Home / featured / ಬಸವಣ್ಣನವರು ಉಪನಯನವನ್ನು ತಿರಸ್ಕರಿಸಿದ್ದರು: ಡಾ. ವೀರಣ್ಣ ರಾಜೂರ

ಬಸವಣ್ಣನವರು ಉಪನಯನವನ್ನು ತಿರಸ್ಕರಿಸಿದ್ದರು: ಡಾ. ವೀರಣ್ಣ ರಾಜೂರ

ನಾಡಿನ ಹಿರಿಯ ವಿದ್ವಾಂಸರಾದ ವೀರಣ್ಣ ರಾಜೂರ ಅವರು ಪಠ್ಯ ಪುಸ್ತಕದಲ್ಲಿರುವ ಬಸವಣ್ಣನ ಪರಿಚಯದ ಮಾತುಗಳ ಬಗ್ಗೆ ತಮ್ಮ ಅಭಿಪ್ರಾಯವನ್ನು ತಿಳಿಸಿದ್ದಾರೆ.

ಡಾ. ರಾಜೂರು ಅವರು ಸಮಗ್ರ ವಚನ ಸಂಪುಟಗಳನ್ನ ಸಿದ್ಧಪಡಿಸಿ ಪ್ರಕಟಿಸುವಲ್ಲಿ ಮಹತ್ವದ ಪಾತ್ರವಹಿಸಿದ್ದಾರೆ.

೨೦೨೨ ರ ೯ನೆಯ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಅಳವಡಿಸಿದ ಬಸವಣ್ಣನವರನ್ನು ಕುರಿತ ಒಂದು ಪುಟದ ಕಿರುಬರಹ ದಲ್ಲಿ ಅವರ ಚರಿತ್ರೆ ಮತ್ತು ಚಾರಿತ್ರ್ಯಗಳಿಗೆ ಧಕ್ಕೆ ತರುವ (ಅಪಚಾರ ಮಾಡುವ) ಈ ಕೆಳಗಿನ ದೋಷಗಳು ಸೇರಿಕೊಂಡಿವೆ.

೧. ಬಸವಣ್ಣನವರು ಉಪನಯನವಾದ ನಂತರ ಕೂಡಲಸಂಗಮಕ್ಕೆ ನಡೆದರು.

೨. ಅವರು ಶೈವಗುರುಗಳ ಸಾನ್ನಿಧ್ಯದಲ್ಲಿ ಲಿಂಗದೀಕ್ಷೆ ಪಡೆದರು.

೩. ಅವರು ವೀರಶೈವ ಮತವನ್ನು ಅಭಿವೃದ್ಧಿಪಡಿಸಿದರು.

೪. ಅವರು ತಮ್ಮ ಧಾರ್ಮಿಕ, ಸಾಮಾಜಿಕ ಚಳವಳಿಯನ್ನು ಮಂಗಳವೇಡೆಯಲ್ಲಿ ಆರಂಭಿಸಿದರು.

೫. ಬಸವಣ್ಣನವರು ಕಾಯಕವೇ ಕೈಲಾಸ ವೆಂದು ಸಾರಿದರು.

೬. ಬಸವಣ್ಣ ಬೋಧಿಸಿದ ತತ್ವವನ್ನು ಶಕ್ತಿವಿಶಿಷ್ಟಾದ್ವೈತ ಎನ್ನಲಾಗುತ್ತದೆ.

೭.ವಚನಕಾರರು-ವೀರಶೈವ ಮತವನ್ನು ಸುಧಾರಿಸಿದರು.

ಸರಿಯಾದ ಸಂಗತಿಗಳು

೧. ಬಸವಣ್ಣನವರು ಉಪನಯನವನ್ನು ತಿರಸ್ಕರಿಸಿ ಕೂಡಲಸಂಗಮಕ್ಕೆ ಹೋದರು.

೨. ಅವರು ಯಾವುದೇ ಶೈವಗುರುಗಳಿಂದ ಲಿಂಗದೀಕ್ಷೆ ಪಡೆಯಲಿಲ್ಲ; ಅವರಿಗೆ ಅರಿವೇ ಗುರುವಾಗಿದ್ದಿತು.

೩.ಅವರು ವೀರಶೈವ ಮತವನ್ನು ಅಭಿವೃದ್ಧಿಪಡಿಸಲಿಲ್ಲ; ಲಿಂಗಾಯತ ಧರ್ಮವನ್ನು ಸ್ಥಾಪಿಸಿದರು.

