Home / featured / ನಾಡು-ನುಡಿ, ಭಾಷೆ, ಧರ್ಮದ ಹೆಸರಿನಲ್ಲಿ ಮಹಾತ್ಮರ ಹೆಸರಿಗೆ ಮಸಿ ಬಳೆಯುವ ಕಾರ್ಯ ನಿಲ್ಲಿಸಿ, ಭಾರತೀಯರೆಂಬ ಸೌಹಾರ್ದತೆಯಿಂದ ಬದುಕಿ: ನಿಜಗುಣಾನಂದ ಮಹಾಸ್ವಾಮಿಗಳು

ನಾಡು-ನುಡಿ, ಭಾಷೆ, ಧರ್ಮದ ಹೆಸರಿನಲ್ಲಿ ಮಹಾತ್ಮರ ಹೆಸರಿಗೆ ಮಸಿ ಬಳೆಯುವ ಕಾರ್ಯ ನಿಲ್ಲಿಸಿ, ಭಾರತೀಯರೆಂಬ ಸೌಹಾರ್ದತೆಯಿಂದ ಬದುಕಿ: ನಿಜಗುಣಾನಂದ ಮಹಾಸ್ವಾಮಿಗಳು

 

ಶಿವಾಜಿ ಮಹಾರಾಜರು, ಸಂಗೊಳ್ಳಿ ರಾಯಣ್ಣ, ವಿಶ್ವಗುರು ಬಸವಣ್ಣನವರ ಮೂರ್ತಿಗಳಿಗೆ ಅವಮಾನ ಮಾಡುವುದು ಬಹಳಷ್ಟು ಸಣ್ಣತನದ ಕೆಲಸ.

🔯ಪೂಜ್ಯ ಶ್ರೀ ನಿಜಗುಣಪ್ರಭು ತೋಂಟದಾರ್ಯ ಮಹಾಸ್ವಾಮಿಗಳು .

ಲಿಂಗಾಯತ ಕ್ರಾಂತಿ ನೇಗಿನಹಾಳ: ಕ್ಷುಲ್ಲಕ ಕಾರಣಗಳಿಗೆ ಮಹಾತ್ಮರ, ಸಂತರ, ದೇಶಭಕ್ತರ ಮೂರ್ತಿಗಳಿಗೆ ಅವಮಾನ ಸರಿಯಲ್ಲ, ನಮ್ಮ ನಾಡು, ಭಾಷೆ, ಧರ್ಮದ ಕುರಿತು ಅಭಿಮಾನವಿರಲಿ ಆದೇ ರೀತಿ ಅನ್ಯ ಭಾಷೆ, ಧರ್ಮಗಳ ಕುರಿತು ಗೌರವದಿಂದ ಬದುಕುಬೇಕು. ಈ ನೆಲದ ಮೂಲ ದ್ರಾವಿಡರಿಗೆ, ಹಿಂದೂಗಳಿಗೆ ಭಾರತ ತಾಯಿ ಆದರೆ ಇಸ್ಲಾಂ ಮತ್ತು ಕ್ರಿಶ್ಚಿಯನ್ ಧರ್ಮೀಯರಿಗೆ ಸಾಕು ತಾಯಿ ಇದ್ದಂತೆ ಹೀಗಾಗಿ ನಾವೆಲ್ಲರೂ ಭಾರತೀಯರು ಎಂಬ ಅಭಿಮಾನದಿಂದ ಬದುಕಬೇಕು ಎಂದು ಬೈಲೂರ ನಿಷ್ಕಲ ಮಂಟಪದ ಪೂಜ್ಯಶ್ರೀ ನಿಜಗುಣಪ್ರಭು ತೋಂಟದಾರ್ಯ ಮಹಾಸ್ವಾಮಿಗಳು ಹೇಳಿದರು.

