Home / featured / ಬಸವಣ್ಣನವರ ಅಂಕಿತನಾಮ ಗೊಂದಲಕ್ಕೆ ತೆರೆ; ಕೂಡಲಸಂಗಮದೇವ ಅಂಕಿತನಾಮ ಬಳಸಲು ಆದೇಶ

ಬಸವಣ್ಣನವರ ಅಂಕಿತನಾಮ ಗೊಂದಲಕ್ಕೆ ತೆರೆ; ಕೂಡಲಸಂಗಮದೇವ ಅಂಕಿತನಾಮ ಬಳಸಲು ಆದೇಶ

 

ಸುದ್ದಿಗೋಷ್ಠಿಯಲ್ಲಿ ಆದೇಶ ನೀಡಿದ ಮಾತೆ ಗಂಗಾದೇವಿ ಅವರು, ಸುಪ್ರೀಂ ಕೋರ್ಟ್ 2017 ಸೆಪ್ಟೆಂಬರ್ 21 ರಂದು ಕೂಡಲಸಂಗಮದೇವ ಅಂತಾನೆ ಅಂಕಿತನಾಮ ಬಳಸಲು ಆದೇಶ ನೀಡಿದೆ. ನಾವು ಕೋರ್ಟ್ ಆದೇಶಕ್ಕೆ ತಲೆ ಬಾಗಿ, ಗೌರವ ನೀಡುವ ಉದ್ದೇಶದಿಂದ ಈ ಕರೆ ನೀಡಿದ್ದೇವೆ.

ಬಾಗಲಕೋಟೆ: ವಿಶ್ವಗುರು, ಮಹಾಮಾನವತಾವಾದಿ, ಸಾಮಾಜಿಕ ಸಮಾನತೆಯ ಹರಿಕಾರ ಬಸವಣ್ಣ ತಮ್ಮ ವಚನಗಳ ಮೂಲಕ ಸಮಾಜದ ಅಂಕು ಡೊಂಕು ತಿದ್ದಿದವರು.

12ನೇ ಶತಮಾನದ ಕ್ರಾಂತಿಕಾರಿ ಬಸವಣ್ಣನವರ ವಚನದ ಅಂಕಿತನಾಮ ಬದಲಾವಣೆ ರಾಜ್ಯದಲ್ಲಿ 1996 ರಲ್ಲಿ ಕೋಲಾಹಲ ಸೃಷ್ಟಿ ಮಾಡಿತ್ತು. ಬಸವಧರ್ಮ ಪೀಠಾಧ್ಯಕ್ಷೆ ಲಿಂಗೈಕ್ಯ ಮಾತೆ ಮಹಾದೇವಿ ತಮ್ಮ ವಚನದೀಪ್ತಿ ಎಂಬ ವಚನ ಗ್ರಂಥದಲ್ಲಿ ಬಸವಣ್ಣನವರ ವಚನಗಳ ಅಂಕಿತನಾಮ ಕೂಡಲಸಂಗಮದೇವ ಬದಲಿಸಿ ಲಿಂಗದೇವ ಎಂದು ಉಲ್ಲೇಖ ಮಾಡಿದ್ದರು. ಇದರಿಂದ ರಾಜ್ಯದಲ್ಲಿ ಬಾರಿ ವಿರೋಧ ವ್ಯಕ್ತವಾಗಿತ್ತು. ಈಗಿರುವ ಬಸವಧರ್ಮ ಪೀಠಾಧ್ಯಕ್ಷೆ ಮಾತೆ ಗಂಗಾದೇವಿ ಅಂಕಿತನಾಮ ವಿವಾದಕ್ಕೆ ತೆರೆ ಎಳೆದಿದ್ದಾರೆ.

