Home / featured / 20 ನೇ ಕಲ್ಯಾಣ ಪರ್ವ ಕ್ಷಣಗಣನೆ ಆರಂಭ

20 ನೇ ಕಲ್ಯಾಣ ಪರ್ವ ಕ್ಷಣಗಣನೆ ಆರಂಭ

ಲೇಖಕರು – ಸಂಗಮೇಶ ಎನ್ ಜವಾದಿ.
ಪತ್ರಕರ್ತ, ಪ್ರಗತಿಪರ ಚಿಂತಕರು.
ಬೀದರ ಜಿಲ್ಲೆ.

ವಿಶ್ವ ಗುರು ಬಸವಣ್ಣನವರ ನೇತೃತ್ವದಲ್ಲಿ ಅಂದು ಕಲ್ಯಾಣದಲ್ಲಿ ಗಣ ಪರ್ವಗಳು ನಡೆಯುತ್ತಿದ್ದವು. ಕಲ್ಯಾಣದ ಕ್ರಾಂತಿಯ ನಂತರ ಸಂಪೂರ್ಣವಾಗಿ ಗಣ ಪರ್ವ ನಿಂತಿದ್ದವು. ಮತ್ತೆ 21ನೇ ಶತಮಾನದಲ್ಲಿ ಕಲ್ಯಾಣ ಪರ್ವದ ಮೂಲಕ ಗಣ ಪರ್ವಗಳು ಕೂಡಲಸಂಗಮದ ಬಸವ ಧರ್ಮ ಪೀಠದ ಪೀಠಾಧ್ಯಕ್ಷೆ ಲಿಂ. ಮಾತಾಜಿಯ ನೇತೃತ್ವದಲ್ಲಿ ಪ್ರಾರಂಭವಾಗಿವೆ. ದೇಶ ಎಂದೂ ಮರೆಯದ ಐತಿಹಾಸಿಕ ಕೆಲಸ ಮಾತಾಜಿಯವರು ಮಾಡಿದ್ದಾರೆ. ಮಾತಾಜಿಯವರು ಹಾಕಿಕೊಟ್ಟ ಮಾರ್ಗದಲ್ಲಿ ಅನೇಕ ಚಟುವಟಿಕೆಗಳು ಸಧ್ಯ ನಿತ್ಯ ನಿರಂತರವಾಗಿ ನಡೆಯುತ್ತಿವೆ.
ಇದರ ಒಂದು ಭಾಗವೇ ಕಲ್ಯಾಣ ಪರ್ವ ಕಾರ್ಯಕ್ರಮ ಶರಣ ಬಂಧುಗಳೆ.

ಮನುಕುಲದ ಉದ್ಧಾರಕ,ಸತ್ಯ ತತ್ವದ ಪ್ರತಿಪಾದಕ,ಶರಣ ಗಣಮೇಳದ ರೂವಾರಿ ಅಣ್ಣ ಬಸವಣ್ಣನವರು ಹಾಗೂ
ಶರಣರು ಮೆಟ್ಟಿದ ಧರೆ ಪಾವನ ಭೂಮಿ ಬಸವಕಲ್ಯಾಣದ ಭವ್ಯವಾದ ಬಸವೇಶ್ವರ ಪ್ರತಿಮೆಯ ಬಸವ ಮಹಾಮನೆಯ ಆವರಣದಲ್ಲಿ 20ನೇ ಕಲ್ಯಾಣ ಪರ್ವ ಕಾರ್ಯಕ್ರಮ ಕ್ಷಣಗಣನೆ ಆರಂಭವಾಗಲಿದೆ.

