Home / featured / ಸಿಖ್, ಬೌದ್ಧರಂತೆ ಲಿಂಗಾಯತರಿಗೂ ಧರ್ಮದ ಮಾನ್ಯತೆ ನೀಡಬೇಕು : ಶಿವಾನಂದ ಜಾಮದಾರ

ಸಿಖ್, ಬೌದ್ಧರಂತೆ ಲಿಂಗಾಯತರಿಗೂ ಧರ್ಮದ ಮಾನ್ಯತೆ ನೀಡಬೇಕು : ಶಿವಾನಂದ ಜಾಮದಾರ

ಬೆಳಗಾವಿ: ‘ಸ್ವತಂತ್ರ ಲಿಂಗಾಯತ ಧರ್ಮದ ಮಾನ್ಯತೆಗಾಗಿ ಹೋರಾಟ ನಿಂತಿಲ್ಲ, ಕೋವಿಡ್ ಕಾರಣದಿಂದಾಗಿ ಬಹಳ ಸಕ್ರಿಯವಾಗಿ ಕೆಲಸ ಮಾಡಲಾಗಿರಲಿಲ್ಲ. ಇನ್ಮುಂದೆ ಚಟುವಟಿಕೆ ತೀವ್ರಗೊಳಿಸುತ್ತೇವೆ’ ಎಂದು ಜಾಗತಿಕ ಲಿಂಗಾಯತ ಮಹಾಸಭಾ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಎಸ್.ಎಂ. ಜಾಮದಾರ ತಿಳಿಸಿದರು.

ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಗುರುವಾರ ಮಾತನಾಡಿದ ಅವರು, ‘ಮಹಾಸಭಾ ಯಾವುದೇ ಪಕ್ಷದ ಪರ ಅಥವಾ ವಿರುದ್ಧವಾಗಿ ಇಲ್ಲ. ಸ್ವತಂತ್ರ ಲಿಂಗಾಯತ ಧರ್ಮದ ಮಾನ್ಯತೆಗಾಗಿ ನಡೆದ ಹೋರಾಟವನ್ನು ಒಂದು ಪಕ್ಷದ ಹೋರಾಟವೆಂದು ಬಿಂಬಿಸಿದ್ದು ಹಾಗೂ ಗೂಬೆ ಕೂರಿಸಿದ್ದು ತಪ್ಪು. ಅಂತಹ ಕೆಲವು ರಾಜಕಾರಣಿಗಳನ್ನು ಮಹಾಸಭಾದಿಂದ ದೂರ ಇಟ್ಟಿದ್ದೇವೆ’ ಎಂದು ಹೇಳಿದರು.

280 ಸದಸ್ಯರಿಂದ ಆರಂಭವಾದ ಮಹಾಸಭಾ ಈಗ 12 ಸಾವಿರ ದಾಟಿದೆ. ಆನ್‌ಲೈನ್‌ನಲ್ಲೇ ಪ್ರಕ್ರಿಯೆ ನಡೆಯುತ್ತಿದೆ. ಕೆಲವೇ ದಿನಗಳಲ್ಲಿ ಲಕ್ಷಕ್ಕೂ ಮೀರಿ ಸದಸ್ಯತ್ವ ಮಾಡಬೇಕು ಎನ್ನುವ ಉದ್ದೇಶವಿದೆ’ ಎಂದರು. ‘ಸ್ವತಂತ್ರ ಧರ್ಮದ ವಿಚಾರ ಕಳುಹಿಸಿರುವ ಪ್ರಸ್ತಾವವನ್ನು ಒಪ್ಪುವುದಕ್ಕೆ ಕಷ್ಟವಾಗುತ್ತದೆ ಎಂದು ಕೇಂದ್ರ ಸರ್ಕಾರವು ಹೇಳಿದೆ. ಅದಕ್ಕೆ 3 ಕಾರಣಗಳನ್ನು ವಿಚಾರವಾಗಿ ಕರ್ನಾಟಕ ಸರ್ಕಾರವು ಕೊಟ್ಟಿದೆ.