ನೇಗಿನಹಾಳದ ವಿಠ್ಠಲ ರುಕ್ಮಿಣಿ ಮಂದಿರದ ಸಂತ ಜ್ಞಾನೇಶ್ವರ ಹಾಗೂ ತುಕಾರಾಮ ಮಹಾರಾಜರ ಮೂರ್ತಿ ಪ್ರತಿಷ್ಠಾಪನೆಯ 6ನೆಯ ವಾರ್ಷಿಕೋತ್ಸವದ ನಿಮಿತ್ತ ಮಾತನಾಡಿದ ಅವರು ಭಾರತದ ಸಂಸ್ಕ್ರತಿ, ಸಂಸ್ಕಾರ, ನಾಡು, ನುಡಿ ಪರಂಪರೆಯ ವಿವಿಧತೆಯಲ್ಲಿ ಏಕತೆಯನ್ನು ಇತಿಹಾಸ ದೇಶ ಸಾರುವ ನಮ್ಮದು ಎಂದರು. ಜಗದ್ಗುರು ಮಡಿವಾಳೇಶ್ವರ ಶಿವಯೋಗಿಗಳ ಮಠದ ಬಸವ ಸಿದ್ಧಲಿಂಗ ಮಹಾಸ್ವಾಮಿಗಳು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ಬ್ರಾಹ್ಮಣ ಕುಟುಂಬದಲ್ಲಿ ಜನಿಸಿದ ಜ್ಞಾನೇಶ್ವರ ಮಹಾರಾಜರು ಅಗ್ರಹಾರದಲ್ಲಿ ನಡೆಯುತ್ತಿದ್ದ ಅಜ್ಞಾನ, ಅಂದಾನುಕರಣೆಯನ್ನು ತೊಲಗಿಸಲು ಭಗವತಗೀತೆಯನ್ನು ಪರಿಷ್ಕರಿಸಿ ಜ್ಞಾನೇಶ್ವರ ಗ್ರಂಥ ಬರೆದರು. ಮಣಿಗಾರ ಜಾತ್ರಿಗಿಂತ ಜ್ಞಾನದ ಜಾತ್ರೆಗೆ ಮಹತ್ವದ ಕೊಡುವುದು ಬಹಳಷ್ಟು ಸಂತಸದ ವಿಷಯ ಎಂದರು.

ಬೈಲಹೊಂಗಲ ಪ್ರಜಾಪಿತ ಬ್ರಹ್ಮಕುಮಾರಿ ರಾಜಯೋಗಿನಿ ಪ್ರಭಾ ಅಕ್ಕನವರು, ಸಿದ್ಧಾರೂಢ ಮಠದ ಅಧ್ವೈತಾನಂದ ಭಾರತಿ ಮಹಾಸ್ವಾಮಿಗಳು ಮಾತನಾಡಿದರು.

ಈ ಸಂದರ್ಭದಲ್ಲಿ ದೇಮಪ್ಪ ಪಡದಪ್ಪನವರ, ರುದ್ರಪ್ಪ ಬುಡ್ಡಪ್ಪನವರ, ಸಿದ್ದಪ್ಪ ಕಾರಿಮನಿ, ಬಾಳಪ್ಪ ಕೊಡಿ, ಬಸಪ್ಪ ಬಜೇರಿ, ಗೂಳಪ್ಪ ಭೂತಾಳಿ ಹಾಗೂ ನೇಗಿನಹಾಳ ಗ್ರಾಮದ ಗುರುಹಿರಿಯರು, ಸಮಸ್ತ ಸಂತ ಸದ್ಭಕ್ತರು ಉಪಸ್ಥಿತರಿದ್ದರು.

ಸತೀಶ ಕಾರಿಮನಿ ಪ್ರಾಸ್ತಾವಿಕ ಮಾತನಾಡಿದರು, ರಾಮಣ್ಣಾ ತೋರಣಗಟ್ಟಿ ನಿರೂಪಿಸಿದರು.

