ, ಸಾಯಂಕಾಲ 4:30 ಕ್ಕೆ ಬೆಳವಡಿ ತಲುಪಲಿದೆ.

ನಂತರ,‌ ಸಾಯಂಕಾಲ 9 ಗಂಟೆಗೆ ಖೋದಾನಪೂರ-ಪಟ್ಟಿಹಾಳ ಕೆ.ಬಿ.-ಇಟಗಿ ಕ್ರಾಸ್- ಮಲಪ್ರಭಾ ಸಕ್ಕರೆ ಕಾರ್ಖಾನೆ- ಎಂ.ಕೆ.ಹುಬ್ಬಳ್ಳಿ-ದಾಸ್ತಿಕೊಪ್ಪ ಮಾರ್ಗವಾಗಿ ಕಿತ್ತೂರಿನ ಸೈನಿಕ ಶಾಲೆಯಲ್ಲಿ ವಾಸ್ತವ್ಯವಿರಲಿದೆ.

ಅಕ್ಟೋಬರ್ 23 ರಂದು ಬೆಳಿಗ್ಗೆ 9 ಗಂಟೆಗೆ ಕಿತ್ತೂರಿನ ಸೈನಿಕ‌ ಶಾಲೆಯಿಂದ ತೆರಳಿ, 10 ಗಂಟೆಗೆ ಕಿತ್ತೂರಿನ ಚನ್ನಮ್ಮ ವೃತ್ತಕ್ಕೆ ಆಗಮಿಸಲಿದೆ ಎಂದು ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರು ಹಾಗೂ ಜ್ಯೋತಿ ಉಪಸಮಿತಿಯ ಅಧ್ಯಕ್ಷರಾದ ಡಾ.ಈಶ್ವರ ಉಳ್ಳಾಗಡ್ಡಿ ಅವರು ತಿಳಿಸಿದ್ದಾರೆ

About nagaraj

Check Also

20 ನೇ ಕಲ್ಯಾಣ ಪರ್ವ ಕ್ಷಣಗಣನೆ ಆರಂಭ

ಲೇಖಕರು – ಸಂಗಮೇಶ ಎನ್ ಜವಾದಿ. ಪತ್ರಕರ್ತ, ಪ್ರಗತಿಪರ ಚಿಂತಕರು. ಬೀದರ ಜಿಲ್ಲೆ. ವಿಶ್ವ ಗುರು ಬಸವಣ್ಣನವರ ನೇತೃತ್ವದಲ್ಲಿ ಅಂದು …

ವೈದ್ದಿಕರ ಕುತಂತ್ರದಿಂದ ಲಿಂಗಾಯತ ಧರ್ಮದ ಹೋರಾಟಕ್ಕೆ ಹಿನ್ನಡೆ

ಲಿಂಗಾಯತ ಕ್ರಾಂತಿ: ಲಿಂಗಾಯತ ಧರ್ಮ ಉದಯವಾಗಿದ್ದು 12 ಶತಮಾನದ ಆರಂಭದಲ್ಲಿ ಎಂಬುವುದು ಜಗತ್ತಿನ ಶ್ರೇಷ್ಠ ತತ್ವಜ್ಞಾನಿ, ಸಮಾನತೆಯ ಪ್ರತಿಪಾಧಕ, ಲಿಂಗಬೇದವನ್ನು …

ಡಾ. ಎಂ.ಬಿ ಪಾಟೀಲ ಕರ್ನಾಟಕದ ಮುಂದಿನ ಮುಖ್ಯಮಂತ್ರಿಯಾಗಲಿ

ನೇಗಿನಹಾಳ : ನಾಡಿನ ನೆಲ, ಜಲ, ಶಿಕ್ಷಣ ಹಾಗೂ ಜನಸಾಮಾನ್ಯರ ಜೀವನೋಪಾಯಕ್ಕಾಗಿ ಹತ್ತಾರು ಯೋಜನೆಗಳನ್ನು ಅನುಷ್ಠಾನಗೊಳಿಸಿ ವಿಜಯಪುರ ಜಿಲ್ಲೆಯ ಬೆಳಕಾಗಿರುವ …