ಲಿಂಗಾಯತ ಸಮುದಾಯದಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರಿದ್ದಾರೆ. ಸ್ವತಂತ್ರ ಧರ್ಮದ ಮಾನ್ಯತೆ ಕೊಟ್ಟರೆ ಪರಿಶಿಷ್ಟರು ವಿಶೇಷ ಸವಲತ್ತುಗಳನ್ನು ಕಳೆದುಕೊಳ್ಳುತ್ತಾರೆ. ಹಿಂದೆ ವೀರಶೈವ ಮಹಾಸಭಾದವರು ನಮ್ಮನ್ನು ಸಂಪರ್ಕಿಸಿದಾಗ, ಲಿಂಗಾಯತ ಹಿಂದೂ ಧರ್ಮದ ಭಾಗ ಎಂದು ಪರಿಗಣಿಸಲಾಗಿದೆ ಎಂದು ತಿಳಿಸಲಾಗಿದೆ. ಇದನ್ನು ಹಿಂದೆಯೇ ತೀರ್ಮಾನಿಸಿದ್ದರಿಂದ ಮತ್ತೆ ನಿರ್ಧಾರದ ಅಗತ್ಯವಿಲ್ಲ ಎಂಬ ನಿರ್ಣಯಕ್ಕೆ ಬರಲಾಗಿದೆ ಎಂಬ ಕಾರಣಗಳನ್ನು ನೀಡಲಾಗಿದೆ’ ಎಂದು ತಿಳಿಸಿದರು. ‘ಈ ವಿಷಯದಲ್ಲಿ ರಾಜ್ಯ ಸರ್ಕಾರ ಪ್ರತ್ಯುತ್ತರ ಬರೆಯಲಿಲ್ಲ. ಬಳಿಕ ಬಂದ ಮುಖ್ಯಮಂತ್ರಿಗಳಾದ ಎಚ್.ಡಿ. ಕುಮಾರಸ್ವಾಮಿ ಹಾಗೂ ಬಿ.ಎಸ್. ಯಡಿಯೂರಪ್ಪ ಕ್ರಮ ವಹಿಸಲಿಲ್ಲ’ ಅಸಮಾಧಾನ ವ್ಯಕ್ತಪಡಿಸಿದರು. ‘ಸಿಖ್ ಮತ್ತು ಬೌದ್ಧ ಧರ್ಮದಲ್ಲೂ ಪರಿಶಿಷ್ಟರಿದ್ದಾರೆ. ಅವುಗಳನ್ನು ಸ್ವತಂತ್ರ ಧರ್ಮ ಎಂದು ಪರಿಗಣಿಸಿಲ್ಲವೇ? ನಮಗೆ ಆಗುವುದಿಲ್ಲ ಎನ್ನುವುದು ನ್ಯಾಯೋಚಿತವಲ್ಲ’ ಎಂದರು. ‘ಲಿಂಗಾಯತ ಹಿಂದೂ ಧರ್ಮದ ಭಾಗ ಎನ್ನುವುದು ವಿವಾದಿತ ವಿಷಯ. ಲಿಂಗಾಯತ ಮತ್ತು ವೀರಶೈವ ಎನ್ನುವುದು ಸಿದ್ಧಾಂತಗಳು. ವೀರಶೈವರು ಎನ್ನುವ ಪಂಚಾಚಾರ್ಯರು ನಾವು ಹಿಂದೂ ಧರ್ಮದ ಭಾಗ ಎನ್ನುತ್ತಾರೆ. ಅವರ ವಿನಂತಿ ಪರಿಗಣಿಸಿ ನಮಗೆ ತಿರಸ್ಕರಿಸಿದರೆ ಸರಿಯಲ್ಲ ಏಕೆಂದರೆ ಅವರು ಬಸವ ತತ್ವಕ್ಕೆ ಬೆಲೆ ಕೊಡುವವರಲ್ಲ . ಲಿಂಗಾಯತರಲ್ಲಿ ವೀರಶೈವ ಎನ್ನುವುದು ಸಣ್ಣ ಪಂಗಡವಷ್ಟೆ. ಸಣ್ಣ ಪಂಗಡದ ಮಾತು ಕೇಳಿಕೊಂಡು ಸಂಪೂರ್ಣ ಸಮುದಾಯದ ಬೇಡಿಕೆ ತಿರಸ್ಕರಿಸುವುದು ಸರಿಯಲ್ಲ. ಇದನ್ನು ಪ್ರತ್ಯೇಕವಾಗಿಯೇ ಪರಿಗಣಿಸಬೇಕು’ ಎಂದು ಹೇಳಿದರು.

‘ವೀರಶೈವ ಲಿಂಗಾಯತ ಸೇರಿಸಿ ಧರ್ಮ ಮಾಡಲಾಗುವುದಿಲ್ಲ. ರಾಜಕೀಯ ಉದ್ದೇಶಕ್ಕಾಗಿ ಕೆಲವರು ಏನೇನೋ ಮಾತನಾಡುತ್ತಿದ್ದಾರೆ’ ಎಂದು ಟೀಕಿಸಿದರು.