18,19,20ರ ಈ ಮೂರು ದಿವಸಗಳ ಕಾಲ ಅತ್ಯಂತ ಶಿಸ್ತು ಬದ್ಧ, ಅರ್ಥಪೂರ್ಣ, ವೈಜ್ಞಾನಿಕ, ವೈಚಾರಿಕ ನೆಲೆಗಟ್ಟಿನ ನೆಲೆಯಲ್ಲಿ ಕಾರ್ಯಕ್ರಮವು ಜರುಗಲಿದೆ. ಕಲ್ಯಾಣ ಪರ್ವಕ್ಕೆ ಕರ್ನಾಟಕ, ತೆಲಂಗಾಣ ಮಹಾರಾಷ್ಟ್ರ, ಮೊದಲಾದ ಭಾಗಗಳಿಂದ ಸಾವಿರಾರು ಶರಣ ಬಂಧುಗಳು ಭಾವಹಿಸಲಿದ್ದಾರೆ.ಮೂರು ದಿವಸಗಳ ಕಾಲ ಯೋಗ , ಇಷ್ಟಲಿಂಗ ಪೂಜೆ, ಪ್ರಾರ್ಥನೆ,ಶರಣ ಸ್ಮರಣೆ, ಧರ್ಮಚಿಂತನೆ,ವಿಚಾರಗೋಷ್ಟಿ, ವಚನ ಸಂಗೀತ, ವಚನ ನೃತ್ಯ ,ಪೀಠಾರೋಹಣ,ಪಥ ಸಂಚಲನ ಮುಂತಾದ ಕಾರ್ಯಕ್ರಮಗಳು ಜರುಗಲಿವೆ.

108 ಅಡಿ ಎತ್ತರದ ಪ್ರತಿಮೆ :

ವಿಶ್ವಗುರು ಬಸವಣ್ಣನವರ 108 ಅಡಿ ಎತ್ತರದ ಪ್ರತಿಮೆಯನ್ನು 2001ರಲ್ಲಿ ನಿರ್ಮಿಸಿದ ಕೀರ್ತಿ ಮಾತಾಜಿಯವರಿಗೆ ಸಲ್ಲುತ್ತದೆ. ಕುಳಿತ ಭಂಗಿಯಲ್ಲಿರುವ ಬಸವಣ್ಣನವರ ಹಸನ್ಮುಖಿಯ ಈ ಪ್ರತಿಮೆ ಬಸವಾಭಿಮಾನಿಗಳಿಗೆ ಸೂಜಿಗಲ್ಲಿನಂತೆ ತನ್ನತ್ತ ಸೆಳೆಯುತ್ತಿದ್ದು, ಪ್ರಮುಖ ಧಾರ್ಮಿಕ, ಪ್ರವಾಸಿ ತಾಣವಾಗಿ ಹೊರಹೊಮ್ಮಿದೆ. ಜಗತ್ತಿನ ಜನ, ಮತ್ತೆ ಕಲ್ಯಾಣಕ್ಕೆ ಬಂದು ನೋಡುವಂತಾಗಿದೆ.

ಧನ್ಯನಾಗಬೇಕು :

ಕಲ್ಯಾಣದಲ್ಲಿ ಜರುಗುತ್ತಿರುವ ಕಲ್ಯಾಣ ಪರ್ವ ಕಾರ್ಯಕ್ರಮದ ಮೂಲಕ ಬಸವಾದಿ ಶರಣರ ಸಂದೇಶವನ್ನು ನಾಡಿನ ಉದ್ಧಕ್ಕೂ ಪಸರಿಸುವ ಕಾರ್ಯ ರಾಷ್ಟ್ರೀಯ ಬಸವದಳ ಮಾಡುತ್ತಿರುವುದು ಹೆಮ್ಮೆಯ ಸಂಗತಿ. ಜನಸಾಮಾನ್ಯರಿಗೆ ಬಸವ ತತ್ವದ ಜಾಗೃತಿ ಮೂಡಿಸುತ್ತಿರುವ ಕಾರ್ಯ ಅನನ್ಯ. ಮಹಾ ಮಾನವತಾವಾದಿ ಬಸವಣ್ಣನವರ ವಚನ ಸಾಹಿತ್ಯದ ಸಂದೇಶಗಳಲ್ಲಿ ನಂಬಿಕೆ ಇಟ್ಟು ಬದುಕುವ ಸಮಸ್ತ ಬಸವಭಕ್ತರು, ಬಸವ ತತ್ವಾಭಿಮಾನಿಗಳೆಲ್ಲರೂ ವರ್ಷಕ್ಕೆ ಒಮ್ಮೆಯಾದರೂ ಕಲ್ಯಾಣ ಪರ್ವಕ್ಕೆ ಬಂದು ಧನ್ಯರಾಗಬೇಕಾಗಿದೆ.