ಕರ್ನಾಟಕದ ಭವಿಷ್ಯದ ಮುಖ್ಯಮಂತ್ರಿ ಶ್ರೀ ಡಾ. ಎಂ.ಬಿ ಪಾಟೀಲರ ಜನ್ಮದಿನ

ಲಿಂಗಾಯತ ಕ್ರಾಂತಿ: ಲಿಂಗಾಯತರ ಪ್ರಶ್ನಾತೀತ ನಾಯಕ, ಕರ್ನಾಟಕದ ಭವಿಷ್ಯದ ಮುಖ್ಯಮಂತ್ರಿಗಳು, ನೇರ ನಡೆ-ನುಡಿಯ ಲಿಂಗಾಯತ ಕ್ರಾಂತಿ ಪತ್ರಿಕೆಯ ಮಾರ್ಗದರ್ಶಕರಾದ ಸನ್ಮಾನ್ಯಶ್ರೀ …

ಹಸಿರುಕ್ರಾಂತಿ ಪತ್ರಿಕೆಯ ಸಂಸ್ಥಾಪಕ ಶ್ರೀ ಕಲ್ಯಾಣರಾವ್ ಜಿ ಮುಚಳಂಬಿ ಲಿಂಗೈಕ್ಯ

ಬೆಳಗಾವಿ: ರೈತ ಚಳವಳಿಗಳಿಗಳ ಮುಂಚೂಣಿ ನಾಯಕ, ಹಸಿರು ಕ್ರಾಂತಿ ಪತ್ರಿಕೆಯ ಸಂಸ್ಥಾಪಕ ಸಂಪಾದಕ ಕಲ್ಯಾಣರಾವ್ ಗುರಬಸಪ್ಪ ಮುಚಳಂಬಿಯವರು ಅವರು ಬೆಳಗಾವಿ …

ನೂತನ ಸಂಸತ್ ಭವನಕ್ಕೆ ಅನುಭವ ಮಂಟಪ ಎಂದು ಹೆಸರಿಡಲು ನಿಜಗುಣಾನಂದ ಸ್ವಾಮೀಜಿ ಒತ್ತಾಯ

ಬೈಲೂರು: ದೆಹಲಿಯಲ್ಲಿ ನೂತನವಾಗಿ ನಿರ್ಮಿಸುತ್ತಿರುವ ಸಂಸತ್ ಭವನಕ್ಕೆ “ಅನುಭವ ಮಂಟಪ” ಎಂದು ನಾಮಕರಣ ಮಾಡಬೇಕು ಎಂದು ಬೈಲೂರು ನಿಷ್ಕಲ ಮಂಟಪದ …

ಅಕ್ಟೋಬರ್ 3ರಂದು “ಶಿವಬಸವ ಕಾರುಣ್ಯ” ದ ಗುರು ಪ್ರವೇಶ

ಲಿಂಗಾಯತ ಕ್ರಾಂತಿ: ಉತ್ತರಕನ್ನಡ ಜಿಲ್ಲೆ ಹಳಿಯಾಳದ ಅಂಗಡಿ ಕುಟುಂಬದ ನೂತನ ಮನೆ “ಶಿವಬಸವ ಗುರುಕಾರುಣ್ಯ” ದ ಗುರು ಪ್ರವೇಶವು ಅಕ್ಟೋಬರ್ …

ಅಕ್ಕನ ಸಮರ್ಪಣಾ ಭಾವ

ಭಾರತೀಯ ಭಕ್ತಿ ಸಾಹಿತ್ಯದ ಚರಿತ್ರೆಯಲ್ಲಿ ಅಕ್ಕಮಹಾದೇವಿ ಒಬ್ಬ ವಿಶಿಷ್ಟ ಸಾಧಕಿ, ಯೋಗಿಣಿಯಾಗಿ ಕಂಡುಬರುತ್ತಾಳೆ. ಆಕೆಯ ಪ್ರೀತಿ ಪ್ರೇಮ ವಿನೂತನ ವಿಸ್ಮಯದ …

ಪ್ರಭು ಚನ್ನಬಸವ ಸ್ವಾಮೀಜಿ ವಿರಚಿತ ಮಹಾತ್ಮರ ಚರಿತಾಮೃತ ಗ್ರಂಥ ಲೋಕಾರ್ಪಣೆ

ಬೆಂಗಳೂರು: ಬೆಳಗಾವಿ ಜಿಲ್ಲೆಯ ಅಥಣಿಯ ಶ್ರೀ ಮೋಟಗಿ ಮಠ ಬೆಂಗಳೂರಿನಲ್ಲಿ ಆಯೋಜಿಸಿದ್ದ ಶ್ರೀ ಪ್ರಭು ಚನ್ನಬಸವ ಸ್ವಾಮೀಜಿ (ಅಥಣೀಶ) ವಿರಚಿತ …