ಬಾಗಲಕೋಟೆಯಲ್ಲಿ ಮಾತಾಡಿದ ಬಸವಧರ್ಮ ಪೀಠಾಧ್ಯಕ್ಷೆ ಮಾತೆ ಗಂಗಾದೇವಿ ಅವರು, ವಚನದೀಪ್ತಿಯಲ್ಲಿ ಬಸವಣ್ಣನವರ ವಚನಗಳ ಅಂಕಿತನಾಮ ತಿದ್ದುಪಡಿ ಗೊಂದಲಕ್ಕೆ ತೆರೆ ಎಳೆದಿದ್ದಾರೆ. ಇನ್ಮುಂದೆ ವಚನದೀಪ್ತಿಯಲ್ಲಿನ ಬಸವಣ್ಣನವರ ವಚನಗಳಲ್ಲಿ ಕೂಡಲಸಂಗಮದೇವ ಎಂಬ ಅಂಕಿತನಾಮ ಬಳಸಲು ಆದೇಶ ನೀಡಿದ್ದಾರೆ. ಇನ್ಮುಂದೆ ಬಸವಧರ್ಮ ಪೀಠದ ಎಲ್ಲ ಜಂಗಮ ಮೂರ್ತಿಗಳು, ಭಕ್ತರು, ಬಸವಧರ್ಮ ಪೀಠದ ಅಧೀನ ಸಂಸ್ಥೆಗಳು, ರಾಷ್ಟ್ರೀಯ ಬಸವದಳ, ಲಿಂಗಾಯತ ಧರ್ಮ ಮಹಾಸಭಾದ ಪದಾಧಿಕಾರಿಗಳು, ಸದಸ್ಯರು ಎಲ್ಲರೂ ಕೂಡಲಸಂಗಮದೇವ ಎಂದು ಬಳಸಲು ಆದೇಶಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಆದೇಶ ನೀಡಿದ ಮಾತೆ ಗಂಗಾದೇವಿ ಅವರು, ಸುಪ್ರೀಂ ಕೋರ್ಟ್ 2017 ಸೆಪ್ಟೆಂಬರ್ 21 ರಂದು ಕೂಡಲಸಂಗಮದೇವ ಅಂತಾನೆ ಅಂಕಿತನಾಮ ಬಳಸಲು ಆದೇಶ ನೀಡಿದೆ. ನಾವು ಕೋರ್ಟ್ ಆದೇಶಕ್ಕೆ ತಲೆ ಬಾಗಿ, ಗೌರವ ನೀಡುವ ಉದ್ದೇಶದಿಂದ ಈ ಕರೆ ನೀಡಿದ್ದೇವೆ. ಮುಂಬರುವ ಶರಣ ಮೇಳದಲ್ಲಿ ಪ್ರಾರ್ಥನೆ, ವಚನ ಪಠಣ ಎಲ್ಲದರಲ್ಲೂ ಕೂಡಲಸಂಗಮದೇವ ಎಂಬ ಅಂಕಿತನಾಮವನ್ನೇ ಬಳಸುತ್ತೇವೆ. ಇದರ ಹೊರತಾಗಿ ಯಾರಾದರೂ ಲಿಂಗದೇವ ಎಂಬ ಅಂಕಿತನಾಮ ಬಳಸಿ ಕೋರ್ಟ್ ಆದೇಶ ಉಲ್ಲಂಘನೆ ಮಾಡಿದರೆ ಅದಕ್ಕೆ ನಾವಾಗಲಿ ಬಸವಧರ್ಮ ಪೀಠ ಜವಾಬ್ದಾರಿ ಅಲ್ಲ ಎಂದಿದ್ದಾರೆ.