About nagaraj

Check Also

ಕಿತ್ತೂರು ಚೆನ್ನಮ್ಮನ ಜ್ಯೋತಿಯಾತ್ರೆಯ ವೇಳಾಪಟ್ಟಿ

ಚನ್ನಮ್ಮನ ಕಿತ್ತೂರು : ಕಿತ್ತೂರು ಉತ್ಸವದ ಅಂಗವಾಗಿ ರಾಣಿ ಚನ್ನಮ್ಮ ವಿಜಯ ಜ್ಯೋತಿ‌ ಯಾತ್ರೆಯು ಅಕ್ಟೋಬರ್ 18 ರಿಂದ ಅಕ್ಟೋಬರ್ …

ವೈದ್ದಿಕರ ಕುತಂತ್ರದಿಂದ ಲಿಂಗಾಯತ ಧರ್ಮದ ಹೋರಾಟಕ್ಕೆ ಹಿನ್ನಡೆ

ಲಿಂಗಾಯತ ಕ್ರಾಂತಿ: ಲಿಂಗಾಯತ ಧರ್ಮ ಉದಯವಾಗಿದ್ದು 12 ಶತಮಾನದ ಆರಂಭದಲ್ಲಿ ಎಂಬುವುದು ಜಗತ್ತಿನ ಶ್ರೇಷ್ಠ ತತ್ವಜ್ಞಾನಿ, ಸಮಾನತೆಯ ಪ್ರತಿಪಾಧಕ, ಲಿಂಗಬೇದವನ್ನು …

ಡಾ. ಎಂ.ಬಿ ಪಾಟೀಲ ಕರ್ನಾಟಕದ ಮುಂದಿನ ಮುಖ್ಯಮಂತ್ರಿಯಾಗಲಿ

ನೇಗಿನಹಾಳ : ನಾಡಿನ ನೆಲ, ಜಲ, ಶಿಕ್ಷಣ ಹಾಗೂ ಜನಸಾಮಾನ್ಯರ ಜೀವನೋಪಾಯಕ್ಕಾಗಿ ಹತ್ತಾರು ಯೋಜನೆಗಳನ್ನು ಅನುಷ್ಠಾನಗೊಳಿಸಿ ವಿಜಯಪುರ ಜಿಲ್ಲೆಯ ಬೆಳಕಾಗಿರುವ …

ಕರ್ನಾಟಕದ ಭವಿಷ್ಯದ ಮುಖ್ಯಮಂತ್ರಿ ಶ್ರೀ ಡಾ. ಎಂ.ಬಿ ಪಾಟೀಲರ ಜನ್ಮದಿನ

ಲಿಂಗಾಯತ ಕ್ರಾಂತಿ: ಲಿಂಗಾಯತರ ಪ್ರಶ್ನಾತೀತ ನಾಯಕ, ಕರ್ನಾಟಕದ ಭವಿಷ್ಯದ ಮುಖ್ಯಮಂತ್ರಿಗಳು, ನೇರ ನಡೆ-ನುಡಿಯ ಲಿಂಗಾಯತ ಕ್ರಾಂತಿ ಪತ್ರಿಕೆಯ ಮಾರ್ಗದರ್ಶಕರಾದ ಸನ್ಮಾನ್ಯಶ್ರೀ …

ಹಸಿರುಕ್ರಾಂತಿ ಪತ್ರಿಕೆಯ ಸಂಸ್ಥಾಪಕ ಶ್ರೀ ಕಲ್ಯಾಣರಾವ್ ಜಿ ಮುಚಳಂಬಿ ಲಿಂಗೈಕ್ಯ

ಬೆಳಗಾವಿ: ರೈತ ಚಳವಳಿಗಳಿಗಳ ಮುಂಚೂಣಿ ನಾಯಕ, ಹಸಿರು ಕ್ರಾಂತಿ ಪತ್ರಿಕೆಯ ಸಂಸ್ಥಾಪಕ ಸಂಪಾದಕ ಕಲ್ಯಾಣರಾವ್ ಗುರಬಸಪ್ಪ ಮುಚಳಂಬಿಯವರು ಅವರು ಬೆಳಗಾವಿ …