‘ವೀರಶೈವ -ಲಿಂಗಾಯತ ಎರಡನ್ನೂ ಸೇರಿಸಿ ಪ್ರತ್ಯೇಕ ಧರ್ಮ ಮಾಡುವುದು ಸರಿಯಲ್ಲ, ಲಿಂಗಾಯತದಲ್ಲಿ ವೀರಶೈವ ಇಲ್ಲ. ವೀರಶೈವರು ಲಿಂಗಾಯತದಲ್ಲಿ ಇದ್ದಾರೆ. ಒಂದು ಪಂಗಡದ ವಾದ ಒಪ್ಪಿ ಉಳಿದ 101 ಪಂಗಡಗಳಿಗೆ ಅನ್ಯಾಯ ಮಾಡಬಾರದು’ ಎಂದು ಕೋರಿದರು.

ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಜಾಗತಿಕ ಲಿಂಗಾಯತ ಮಹಾಸಭಾ ಬೆಳಗಾವಿ ಜಿಲ್ಲಾದ್ಯಕ್ಷ ಬಸವರಾಜ ರೊಟ್ಟಿ, ಕಾರ್ಯದರ್ಶಿ ಬೂದಿಹಾಳ,ಲಿಂಗಾಯತ ಕ್ಷೇಮಾಭಿವೃದ್ಧಿ ಸಂಘದ ಅದ್ಯಕ್ಷ ಎಸ್.ಜಿ ಸಿದ್ನಾಳ, ಹಿರಿಯ ನಾಗರಿಕರ ಮುಖಂಡರಾದ ಬೆಂಡಿಗೇರಿ ಹಾಗೂ ಮತ್ತಿತ್ತರರು ಉಪಸ್ಥಿತರಿದ್ದರು.

About nagaraj

Check Also

ಕಿತ್ತೂರು ಚೆನ್ನಮ್ಮನ ಜ್ಯೋತಿಯಾತ್ರೆಯ ವೇಳಾಪಟ್ಟಿ

ಚನ್ನಮ್ಮನ ಕಿತ್ತೂರು : ಕಿತ್ತೂರು ಉತ್ಸವದ ಅಂಗವಾಗಿ ರಾಣಿ ಚನ್ನಮ್ಮ ವಿಜಯ ಜ್ಯೋತಿ‌ ಯಾತ್ರೆಯು ಅಕ್ಟೋಬರ್ 18 ರಿಂದ ಅಕ್ಟೋಬರ್ …

ವೈದ್ದಿಕರ ಕುತಂತ್ರದಿಂದ ಲಿಂಗಾಯತ ಧರ್ಮದ ಹೋರಾಟಕ್ಕೆ ಹಿನ್ನಡೆ

ಲಿಂಗಾಯತ ಕ್ರಾಂತಿ: ಲಿಂಗಾಯತ ಧರ್ಮ ಉದಯವಾಗಿದ್ದು 12 ಶತಮಾನದ ಆರಂಭದಲ್ಲಿ ಎಂಬುವುದು ಜಗತ್ತಿನ ಶ್ರೇಷ್ಠ ತತ್ವಜ್ಞಾನಿ, ಸಮಾನತೆಯ ಪ್ರತಿಪಾಧಕ, ಲಿಂಗಬೇದವನ್ನು …

ಡಾ. ಎಂ.ಬಿ ಪಾಟೀಲ ಕರ್ನಾಟಕದ ಮುಂದಿನ ಮುಖ್ಯಮಂತ್ರಿಯಾಗಲಿ

ನೇಗಿನಹಾಳ : ನಾಡಿನ ನೆಲ, ಜಲ, ಶಿಕ್ಷಣ ಹಾಗೂ ಜನಸಾಮಾನ್ಯರ ಜೀವನೋಪಾಯಕ್ಕಾಗಿ ಹತ್ತಾರು ಯೋಜನೆಗಳನ್ನು ಅನುಷ್ಠಾನಗೊಳಿಸಿ ವಿಜಯಪುರ ಜಿಲ್ಲೆಯ ಬೆಳಕಾಗಿರುವ …

ಕರ್ನಾಟಕದ ಭವಿಷ್ಯದ ಮುಖ್ಯಮಂತ್ರಿ ಶ್ರೀ ಡಾ. ಎಂ.ಬಿ ಪಾಟೀಲರ ಜನ್ಮದಿನ

ಲಿಂಗಾಯತ ಕ್ರಾಂತಿ: ಲಿಂಗಾಯತರ ಪ್ರಶ್ನಾತೀತ ನಾಯಕ, ಕರ್ನಾಟಕದ ಭವಿಷ್ಯದ ಮುಖ್ಯಮಂತ್ರಿಗಳು, ನೇರ ನಡೆ-ನುಡಿಯ ಲಿಂಗಾಯತ ಕ್ರಾಂತಿ ಪತ್ರಿಕೆಯ ಮಾರ್ಗದರ್ಶಕರಾದ ಸನ್ಮಾನ್ಯಶ್ರೀ …