ಬಸವಣ್ಣನವರ ಅನುಯಾಯಿಗಳ ವಿರೋಧ ಕಟ್ಟಿಕೊಂಡಿದ್ದ ಲಿಂಗೈಕ್ಯ ಮಾತೆ ಮಹಾದೇವಿ
ವಚನದೀಪ್ತಿ ಲಿಂಗೈಕ್ಯ ಮಾತೆ ಮಹಾದೇವಿ ಬರೆದ ಗ್ರಂಥ. ಗ್ರಂಥದಲ್ಲಿ ಬಸವಣ್ಣನವರ ವಚನಗಳ ಅಂಕಿತನಾಮ ಲಿಂಗದೇವ ಎಂದು ಬದಲಿಸಿದ್ದರು. ವಿವಾದ ಸೃಷ್ಟಿಯಾಗಿ ಸರಕಾರ ವಚನ ದೀಪ್ತಿಯನ್ನು ಮುಟ್ಟುಗೋಲು ಹಾಕಿಕೊಂಡಿತ್ತು. ವಿವಾದ ಹೈಕೋರ್ಟ್, ಸುಪ್ರೀಂ ಕೋರ್ಟ್ ವರೆಗೂ ಹೋಗಿತ್ತು. 2017 ಸೆಪ್ಟೆಂಬರ್ 21 ರಂದು ಸುಪ್ರೀಂ ಕೋರ್ಟ್ ಕೂಡಲಸಂಗಮದೇವ ಎಂದೇ ಅಂಕಿತನಾಮ ಬಳಸಲು ಆದೇಶ ನೀಡಿತ್ತು. ಕೋರ್ಟ್ ಆದೇಶ ಉಲ್ಲಂಘನೆಯಾಗಬಾರದು. ಕೋರ್ಟ್ ಆದೇಶ ಗೌರವಿಸಬೇಕೆಂದು ಭಕ್ತರಿಗೆ ಆದೇಶ ನೀಡುತ್ತಿದ್ದೇನೆ. ಇದರಿಂದ ಕೆಲ ಭಕ್ತರಿಗೆ ನೋವು ಆಗಲೂಬಹುದು. ಕೋರ್ಟ್ ಆದೇಶ ಎಲ್ಲರೂ ಗೌರವಿಸೋಣ ಅಂತ ಮಾತೆ ಗಂಗಾದೇವಿ ಹೇಳಿದ್ದಾರೆ.

ಮಾತೆ ಮಹಾದೇವಿ ವಚನ ದೀಪ್ತಿ ಗ್ರಂಥ ಮುಟ್ಟುಗೋಲು ಹಾಕಿಕೊಂಡಿದ್ದ ಸರಕಾರ
ಲಿಂಗೈಕ್ಯ ಮಾತೆ ಮಹಾದೇವಿ 1996 ರಲ್ಲಿ ಬಸವಣ್ಣನವರ ವಚನಗಳ ಸಂಗ್ರಹ ಸಂಶೋಧನೆ ನಡೆಸಿ ವಚನ ದೀಪ್ತಿ ಎಂಬ ಗ್ರಂಥ ರಚಿಸಿದ್ದರು. ಇದರಲ್ಲಿ ಅವರು ಬಸವಣ್ಣನರವರ ವಚನಗಳಿಗೆ ಕೂಡಲಸಂಗಮದೇವ ಬದಲಿಗೆ ಲಿಂಗದೇವ ಎಂದು ಉಲ್ಲೇಖ ಮಾಡಿದ್ದರು.

ಮಾತೆ ಮಹಾದೇವಿಗೆ ಧೀಕ್ಷೆ ನೀಡಿದ್ದ ಲಿಂಗಾನಂದ ಸ್ವಾಮೀಜಿಗಳಾಗಿದ್ದರು. ಈ ಹಿನ್ನೆಲೆ ಮಾತೆ ಮಹಾದೇವಿ ಲಿಂಗದೇವ ಎಂದು ಅಂಕಿತನಾಮ ಬದಲಿಸಿದ್ದಾರೆ ಎಂದು ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾಗಿತ್ತು. ನಂತರ ರಾಜ್ಯ ಸರಕಾರ ವಚನ ದೀಪ್ತಿಯನ್ನು ಮುಟ್ಟುಗೋಲು ಹಾಕಿಕೊಂಡಿತ್ತು. ವಿವಾದ ಬೆಂಗಳೂರು ಹೈಕೋರ್ಟ್ ತಲುಪಿತ್ತು. ಹೈಕೋರ್ಟ್ನಲ್ಲಿ ಕೂಡಲಸಂಗಮದೇವ ಅಂತಾನೆ ಬಳಸಬೇಕು ಎಂದ ಆದೇಶವಾಗಿತ್ತು. ಈ ಆದೇಶ ಪ್ರಶ್ನಿಸಿ ಬಸವ ಧರ್ಮ ಪೀಠ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಿತ್ತು. 2017 ರಲ್ಲಿ ಸುಪ್ರೀಂ ಕೋರ್ಟ್ ಹೈಕೋರ್ಟ್ ಆದೇಶವನ್ನು ಎತ್ತಿ ಹಿಡಿದು ವಚನಗಳಿಗೆ ಕೂಡಲಸಂಗಮದೇವ ಅಂತಾನೆ ಬಳಸಬೇಕೆಂದು ಮಹತ್ವದ ತೀರ್ಪು ನೀಡಿತ್ತು.