೪. ಅವರು ತಮ್ಮ ಧಾರ್ಮಿಕ, ಸಾಮಾಜಿಕ ಚಳವಳಿಯನ್ನು ಮಂಗಳವೇಡೆಯಲ್ಲಿ ಆರಂಭಿಸಲಿಲ್ಲ; ಕಲ್ಯಾಣದಲ್ಲಿ ಆರಂಭಿಸಿದರು.

೫. ಕಾಯಕ ತತ್ವವನ್ನು ರೂಪಿಸಿದವರು ಬಸವಣ್ಣನವರು; ‘ಕಾಯಕವೇ ಕೈಲಾಸ’ ಎಂದು ಹೇಳಿದವರು ಆಯ್ದಕ್ಕಿ ಮಾರಯ್ಯ ನವರು. ಬಸವಣ್ಣನವರು ಹೇಳಿದ್ದು ‘ಕಾಯವೇ ಕೈಲಾಸ’ ಎಂದು.

೬. ಬಸವಣ್ಣನವರು ಬೋಧಿಸಿದ್ದು ಶಕ್ತಿ ವಿಶಿಷ್ಟಾದ್ವೈತ ತತ್ತ್ವ ಅಲ್ಲ;
ಷಟ್ಸ್ಥಲತತ್ವ.

೭. ವಚನಕಾರರು ವೀರಶೈವ ಮತವನ್ನು ಸುಧಾರಿಸಲಿಲ್ಲ; ಲಿಂಗಾಯತ ಧರ್ಮವನ್ನು ಅನುಸರಿಸಿದರು.

  • ಇಷ್ಟಲಿಂಗವನ್ನು ರೂಪಿಸಿದವರು ಬಸವಣ್ಣನವರು. ಇಷ್ಟಲಿಂಗದೀಕ್ಷೆ ಬಸವಣ್ಣನವರ ಕಾಲದಿಂದ ಜಾರಿಗೆ ಬಂದಿತು.
  • ‘ವೀರಶೈವ’ ಎನ್ನುವುದು ೧೪ನೆಯ ಶತಮಾನದಿಂದ ಈಚೆಗೆ ಬಳಕೆಗೆ ಬಂದ ಪದ.

ಈ ಸತ್ಯವನ್ನರಿಯದ ಪಠ್ಯ ರಚನಾಕಾರರು ಬಸವಣ್ಣನವರ ಆಶಯಕ್ಕೆ ಅಪಚಾರವೆಸಗಿದ್ದಾರೆ. ಇದರಿಂದ ವಿದ್ಯಾರ್ಥಿಗಳ ಮನದಲ್ಲಿ ತಪ್ಪು ಅಭಿಪ್ರಾಯಗಳ ಬೀಜಬಿತ್ತಿದಂತಾಗುತ್ತದೆ.

  • ತಪ್ಪುಗಳು ಉದ್ದೇಶಿತ, ಅನುದ್ದೇಶಿತ ಮತ್ತು ದುರುದ್ದೇಶಿತ ಎಂದು ಮೂರು ವಿಧ: ಒಳ್ಳೆಯದಕ್ಕಾಗಿ ಮಾಡಿದ್ದು ಉದ್ದೇಶಿತ; ಗೊತ್ತಿಲ್ಲದೆ ಮಾಡಿದ್ದು ಅನುದ್ದೇಶಿತ; ಕೆಟ್ಟದೃಷ್ಟಿಯಿಂದ ಮಾಡಿದ್ದು ದುರುದ್ದೇಶಿತ. ಈ ತಪ್ಪುಗಳು ಮೂರನೆಯ ವರ್ಗಕ್ಕೆ ಸೇರಿದುವಾಗಿವೆ.

ಕಾರಣ ಕೂಡಲೇ ಈ ದೋಷಪೂರಿತ ಪಠ್ಯವನ್ನು ಸ್ಥಗಿತಗೊಳಿಸಿ, ತಜ್ಞರಿಂದ ಸೂಕ್ತ ತಿದ್ದುಪಡಿ ಮಾಡಿಸಿ ದೋಷಮುಕ್ತಗೊಳಿಸಿ ವಿದ್ಯಾರ್ಥಿಗಳ ಕೈಗೆ ಕೊಡುವಂತಾಗಬೇಕೆಂದು ಈ ಮೂಲಕ ಆಗ್ರಹಿಸುತ್ತೇನೆ.