ನೂತನ ಸಂಸತ್ ಭವನಕ್ಕೆ ಅನುಭವ ಮಂಟಪ ಎಂದು ಹೆಸರಿಡಲು ನಿಜಗುಣಾನಂದ ಸ್ವಾಮೀಜಿ ಒತ್ತಾಯ

ಬೈಲೂರು: ದೆಹಲಿಯಲ್ಲಿ ನೂತನವಾಗಿ ನಿರ್ಮಿಸುತ್ತಿರುವ ಸಂಸತ್ ಭವನಕ್ಕೆ “ಅನುಭವ ಮಂಟಪ” ಎಂದು ನಾಮಕರಣ ಮಾಡಬೇಕು ಎಂದು ಬೈಲೂರು ನಿಷ್ಕಲ ಮಂಟಪದ …

ಅಕ್ಟೋಬರ್ 3ರಂದು “ಶಿವಬಸವ ಕಾರುಣ್ಯ” ದ ಗುರು ಪ್ರವೇಶ

ಲಿಂಗಾಯತ ಕ್ರಾಂತಿ: ಉತ್ತರಕನ್ನಡ ಜಿಲ್ಲೆ ಹಳಿಯಾಳದ ಅಂಗಡಿ ಕುಟುಂಬದ ನೂತನ ಮನೆ “ಶಿವಬಸವ ಗುರುಕಾರುಣ್ಯ” ದ ಗುರು ಪ್ರವೇಶವು ಅಕ್ಟೋಬರ್ …

ಅಕ್ಕನ ಸಮರ್ಪಣಾ ಭಾವ

ಭಾರತೀಯ ಭಕ್ತಿ ಸಾಹಿತ್ಯದ ಚರಿತ್ರೆಯಲ್ಲಿ ಅಕ್ಕಮಹಾದೇವಿ ಒಬ್ಬ ವಿಶಿಷ್ಟ ಸಾಧಕಿ, ಯೋಗಿಣಿಯಾಗಿ ಕಂಡುಬರುತ್ತಾಳೆ. ಆಕೆಯ ಪ್ರೀತಿ ಪ್ರೇಮ ವಿನೂತನ ವಿಸ್ಮಯದ …

ಪ್ರಭು ಚನ್ನಬಸವ ಸ್ವಾಮೀಜಿ ವಿರಚಿತ ಮಹಾತ್ಮರ ಚರಿತಾಮೃತ ಗ್ರಂಥ ಲೋಕಾರ್ಪಣೆ

ಬೆಂಗಳೂರು: ಬೆಳಗಾವಿ ಜಿಲ್ಲೆಯ ಅಥಣಿಯ ಶ್ರೀ ಮೋಟಗಿ ಮಠ ಬೆಂಗಳೂರಿನಲ್ಲಿ ಆಯೋಜಿಸಿದ್ದ ಶ್ರೀ ಪ್ರಭು ಚನ್ನಬಸವ ಸ್ವಾಮೀಜಿ (ಅಥಣೀಶ) ವಿರಚಿತ …

ರಂಭಾಪುರಿ ಶ್ರೀಗಳು ಢೋಂಗಿತನ ಬಿಡಲಿ

ತಮ್ಮ ಸ್ವಾರ್ಥಕ್ಕೆ ಪಂಚಪೀಠಗಳನ್ನು ಒಡೆದು ಆಳುವ ನೀತಿ ಅನುಸರಿಸುತ್ತಿರುವ ಬಾಳೆಹೊನ್ನೂರು ಶ್ರೀ ರಂಭಾಪುರಿ ಜಗದ್ಗುರು ವೀರಸೋಮೇಶ್ವರ ಶಿವಾಚಾರ್ಯ ಭಗವತ್ಪಾದರು ಬೇರೆಯವರನ್ನು …