ಸುಪ್ರೀಂ ತೀರ್ಪು ಬಂದ ನಂತರ ನಾಲ್ಕು ವರ್ಷಗಳ ಬಳಿಕ ಬಸವ ಧರ್ಮ ಪೀಠಾಧ್ಯಕ್ಷೆ ಮಾತೆ ಗಂಗಾದೇವಿ ಇಂದು ಅಧಿಕೃತವಾಗಿ ಎಲ್ಲ ಭಕ್ತರಿಗೆ ಬಸವಣ್ಣನವರ ವಚನಗಳಿಗೆ ಕೂಡಲಸಂಗಮದೇವ ಅಂತಾನೆ ಅಂಕಿತನಾಮ ಬಳಸಬೇಕೆಂದು ಕರೆ ನೀಡಿದ್ದಾರೆ.
ವರದಿ: ರವಿ ಮೂಕಿ

About nagaraj

Check Also

ಕಿತ್ತೂರು ಚೆನ್ನಮ್ಮನ ಜ್ಯೋತಿಯಾತ್ರೆಯ ವೇಳಾಪಟ್ಟಿ

ಚನ್ನಮ್ಮನ ಕಿತ್ತೂರು : ಕಿತ್ತೂರು ಉತ್ಸವದ ಅಂಗವಾಗಿ ರಾಣಿ ಚನ್ನಮ್ಮ ವಿಜಯ ಜ್ಯೋತಿ‌ ಯಾತ್ರೆಯು ಅಕ್ಟೋಬರ್ 18 ರಿಂದ ಅಕ್ಟೋಬರ್ …

ವೈದ್ದಿಕರ ಕುತಂತ್ರದಿಂದ ಲಿಂಗಾಯತ ಧರ್ಮದ ಹೋರಾಟಕ್ಕೆ ಹಿನ್ನಡೆ

ಲಿಂಗಾಯತ ಕ್ರಾಂತಿ: ಲಿಂಗಾಯತ ಧರ್ಮ ಉದಯವಾಗಿದ್ದು 12 ಶತಮಾನದ ಆರಂಭದಲ್ಲಿ ಎಂಬುವುದು ಜಗತ್ತಿನ ಶ್ರೇಷ್ಠ ತತ್ವಜ್ಞಾನಿ, ಸಮಾನತೆಯ ಪ್ರತಿಪಾಧಕ, ಲಿಂಗಬೇದವನ್ನು …

ಡಾ. ಎಂ.ಬಿ ಪಾಟೀಲ ಕರ್ನಾಟಕದ ಮುಂದಿನ ಮುಖ್ಯಮಂತ್ರಿಯಾಗಲಿ

ನೇಗಿನಹಾಳ : ನಾಡಿನ ನೆಲ, ಜಲ, ಶಿಕ್ಷಣ ಹಾಗೂ ಜನಸಾಮಾನ್ಯರ ಜೀವನೋಪಾಯಕ್ಕಾಗಿ ಹತ್ತಾರು ಯೋಜನೆಗಳನ್ನು ಅನುಷ್ಠಾನಗೊಳಿಸಿ ವಿಜಯಪುರ ಜಿಲ್ಲೆಯ ಬೆಳಕಾಗಿರುವ …

ಕರ್ನಾಟಕದ ಭವಿಷ್ಯದ ಮುಖ್ಯಮಂತ್ರಿ ಶ್ರೀ ಡಾ. ಎಂ.ಬಿ ಪಾಟೀಲರ ಜನ್ಮದಿನ

ಲಿಂಗಾಯತ ಕ್ರಾಂತಿ: ಲಿಂಗಾಯತರ ಪ್ರಶ್ನಾತೀತ ನಾಯಕ, ಕರ್ನಾಟಕದ ಭವಿಷ್ಯದ ಮುಖ್ಯಮಂತ್ರಿಗಳು, ನೇರ ನಡೆ-ನುಡಿಯ ಲಿಂಗಾಯತ ಕ್ರಾಂತಿ ಪತ್ರಿಕೆಯ ಮಾರ್ಗದರ್ಶಕರಾದ ಸನ್ಮಾನ್ಯಶ್ರೀ …