ಹಸಿರುಕ್ರಾಂತಿ ಪತ್ರಿಕೆಯ ಸಂಸ್ಥಾಪಕ ಶ್ರೀ ಕಲ್ಯಾಣರಾವ್ ಜಿ ಮುಚಳಂಬಿ ಲಿಂಗೈಕ್ಯ

ಬೆಳಗಾವಿ: ರೈತ ಚಳವಳಿಗಳಿಗಳ ಮುಂಚೂಣಿ ನಾಯಕ, ಹಸಿರು ಕ್ರಾಂತಿ ಪತ್ರಿಕೆಯ ಸಂಸ್ಥಾಪಕ ಸಂಪಾದಕ ಕಲ್ಯಾಣರಾವ್ ಗುರಬಸಪ್ಪ ಮುಚಳಂಬಿಯವರು ಅವರು ಬೆಳಗಾವಿ …

ನೂತನ ಸಂಸತ್ ಭವನಕ್ಕೆ ಅನುಭವ ಮಂಟಪ ಎಂದು ಹೆಸರಿಡಲು ನಿಜಗುಣಾನಂದ ಸ್ವಾಮೀಜಿ ಒತ್ತಾಯ

ಬೈಲೂರು: ದೆಹಲಿಯಲ್ಲಿ ನೂತನವಾಗಿ ನಿರ್ಮಿಸುತ್ತಿರುವ ಸಂಸತ್ ಭವನಕ್ಕೆ “ಅನುಭವ ಮಂಟಪ” ಎಂದು ನಾಮಕರಣ ಮಾಡಬೇಕು ಎಂದು ಬೈಲೂರು ನಿಷ್ಕಲ ಮಂಟಪದ …

ಅಕ್ಟೋಬರ್ 3ರಂದು “ಶಿವಬಸವ ಕಾರುಣ್ಯ” ದ ಗುರು ಪ್ರವೇಶ

ಲಿಂಗಾಯತ ಕ್ರಾಂತಿ: ಉತ್ತರಕನ್ನಡ ಜಿಲ್ಲೆ ಹಳಿಯಾಳದ ಅಂಗಡಿ ಕುಟುಂಬದ ನೂತನ ಮನೆ “ಶಿವಬಸವ ಗುರುಕಾರುಣ್ಯ” ದ ಗುರು ಪ್ರವೇಶವು ಅಕ್ಟೋಬರ್ …

ಅಕ್ಕನ ಸಮರ್ಪಣಾ ಭಾವ

ಭಾರತೀಯ ಭಕ್ತಿ ಸಾಹಿತ್ಯದ ಚರಿತ್ರೆಯಲ್ಲಿ ಅಕ್ಕಮಹಾದೇವಿ ಒಬ್ಬ ವಿಶಿಷ್ಟ ಸಾಧಕಿ, ಯೋಗಿಣಿಯಾಗಿ ಕಂಡುಬರುತ್ತಾಳೆ. ಆಕೆಯ ಪ್ರೀತಿ ಪ್ರೇಮ ವಿನೂತನ ವಿಸ್ಮಯದ …

ಪ್ರಭು ಚನ್ನಬಸವ ಸ್ವಾಮೀಜಿ ವಿರಚಿತ ಮಹಾತ್ಮರ ಚರಿತಾಮೃತ ಗ್ರಂಥ ಲೋಕಾರ್ಪಣೆ

ಬೆಂಗಳೂರು: ಬೆಳಗಾವಿ ಜಿಲ್ಲೆಯ ಅಥಣಿಯ ಶ್ರೀ ಮೋಟಗಿ ಮಠ ಬೆಂಗಳೂರಿನಲ್ಲಿ ಆಯೋಜಿಸಿದ್ದ ಶ್ರೀ ಪ್ರಭು ಚನ್ನಬಸವ ಸ್ವಾಮೀಜಿ (ಅಥಣೀಶ) ವಿರಚಿತ …