ಡಾ. ವೀರಣ್ಣ ರಾಜೂರ್

ಕೊನೆಯದಾಗಿ, 2, 3 ನೆ ತರಗತಿಯ ಕನ್ನಡದ ವಿದ್ಯಾರ್ಥಿಗಳು ಸರಳವಾಗಿ ಓದಿ ಆರ್ತೈಸಿಕೊಳ್ಳುವಂತಹ ಶುದ್ಧ ಕನ್ನಡಲ್ಲಿಯೇ ಇರುವ ಬಸವಣ್ಣನವರ ವಚನವನ್ನ ಅಪಬ್ರಾಂಶ ಮಾಡಿ ಈ ಕೆಳಗಿನಂತೆ ಪ್ರಕಟಿಸುವ ಉದ್ದೇಶವೇನು?..

ಇಡೀ ಜಗತ್ತಿನಲ್ಲೆ ಮೊದಲವಾದ 12ನೆ ಶತಮಾನದ ಸಮಾಜೋ-ಧಾರ್ಮಿಕ-ಆರ್ಥಿಕ ಸರ್ವಾಂಗೀಣ ಅಭಿವೃದ್ಧಿಯ ಚಳವಳಿಯ ಹರಿಕಾರ ಬಸವಣ್ಣನ ಕುರಿತು, ಜಗತ್ತಿಗೆ ಅತಿದೊಡ್ಡ ಅನುಭಾವ ಸಾಹಿತ್ಯದ ಕೊಡುಗೆ ಕೊಟ್ಟು ಕನ್ನಡ ಭಾಷೆಗೆ ತುರಾಯಿ ಮುಡಿಸಿದ ಶರಣರ ಕುರಿತು ಕೇವಲ 2 ಪ್ರಶ್ನೆಗಳು ಆದರೆ ಮಾದ್ವ, ರಾಮಾನುಜ, ಶಂಕರರ ಕುರಿತು 10 ಪ್ರಶ್ನೆಗಳು, ಇದು ಏನನ್ನು ಸೂಚಿಸುತ್ತದೆ?..

ಲಿಂಗಾಯತ, ಒಕ್ಕಲಿಗ ಮತ್ತು ಇನ್ನಿತರ ಹಿಂದುಳಿದ ಸಮುದಾಯಗಳ ಬೆಂಬಲದಿಂದ ಅಧಿಕಾರ ಹಿಡಿದವರು ಆ ಸಮುದಾಯಗಳ ವೃಕ್ಷದ ಮೂಲ ಬೇರುಗಳಿಗೆ ಕೊಡಲಿ ಪೆಟ್ಟು ಕೊಡುತ್ತಿರುವುದು ವಿಪರ್ಯಾಸ, ಪ್ರಜ್ಞಾವಂತ ಸಮಾಜ ಇದನ್ನ ಸಹಿಸದಿರಲಿ ಎಂದು ಆಶಿಸುವೆ….

About nagaraj

Check Also

ಕಿತ್ತೂರು ಚೆನ್ನಮ್ಮನ ಜ್ಯೋತಿಯಾತ್ರೆಯ ವೇಳಾಪಟ್ಟಿ

ಚನ್ನಮ್ಮನ ಕಿತ್ತೂರು : ಕಿತ್ತೂರು ಉತ್ಸವದ ಅಂಗವಾಗಿ ರಾಣಿ ಚನ್ನಮ್ಮ ವಿಜಯ ಜ್ಯೋತಿ‌ ಯಾತ್ರೆಯು ಅಕ್ಟೋಬರ್ 18 ರಿಂದ ಅಕ್ಟೋಬರ್ …

ವೈದ್ದಿಕರ ಕುತಂತ್ರದಿಂದ ಲಿಂಗಾಯತ ಧರ್ಮದ ಹೋರಾಟಕ್ಕೆ ಹಿನ್ನಡೆ

ಲಿಂಗಾಯತ ಕ್ರಾಂತಿ: ಲಿಂಗಾಯತ ಧರ್ಮ ಉದಯವಾಗಿದ್ದು 12 ಶತಮಾನದ ಆರಂಭದಲ್ಲಿ ಎಂಬುವುದು ಜಗತ್ತಿನ ಶ್ರೇಷ್ಠ ತತ್ವಜ್ಞಾನಿ, ಸಮಾನತೆಯ ಪ್ರತಿಪಾಧಕ, ಲಿಂಗಬೇದವನ್ನು …