ಕಾರ್ಯಕ್ರಮದ ವಿವರ ಮಾಹಿತಿ: ಉದ್ಘಾಟನಾ ಸಮಾರಂಭ, ಇಷ್ಟಲಿಂಗಾರ್ಚನೆ, ಸಮುದಾಯ ಪ್ರಾರ್ಥನೆ, ಶರಣರ ಸ್ಮರಣೆ, ಸಮುದಾಯ ಪ್ರಾರ್ಥನೆ, ವೈಚಾರಿಕ ಚಿಂತನ ಗೋಷ್ಠಿ ನಡೆಯಲಿವೆ.

ಜ್ಞಾನ ದಾಸೋಹದೊಡನೆ ಅನ್ನದಾಸೋಹವನ್ನು ಸಹ ಅಚ್ಚುಕಟ್ಟಾಗಿ ಮಾಡಲಾಗುತ್ತಿದೆ.

ಅಲ್ಲಮಪ್ರಭು ಪೀಠಾರೋಹಣ ಕಾರ್ಯಕ್ರಮ,
ಮತ್ತು ಸಮಾರೋಪ ಸಮಾರಂಭ ಜರುಗಲಿದೆ.

ಸರ್ವರಿಗೂ ಆದರದ ಸ್ವಾಗತ:

12ನೇ ಶತಮಾನವು ವಿಶ್ವಕ್ಕೆ ಸಮಾನತೆ ಸಾರುವ ಭಾವೈಕ್ಯದ ಯುಗವಾಗಿತ್ತು. ಅಂದಿನ ಕಾಲದಲ್ಲಿ ಶರಣರು ಸಮಾನತೆಗಾಗಿ ಕ್ರಾಂತಿ ನಡೆಸಿದ ಪವಿತ್ರ ಭೂಮಿಯಲ್ಲಿ ಕಲ್ಯಾಣ ಪರ್ವ ಜರುಗುತ್ತಿದೆ. ಜೀವನಕ್ಕೆ ಬೇಕಾಗುವ ಮೌಲ್ಯಾಧಾರಿತ ಸಿದ್ಧಾಂತಗಳು ವಚನಗಳಲ್ಲಿ ಅಡಗಿವೆ.

ಇಂತಹ ವಚನಗಳಲ್ಲಿ ಅಡಗಿರುವ ಮಾನವೀಯ ಮೌಲ್ಯಗಳು ಜನರಿಗೆ ತಿಳಿಸುವ ಕಾರ್ಯ ಆಗಬೇಕಾಗಿದೆ. ವಚನ ಸಾಹಿತ್ಯವು ಲಿಂಗಾಯತ ಧರ್ಮದ ಪವಿತ್ರ ಗ್ರಂಥವಾಗಿದೆ. ಕೂಡಲಸಂಗಮ ಮತ್ತು ಬಸವಕಲ್ಯಾಣ ಕ್ಷೇತ್ರಗಳು ಮಾನವೀಯ ಸಮಾನತೆ ಸಾರಿದ ಪುಣ್ಯಕ್ಷೇತ್ರಗಳಾಗಿವೆ‌. ಲಿಂಗಾಯತರು ಒಮ್ಮೆಯಾದರೂ ಈ ಸ್ಥಳಗಳಿಗೆ ಭೇಟಿ ನೀಡಬೇಕು, ಭೇಟಿ ನೀಡಿದಾಗಲೇ ನಮ್ಮ ಜೀವನ ಪಾವನವಾಗುತ್ತದೆ. ಕಾರಣ ನಮ್ಮ ದೇಹದಲ್ಲಿ ಜೀವ ಇರುವವರೆಗೂ ಒಮ್ಮೆಯಾದರೂ ಕಲ್ಯಾಣ ಪರ್ವದಲ್ಲಿ ಭಾಗಿಯಾಗುವ ಮೂಲಕ ಪಾವನರಾಗೊಣ. ಈ ಪವಿತ್ರ ಸಮಾವೇಶ ಕಲ್ಯಾಣ ಪರ್ವಕ್ಕೆ ಜಾತಿ ಮತ ಪಂಥಗಳ ಭೇದವಿಲ್ಲದೆ, ಸರ್ವರಿಗೂ ಆದರದ ಸ್ವಾಗತವಿದೆ.