ಹಸಿರುಕ್ರಾಂತಿ ಪತ್ರಿಕೆಯ ಸಂಸ್ಥಾಪಕ ಶ್ರೀ ಕಲ್ಯಾಣರಾವ್ ಜಿ ಮುಚಳಂಬಿ ಲಿಂಗೈಕ್ಯ

ಬೆಳಗಾವಿ: ರೈತ ಚಳವಳಿಗಳಿಗಳ ಮುಂಚೂಣಿ ನಾಯಕ, ಹಸಿರು ಕ್ರಾಂತಿ ಪತ್ರಿಕೆಯ ಸಂಸ್ಥಾಪಕ ಸಂಪಾದಕ ಕಲ್ಯಾಣರಾವ್ ಗುರಬಸಪ್ಪ ಮುಚಳಂಬಿಯವರು ಅವರು ಬೆಳಗಾವಿ …

ನೂತನ ಸಂಸತ್ ಭವನಕ್ಕೆ ಅನುಭವ ಮಂಟಪ ಎಂದು ಹೆಸರಿಡಲು ನಿಜಗುಣಾನಂದ ಸ್ವಾಮೀಜಿ ಒತ್ತಾಯ

ಬೈಲೂರು: ದೆಹಲಿಯಲ್ಲಿ ನೂತನವಾಗಿ ನಿರ್ಮಿಸುತ್ತಿರುವ ಸಂಸತ್ ಭವನಕ್ಕೆ “ಅನುಭವ ಮಂಟಪ” ಎಂದು ನಾಮಕರಣ ಮಾಡಬೇಕು ಎಂದು ಬೈಲೂರು ನಿಷ್ಕಲ ಮಂಟಪದ …

ಅಕ್ಟೋಬರ್ 3ರಂದು “ಶಿವಬಸವ ಕಾರುಣ್ಯ” ದ ಗುರು ಪ್ರವೇಶ

ಲಿಂಗಾಯತ ಕ್ರಾಂತಿ: ಉತ್ತರಕನ್ನಡ ಜಿಲ್ಲೆ ಹಳಿಯಾಳದ ಅಂಗಡಿ ಕುಟುಂಬದ ನೂತನ ಮನೆ “ಶಿವಬಸವ ಗುರುಕಾರುಣ್ಯ” ದ ಗುರು ಪ್ರವೇಶವು ಅಕ್ಟೋಬರ್ …

ಅಕ್ಕನ ಸಮರ್ಪಣಾ ಭಾವ

ಭಾರತೀಯ ಭಕ್ತಿ ಸಾಹಿತ್ಯದ ಚರಿತ್ರೆಯಲ್ಲಿ ಅಕ್ಕಮಹಾದೇವಿ ಒಬ್ಬ ವಿಶಿಷ್ಟ ಸಾಧಕಿ, ಯೋಗಿಣಿಯಾಗಿ ಕಂಡುಬರುತ್ತಾಳೆ. ಆಕೆಯ ಪ್ರೀತಿ ಪ್ರೇಮ ವಿನೂತನ ವಿಸ್ಮಯದ …

ಪ್ರಭು ಚನ್ನಬಸವ ಸ್ವಾಮೀಜಿ ವಿರಚಿತ ಮಹಾತ್ಮರ ಚರಿತಾಮೃತ ಗ್ರಂಥ ಲೋಕಾರ್ಪಣೆ

ಬೆಂಗಳೂರು: ಬೆಳಗಾವಿ ಜಿಲ್ಲೆಯ ಅಥಣಿಯ ಶ್ರೀ ಮೋಟಗಿ ಮಠ ಬೆಂಗಳೂರಿನಲ್ಲಿ ಆಯೋಜಿಸಿದ್ದ ಶ್ರೀ ಪ್ರಭು ಚನ್ನಬಸವ ಸ್ವಾಮೀಜಿ (ಅಥಣೀಶ) ವಿರಚಿತ …

ರಂಭಾಪುರಿ ಶ್ರೀಗಳು ಢೋಂಗಿತನ ಬಿಡಲಿ

ತಮ್ಮ ಸ್ವಾರ್ಥಕ್ಕೆ ಪಂಚಪೀಠಗಳನ್ನು ಒಡೆದು ಆಳುವ ನೀತಿ ಅನುಸರಿಸುತ್ತಿರುವ ಬಾಳೆಹೊನ್ನೂರು ಶ್ರೀ ರಂಭಾಪುರಿ ಜಗದ್ಗುರು ವೀರಸೋಮೇಶ್ವರ ಶಿವಾಚಾರ್ಯ ಭಗವತ್ಪಾದರು ಬೇರೆಯವರನ್ನು …