ರಂಭಾಪುರಿ ಶ್ರೀಗಳು ಢೋಂಗಿತನ ಬಿಡಲಿ

ತಮ್ಮ ಸ್ವಾರ್ಥಕ್ಕೆ ಪಂಚಪೀಠಗಳನ್ನು ಒಡೆದು ಆಳುವ ನೀತಿ ಅನುಸರಿಸುತ್ತಿರುವ ಬಾಳೆಹೊನ್ನೂರು ಶ್ರೀ ರಂಭಾಪುರಿ ಜಗದ್ಗುರು ವೀರಸೋಮೇಶ್ವರ ಶಿವಾಚಾರ್ಯ ಭಗವತ್ಪಾದರು ಬೇರೆಯವರನ್ನು …

“ವೇದಕ್ಕೆ ಒರೆಯ ಕಟ್ಟುವೆ” – ಕೃತಿ ಲೋಕಾರ್ಪಣೆ

ಲಿಂಗಾಯತರಿಗೆ ಲಿಂಗಾಯತ ಧರ್ಮದ ಇತಿಹಾಸವೇ ಗೊತ್ತಿಲ್ಲದಿರುವುದು ದೊಡ್ಡ ದುರಂತ ಲಿಂಗಾಯತ ಧರ್ಮೀಯರು ವೈದಿಕ ಆಚರಣೆಯ ಸೆಳೆತಕ್ಕೆ ಸಿಲುಕಿಕೊಂಡಿದ್ದಾರೆ. ಡಾ.ಜೆ.ಎಸ್.ಪಾಟೀಲರ ” …

“ಲಿಂಗಾನಂದರ ವಚನಧರ್ಮ ಚಳುವಳಿಗೆ” ಡಾಕ್ಟರೇಟ್ ಪದವಿ

ಲಿಂಗಾಯತ ಕ್ರಾಂತಿ : ಸುಮಾರು 50 ವರ್ಷಗಳಾಚೆಯ ನೈಜ ಬಸವತತ್ವ ಪ್ರಸಾರ, ಶರಣಧರ್ಮದ ವೈಚಾರಿಕ ಚಿಂತನೆಗಳನ್ನು ಹಳ್ಳಿಗೆ ಏಕರಾತ್ರಿ ಪಟ್ಟಣಕ್ಕೆ …

“ಅವಕಾಶ ವಂಚಿತರಿಗೆ ಬೆಳಕಾದ ಸಜ್ಜನ ರಾಜಕಾರಣಿ ಸಿದ್ದಪ್ಪ ಕಂಬಳಿಯವರು”

ರಾಜಕೀಯ ಇತಿಹಾಸದಲ್ಲಿ ಮೈಲಿಗಲ್ಲು ಸಾಧಿಸಿದ ಕರ್ನಾಟಕ ಮಹಾಪುರುಷ ಶರಣ ಸಿದ್ದಪ್ಪ ಕಂಬಳಿಯವರು. ಶಾಲಾ ಕಾಲೇಜುಗಳ ತೊರೆದು ಕೋರ್ಟ್ ಕಛೇರಿ ಬಹಿಷ್ಕಾರ …

ಸೆಪ್ಟೆಂಬರ್ 25ರಂದು ಮಹಾತ್ಮರ ಚರಿತಾಮೃತ ಗ್ರಂಥ ಬಿಡುಗಡೆ: ಪೂಜ್ಯ ನಿಜಗುಣಾನಂದ ಶ್ರೀಗಳು

ಬೆಳಗಾವಿ: ಭಾರತ ಬಹುತ್ವದ ಭಾರತಕ್ಕೆ ಧಾರ್ಮಿಕ ಗ್ರಂಥವಾಗಿ ಮಹಾತ್ಮರ ಚರಿತಾಮೃತ ಅಥಣಿಯ ಪ್ರಭು ಚನ್ನಬಸವ ಸ್ವಾಮೀಜಿ ಗ್ರಂಥ ರಚಿಸಿದ್ದಾರೆ ಎಂದು …

“ನೊಬೆಲ್” ಎಂಬ ಮನುಕುಲದ ದ್ರುವತಾರೆ…🌟

ನೂರು ವರ್ಷಗಳ ಹಿಂದೆ ಒಬ್ಬ ಉದ್ಯಮಿ ಬೆಳಗಿನ ಕಾಫ಼ಿ ಸೇವಿಸುತ್ತ ಅಂದಿನ ದಿನಪತ್ರಿಕೆಯೊಂದನ್ನ ಕೈಗೆತ್ತಿಕೊಂಡು ಓದಲು ಪ್ರಾರಂಭಿಸುತ್ತಾನೆ. ಅದರಲ್ಲಿನ ಒಂದು …

Leave a Reply

Your email address will not be published.