ಮಾಸ್ಕ್ ಹಾಕಿಕೊಂಡು, ದೇಹಿಕ ಅಂತರ ಕಾಪಾಡಿಕೊಂಡು, ಸರ್ಕಾರದ ನೀತಿ ನಿಯಮಗಳನ್ನು ಪಾಲಿಸುವ ಮೂಲಕ ಕಾರ್ಯಕ್ರಮ ಯಶಸ್ವಿಗೊಳಿಸಬೇಕಾಗಿ ಮನವಿ.

ಲೇಖಕರು – ಸಂಗಮೇಶ ಎನ್ ಜವಾದಿ.
ಪತ್ರಕರ್ತ, ಪ್ರಗತಿಪರ ಚಿಂತಕರು.
ಬೀದರ ಜಿಲ್ಲೆ.

About nagaraj

Check Also

ಕಿತ್ತೂರು ಚೆನ್ನಮ್ಮನ ಜ್ಯೋತಿಯಾತ್ರೆಯ ವೇಳಾಪಟ್ಟಿ

ಚನ್ನಮ್ಮನ ಕಿತ್ತೂರು : ಕಿತ್ತೂರು ಉತ್ಸವದ ಅಂಗವಾಗಿ ರಾಣಿ ಚನ್ನಮ್ಮ ವಿಜಯ ಜ್ಯೋತಿ‌ ಯಾತ್ರೆಯು ಅಕ್ಟೋಬರ್ 18 ರಿಂದ ಅಕ್ಟೋಬರ್ …

ವೈದ್ದಿಕರ ಕುತಂತ್ರದಿಂದ ಲಿಂಗಾಯತ ಧರ್ಮದ ಹೋರಾಟಕ್ಕೆ ಹಿನ್ನಡೆ

ಲಿಂಗಾಯತ ಕ್ರಾಂತಿ: ಲಿಂಗಾಯತ ಧರ್ಮ ಉದಯವಾಗಿದ್ದು 12 ಶತಮಾನದ ಆರಂಭದಲ್ಲಿ ಎಂಬುವುದು ಜಗತ್ತಿನ ಶ್ರೇಷ್ಠ ತತ್ವಜ್ಞಾನಿ, ಸಮಾನತೆಯ ಪ್ರತಿಪಾಧಕ, ಲಿಂಗಬೇದವನ್ನು …

ಡಾ. ಎಂ.ಬಿ ಪಾಟೀಲ ಕರ್ನಾಟಕದ ಮುಂದಿನ ಮುಖ್ಯಮಂತ್ರಿಯಾಗಲಿ

ನೇಗಿನಹಾಳ : ನಾಡಿನ ನೆಲ, ಜಲ, ಶಿಕ್ಷಣ ಹಾಗೂ ಜನಸಾಮಾನ್ಯರ ಜೀವನೋಪಾಯಕ್ಕಾಗಿ ಹತ್ತಾರು ಯೋಜನೆಗಳನ್ನು ಅನುಷ್ಠಾನಗೊಳಿಸಿ ವಿಜಯಪುರ ಜಿಲ್ಲೆಯ ಬೆಳಕಾಗಿರುವ …

ಕರ್ನಾಟಕದ ಭವಿಷ್ಯದ ಮುಖ್ಯಮಂತ್ರಿ ಶ್ರೀ ಡಾ. ಎಂ.ಬಿ ಪಾಟೀಲರ ಜನ್ಮದಿನ

ಲಿಂಗಾಯತ ಕ್ರಾಂತಿ: ಲಿಂಗಾಯತರ ಪ್ರಶ್ನಾತೀತ ನಾಯಕ, ಕರ್ನಾಟಕದ ಭವಿಷ್ಯದ ಮುಖ್ಯಮಂತ್ರಿಗಳು, ನೇರ ನಡೆ-ನುಡಿಯ ಲಿಂಗಾಯತ ಕ್ರಾಂತಿ ಪತ್ರಿಕೆಯ ಮಾರ್ಗದರ್ಶಕರಾದ ಸನ್ಮಾನ್ಯಶ್ರೀ …