“ವೇದಕ್ಕೆ ಒರೆಯ ಕಟ್ಟುವೆ” – ಕೃತಿ ಲೋಕಾರ್ಪಣೆ

ಲಿಂಗಾಯತರಿಗೆ ಲಿಂಗಾಯತ ಧರ್ಮದ ಇತಿಹಾಸವೇ ಗೊತ್ತಿಲ್ಲದಿರುವುದು ದೊಡ್ಡ ದುರಂತ ಲಿಂಗಾಯತ ಧರ್ಮೀಯರು ವೈದಿಕ ಆಚರಣೆಯ ಸೆಳೆತಕ್ಕೆ ಸಿಲುಕಿಕೊಂಡಿದ್ದಾರೆ. ಡಾ.ಜೆ.ಎಸ್.ಪಾಟೀಲರ ” …

“ಲಿಂಗಾನಂದರ ವಚನಧರ್ಮ ಚಳುವಳಿಗೆ” ಡಾಕ್ಟರೇಟ್ ಪದವಿ

ಲಿಂಗಾಯತ ಕ್ರಾಂತಿ : ಸುಮಾರು 50 ವರ್ಷಗಳಾಚೆಯ ನೈಜ ಬಸವತತ್ವ ಪ್ರಸಾರ, ಶರಣಧರ್ಮದ ವೈಚಾರಿಕ ಚಿಂತನೆಗಳನ್ನು ಹಳ್ಳಿಗೆ ಏಕರಾತ್ರಿ ಪಟ್ಟಣಕ್ಕೆ …

“ಅವಕಾಶ ವಂಚಿತರಿಗೆ ಬೆಳಕಾದ ಸಜ್ಜನ ರಾಜಕಾರಣಿ ಸಿದ್ದಪ್ಪ ಕಂಬಳಿಯವರು”

ರಾಜಕೀಯ ಇತಿಹಾಸದಲ್ಲಿ ಮೈಲಿಗಲ್ಲು ಸಾಧಿಸಿದ ಕರ್ನಾಟಕ ಮಹಾಪುರುಷ ಶರಣ ಸಿದ್ದಪ್ಪ ಕಂಬಳಿಯವರು. ಶಾಲಾ ಕಾಲೇಜುಗಳ ತೊರೆದು ಕೋರ್ಟ್ ಕಛೇರಿ ಬಹಿಷ್ಕಾರ …

ಸೆಪ್ಟೆಂಬರ್ 25ರಂದು ಮಹಾತ್ಮರ ಚರಿತಾಮೃತ ಗ್ರಂಥ ಬಿಡುಗಡೆ: ಪೂಜ್ಯ ನಿಜಗುಣಾನಂದ ಶ್ರೀಗಳು

ಬೆಳಗಾವಿ: ಭಾರತ ಬಹುತ್ವದ ಭಾರತಕ್ಕೆ ಧಾರ್ಮಿಕ ಗ್ರಂಥವಾಗಿ ಮಹಾತ್ಮರ ಚರಿತಾಮೃತ ಅಥಣಿಯ ಪ್ರಭು ಚನ್ನಬಸವ ಸ್ವಾಮೀಜಿ ಗ್ರಂಥ ರಚಿಸಿದ್ದಾರೆ ಎಂದು …

“ನೊಬೆಲ್” ಎಂಬ ಮನುಕುಲದ ದ್ರುವತಾರೆ…🌟

ನೂರು ವರ್ಷಗಳ ಹಿಂದೆ ಒಬ್ಬ ಉದ್ಯಮಿ ಬೆಳಗಿನ ಕಾಫ಼ಿ ಸೇವಿಸುತ್ತ ಅಂದಿನ ದಿನಪತ್ರಿಕೆಯೊಂದನ್ನ ಕೈಗೆತ್ತಿಕೊಂಡು ಓದಲು ಪ್ರಾರಂಭಿಸುತ್ತಾನೆ. ಅದರಲ್ಲಿನ ಒಂದು …

Leave a Reply

Your email address will not be published.