ರಂಭಾಪುರಿ ಶ್ರೀಗಳು ಢೋಂಗಿತನ ಬಿಡಲಿ

ತಮ್ಮ ಸ್ವಾರ್ಥಕ್ಕೆ ಪಂಚಪೀಠಗಳನ್ನು ಒಡೆದು ಆಳುವ ನೀತಿ ಅನುಸರಿಸುತ್ತಿರುವ ಬಾಳೆಹೊನ್ನೂರು ಶ್ರೀ ರಂಭಾಪುರಿ ಜಗದ್ಗುರು ವೀರಸೋಮೇಶ್ವರ ಶಿವಾಚಾರ್ಯ ಭಗವತ್ಪಾದರು ಬೇರೆಯವರನ್ನು …

“ವೇದಕ್ಕೆ ಒರೆಯ ಕಟ್ಟುವೆ” – ಕೃತಿ ಲೋಕಾರ್ಪಣೆ

ಲಿಂಗಾಯತರಿಗೆ ಲಿಂಗಾಯತ ಧರ್ಮದ ಇತಿಹಾಸವೇ ಗೊತ್ತಿಲ್ಲದಿರುವುದು ದೊಡ್ಡ ದುರಂತ ಲಿಂಗಾಯತ ಧರ್ಮೀಯರು ವೈದಿಕ ಆಚರಣೆಯ ಸೆಳೆತಕ್ಕೆ ಸಿಲುಕಿಕೊಂಡಿದ್ದಾರೆ. ಡಾ.ಜೆ.ಎಸ್.ಪಾಟೀಲರ ” …

“ಲಿಂಗಾನಂದರ ವಚನಧರ್ಮ ಚಳುವಳಿಗೆ” ಡಾಕ್ಟರೇಟ್ ಪದವಿ

ಲಿಂಗಾಯತ ಕ್ರಾಂತಿ : ಸುಮಾರು 50 ವರ್ಷಗಳಾಚೆಯ ನೈಜ ಬಸವತತ್ವ ಪ್ರಸಾರ, ಶರಣಧರ್ಮದ ವೈಚಾರಿಕ ಚಿಂತನೆಗಳನ್ನು ಹಳ್ಳಿಗೆ ಏಕರಾತ್ರಿ ಪಟ್ಟಣಕ್ಕೆ …

“ಅವಕಾಶ ವಂಚಿತರಿಗೆ ಬೆಳಕಾದ ಸಜ್ಜನ ರಾಜಕಾರಣಿ ಸಿದ್ದಪ್ಪ ಕಂಬಳಿಯವರು”

ರಾಜಕೀಯ ಇತಿಹಾಸದಲ್ಲಿ ಮೈಲಿಗಲ್ಲು ಸಾಧಿಸಿದ ಕರ್ನಾಟಕ ಮಹಾಪುರುಷ ಶರಣ ಸಿದ್ದಪ್ಪ ಕಂಬಳಿಯವರು. ಶಾಲಾ ಕಾಲೇಜುಗಳ ತೊರೆದು ಕೋರ್ಟ್ ಕಛೇರಿ ಬಹಿಷ್ಕಾರ …

ಸೆಪ್ಟೆಂಬರ್ 25ರಂದು ಮಹಾತ್ಮರ ಚರಿತಾಮೃತ ಗ್ರಂಥ ಬಿಡುಗಡೆ: ಪೂಜ್ಯ ನಿಜಗುಣಾನಂದ ಶ್ರೀಗಳು

ಬೆಳಗಾವಿ: ಭಾರತ ಬಹುತ್ವದ ಭಾರತಕ್ಕೆ ಧಾರ್ಮಿಕ ಗ್ರಂಥವಾಗಿ ಮಹಾತ್ಮರ ಚರಿತಾಮೃತ ಅಥಣಿಯ ಪ್ರಭು ಚನ್ನಬಸವ ಸ್ವಾಮೀಜಿ ಗ್ರಂಥ ರಚಿಸಿದ್ದಾರೆ ಎಂದು …

“ನೊಬೆಲ್” ಎಂಬ ಮನುಕುಲದ ದ್ರುವತಾರೆ…🌟

ನೂರು ವರ್ಷಗಳ ಹಿಂದೆ ಒಬ್ಬ ಉದ್ಯಮಿ ಬೆಳಗಿನ ಕಾಫ಼ಿ ಸೇವಿಸುತ್ತ ಅಂದಿನ ದಿನಪತ್ರಿಕೆಯೊಂದನ್ನ ಕೈಗೆತ್ತಿಕೊಂಡು ಓದಲು ಪ್ರಾರಂಭಿಸುತ್ತಾನೆ. ಅದರಲ್ಲಿನ ಒಂದು …

Leave a Reply

Your email address will not be published.