ಹಸಿರುಕ್ರಾಂತಿ ಪತ್ರಿಕೆಯ ಸಂಸ್ಥಾಪಕ ಶ್ರೀ ಕಲ್ಯಾಣರಾವ್ ಜಿ ಮುಚಳಂಬಿ ಲಿಂಗೈಕ್ಯ

ಬೆಳಗಾವಿ: ರೈತ ಚಳವಳಿಗಳಿಗಳ ಮುಂಚೂಣಿ ನಾಯಕ, ಹಸಿರು ಕ್ರಾಂತಿ ಪತ್ರಿಕೆಯ ಸಂಸ್ಥಾಪಕ ಸಂಪಾದಕ ಕಲ್ಯಾಣರಾವ್ ಗುರಬಸಪ್ಪ ಮುಚಳಂಬಿಯವರು ಅವರು ಬೆಳಗಾವಿ …

ನೂತನ ಸಂಸತ್ ಭವನಕ್ಕೆ ಅನುಭವ ಮಂಟಪ ಎಂದು ಹೆಸರಿಡಲು ನಿಜಗುಣಾನಂದ ಸ್ವಾಮೀಜಿ ಒತ್ತಾಯ

ಬೈಲೂರು: ದೆಹಲಿಯಲ್ಲಿ ನೂತನವಾಗಿ ನಿರ್ಮಿಸುತ್ತಿರುವ ಸಂಸತ್ ಭವನಕ್ಕೆ “ಅನುಭವ ಮಂಟಪ” ಎಂದು ನಾಮಕರಣ ಮಾಡಬೇಕು ಎಂದು ಬೈಲೂರು ನಿಷ್ಕಲ ಮಂಟಪದ …

ಅಕ್ಟೋಬರ್ 3ರಂದು “ಶಿವಬಸವ ಕಾರುಣ್ಯ” ದ ಗುರು ಪ್ರವೇಶ

ಲಿಂಗಾಯತ ಕ್ರಾಂತಿ: ಉತ್ತರಕನ್ನಡ ಜಿಲ್ಲೆ ಹಳಿಯಾಳದ ಅಂಗಡಿ ಕುಟುಂಬದ ನೂತನ ಮನೆ “ಶಿವಬಸವ ಗುರುಕಾರುಣ್ಯ” ದ ಗುರು ಪ್ರವೇಶವು ಅಕ್ಟೋಬರ್ …

ಅಕ್ಕನ ಸಮರ್ಪಣಾ ಭಾವ

ಭಾರತೀಯ ಭಕ್ತಿ ಸಾಹಿತ್ಯದ ಚರಿತ್ರೆಯಲ್ಲಿ ಅಕ್ಕಮಹಾದೇವಿ ಒಬ್ಬ ವಿಶಿಷ್ಟ ಸಾಧಕಿ, ಯೋಗಿಣಿಯಾಗಿ ಕಂಡುಬರುತ್ತಾಳೆ. ಆಕೆಯ ಪ್ರೀತಿ ಪ್ರೇಮ ವಿನೂತನ ವಿಸ್ಮಯದ …

ಪ್ರಭು ಚನ್ನಬಸವ ಸ್ವಾಮೀಜಿ ವಿರಚಿತ ಮಹಾತ್ಮರ ಚರಿತಾಮೃತ ಗ್ರಂಥ ಲೋಕಾರ್ಪಣೆ

ಬೆಂಗಳೂರು: ಬೆಳಗಾವಿ ಜಿಲ್ಲೆಯ ಅಥಣಿಯ ಶ್ರೀ ಮೋಟಗಿ ಮಠ ಬೆಂಗಳೂರಿನಲ್ಲಿ ಆಯೋಜಿಸಿದ್ದ ಶ್ರೀ ಪ್ರಭು ಚನ್ನಬಸವ ಸ್ವಾಮೀಜಿ (ಅಥಣೀಶ) ವಿರಚಿತ …

ರಂಭಾಪುರಿ ಶ್ರೀಗಳು ಢೋಂಗಿತನ ಬಿಡಲಿ

ತಮ್ಮ ಸ್ವಾರ್ಥಕ್ಕೆ ಪಂಚಪೀಠಗಳನ್ನು ಒಡೆದು ಆಳುವ ನೀತಿ ಅನುಸರಿಸುತ್ತಿರುವ ಬಾಳೆಹೊನ್ನೂರು ಶ್ರೀ ರಂಭಾಪುರಿ ಜಗದ್ಗುರು ವೀರಸೋಮೇಶ್ವರ ಶಿವಾಚಾರ್ಯ ಭಗವತ್ಪಾದರು ಬೇರೆಯವರನ್ನು …