“ವೇದಕ್ಕೆ ಒರೆಯ ಕಟ್ಟುವೆ” – ಕೃತಿ ಲೋಕಾರ್ಪಣೆ

ಲಿಂಗಾಯತರಿಗೆ ಲಿಂಗಾಯತ ಧರ್ಮದ ಇತಿಹಾಸವೇ ಗೊತ್ತಿಲ್ಲದಿರುವುದು ದೊಡ್ಡ ದುರಂತ ಲಿಂಗಾಯತ ಧರ್ಮೀಯರು ವೈದಿಕ ಆಚರಣೆಯ ಸೆಳೆತಕ್ಕೆ ಸಿಲುಕಿಕೊಂಡಿದ್ದಾರೆ. ಡಾ.ಜೆ.ಎಸ್.ಪಾಟೀಲರ ” …

“ಲಿಂಗಾನಂದರ ವಚನಧರ್ಮ ಚಳುವಳಿಗೆ” ಡಾಕ್ಟರೇಟ್ ಪದವಿ

ಲಿಂಗಾಯತ ಕ್ರಾಂತಿ : ಸುಮಾರು 50 ವರ್ಷಗಳಾಚೆಯ ನೈಜ ಬಸವತತ್ವ ಪ್ರಸಾರ, ಶರಣಧರ್ಮದ ವೈಚಾರಿಕ ಚಿಂತನೆಗಳನ್ನು ಹಳ್ಳಿಗೆ ಏಕರಾತ್ರಿ ಪಟ್ಟಣಕ್ಕೆ …

“ಅವಕಾಶ ವಂಚಿತರಿಗೆ ಬೆಳಕಾದ ಸಜ್ಜನ ರಾಜಕಾರಣಿ ಸಿದ್ದಪ್ಪ ಕಂಬಳಿಯವರು”

ರಾಜಕೀಯ ಇತಿಹಾಸದಲ್ಲಿ ಮೈಲಿಗಲ್ಲು ಸಾಧಿಸಿದ ಕರ್ನಾಟಕ ಮಹಾಪುರುಷ ಶರಣ ಸಿದ್ದಪ್ಪ ಕಂಬಳಿಯವರು. ಶಾಲಾ ಕಾಲೇಜುಗಳ ತೊರೆದು ಕೋರ್ಟ್ ಕಛೇರಿ ಬಹಿಷ್ಕಾರ …

ಸೆಪ್ಟೆಂಬರ್ 25ರಂದು ಮಹಾತ್ಮರ ಚರಿತಾಮೃತ ಗ್ರಂಥ ಬಿಡುಗಡೆ: ಪೂಜ್ಯ ನಿಜಗುಣಾನಂದ ಶ್ರೀಗಳು

ಬೆಳಗಾವಿ: ಭಾರತ ಬಹುತ್ವದ ಭಾರತಕ್ಕೆ ಧಾರ್ಮಿಕ ಗ್ರಂಥವಾಗಿ ಮಹಾತ್ಮರ ಚರಿತಾಮೃತ ಅಥಣಿಯ ಪ್ರಭು ಚನ್ನಬಸವ ಸ್ವಾಮೀಜಿ ಗ್ರಂಥ ರಚಿಸಿದ್ದಾರೆ ಎಂದು …

“ನೊಬೆಲ್” ಎಂಬ ಮನುಕುಲದ ದ್ರುವತಾರೆ…🌟

ನೂರು ವರ್ಷಗಳ ಹಿಂದೆ ಒಬ್ಬ ಉದ್ಯಮಿ ಬೆಳಗಿನ ಕಾಫ಼ಿ ಸೇವಿಸುತ್ತ ಅಂದಿನ ದಿನಪತ್ರಿಕೆಯೊಂದನ್ನ ಕೈಗೆತ್ತಿಕೊಂಡು ಓದಲು ಪ್ರಾರಂಭಿಸುತ್ತಾನೆ. ಅದರಲ್ಲಿನ ಒಂದು …

Leave a Reply

Your email address will not be published.