“ವೇದಕ್ಕೆ ಒರೆಯ ಕಟ್ಟುವೆ” – ಕೃತಿ ಲೋಕಾರ್ಪಣೆ

ಲಿಂಗಾಯತರಿಗೆ ಲಿಂಗಾಯತ ಧರ್ಮದ ಇತಿಹಾಸವೇ ಗೊತ್ತಿಲ್ಲದಿರುವುದು ದೊಡ್ಡ ದುರಂತ ಲಿಂಗಾಯತ ಧರ್ಮೀಯರು ವೈದಿಕ ಆಚರಣೆಯ ಸೆಳೆತಕ್ಕೆ ಸಿಲುಕಿಕೊಂಡಿದ್ದಾರೆ. ಡಾ.ಜೆ.ಎಸ್.ಪಾಟೀಲರ ” …

“ಲಿಂಗಾನಂದರ ವಚನಧರ್ಮ ಚಳುವಳಿಗೆ” ಡಾಕ್ಟರೇಟ್ ಪದವಿ

ಲಿಂಗಾಯತ ಕ್ರಾಂತಿ : ಸುಮಾರು 50 ವರ್ಷಗಳಾಚೆಯ ನೈಜ ಬಸವತತ್ವ ಪ್ರಸಾರ, ಶರಣಧರ್ಮದ ವೈಚಾರಿಕ ಚಿಂತನೆಗಳನ್ನು ಹಳ್ಳಿಗೆ ಏಕರಾತ್ರಿ ಪಟ್ಟಣಕ್ಕೆ …

“ಅವಕಾಶ ವಂಚಿತರಿಗೆ ಬೆಳಕಾದ ಸಜ್ಜನ ರಾಜಕಾರಣಿ ಸಿದ್ದಪ್ಪ ಕಂಬಳಿಯವರು”

ರಾಜಕೀಯ ಇತಿಹಾಸದಲ್ಲಿ ಮೈಲಿಗಲ್ಲು ಸಾಧಿಸಿದ ಕರ್ನಾಟಕ ಮಹಾಪುರುಷ ಶರಣ ಸಿದ್ದಪ್ಪ ಕಂಬಳಿಯವರು. ಶಾಲಾ ಕಾಲೇಜುಗಳ ತೊರೆದು ಕೋರ್ಟ್ ಕಛೇರಿ ಬಹಿಷ್ಕಾರ …

ಸೆಪ್ಟೆಂಬರ್ 25ರಂದು ಮಹಾತ್ಮರ ಚರಿತಾಮೃತ ಗ್ರಂಥ ಬಿಡುಗಡೆ: ಪೂಜ್ಯ ನಿಜಗುಣಾನಂದ ಶ್ರೀಗಳು

ಬೆಳಗಾವಿ: ಭಾರತ ಬಹುತ್ವದ ಭಾರತಕ್ಕೆ ಧಾರ್ಮಿಕ ಗ್ರಂಥವಾಗಿ ಮಹಾತ್ಮರ ಚರಿತಾಮೃತ ಅಥಣಿಯ ಪ್ರಭು ಚನ್ನಬಸವ ಸ್ವಾಮೀಜಿ ಗ್ರಂಥ ರಚಿಸಿದ್ದಾರೆ ಎಂದು …

“ನೊಬೆಲ್” ಎಂಬ ಮನುಕುಲದ ದ್ರುವತಾರೆ…🌟

ನೂರು ವರ್ಷಗಳ ಹಿಂದೆ ಒಬ್ಬ ಉದ್ಯಮಿ ಬೆಳಗಿನ ಕಾಫ಼ಿ ಸೇವಿಸುತ್ತ ಅಂದಿನ ದಿನಪತ್ರಿಕೆಯೊಂದನ್ನ ಕೈಗೆತ್ತಿಕೊಂಡು ಓದಲು ಪ್ರಾರಂಭಿಸುತ್ತಾನೆ. ಅದರಲ್ಲಿನ ಒಂದು …

Leave a Reply

Your email address will not be published.