ಡಾ. ಎಂ.ಬಿ ಪಾಟೀಲ ಕರ್ನಾಟಕದ ಮುಂದಿನ ಮುಖ್ಯಮಂತ್ರಿಯಾಗಲಿ

ನೇಗಿನಹಾಳ : ನಾಡಿನ ನೆಲ, ಜಲ, ಶಿಕ್ಷಣ ಹಾಗೂ ಜನಸಾಮಾನ್ಯರ ಜೀವನೋಪಾಯಕ್ಕಾಗಿ ಹತ್ತಾರು ಯೋಜನೆಗಳನ್ನು ಅನುಷ್ಠಾನಗೊಳಿಸಿ ವಿಜಯಪುರ ಜಿಲ್ಲೆಯ ಬೆಳಕಾಗಿರುವ …

ಕರ್ನಾಟಕದ ಭವಿಷ್ಯದ ಮುಖ್ಯಮಂತ್ರಿ ಶ್ರೀ ಡಾ. ಎಂ.ಬಿ ಪಾಟೀಲರ ಜನ್ಮದಿನ

ಲಿಂಗಾಯತ ಕ್ರಾಂತಿ: ಲಿಂಗಾಯತರ ಪ್ರಶ್ನಾತೀತ ನಾಯಕ, ಕರ್ನಾಟಕದ ಭವಿಷ್ಯದ ಮುಖ್ಯಮಂತ್ರಿಗಳು, ನೇರ ನಡೆ-ನುಡಿಯ ಲಿಂಗಾಯತ ಕ್ರಾಂತಿ ಪತ್ರಿಕೆಯ ಮಾರ್ಗದರ್ಶಕರಾದ ಸನ್ಮಾನ್ಯಶ್ರೀ …

ಹಸಿರುಕ್ರಾಂತಿ ಪತ್ರಿಕೆಯ ಸಂಸ್ಥಾಪಕ ಶ್ರೀ ಕಲ್ಯಾಣರಾವ್ ಜಿ ಮುಚಳಂಬಿ ಲಿಂಗೈಕ್ಯ

ಬೆಳಗಾವಿ: ರೈತ ಚಳವಳಿಗಳಿಗಳ ಮುಂಚೂಣಿ ನಾಯಕ, ಹಸಿರು ಕ್ರಾಂತಿ ಪತ್ರಿಕೆಯ ಸಂಸ್ಥಾಪಕ ಸಂಪಾದಕ ಕಲ್ಯಾಣರಾವ್ ಗುರಬಸಪ್ಪ ಮುಚಳಂಬಿಯವರು ಅವರು ಬೆಳಗಾವಿ …

ನೂತನ ಸಂಸತ್ ಭವನಕ್ಕೆ ಅನುಭವ ಮಂಟಪ ಎಂದು ಹೆಸರಿಡಲು ನಿಜಗುಣಾನಂದ ಸ್ವಾಮೀಜಿ ಒತ್ತಾಯ

ಬೈಲೂರು: ದೆಹಲಿಯಲ್ಲಿ ನೂತನವಾಗಿ ನಿರ್ಮಿಸುತ್ತಿರುವ ಸಂಸತ್ ಭವನಕ್ಕೆ “ಅನುಭವ ಮಂಟಪ” ಎಂದು ನಾಮಕರಣ ಮಾಡಬೇಕು ಎಂದು ಬೈಲೂರು ನಿಷ್ಕಲ ಮಂಟಪದ …

ಅಕ್ಟೋಬರ್ 3ರಂದು “ಶಿವಬಸವ ಕಾರುಣ್ಯ” ದ ಗುರು ಪ್ರವೇಶ

ಲಿಂಗಾಯತ ಕ್ರಾಂತಿ: ಉತ್ತರಕನ್ನಡ ಜಿಲ್ಲೆ ಹಳಿಯಾಳದ ಅಂಗಡಿ ಕುಟುಂಬದ ನೂತನ ಮನೆ “ಶಿವಬಸವ ಗುರುಕಾರುಣ್ಯ” ದ ಗುರು ಪ್ರವೇಶವು ಅಕ್ಟೋಬರ್ …

ಅಕ್ಕನ ಸಮರ್ಪಣಾ ಭಾವ

ಭಾರತೀಯ ಭಕ್ತಿ ಸಾಹಿತ್ಯದ ಚರಿತ್ರೆಯಲ್ಲಿ ಅಕ್ಕಮಹಾದೇವಿ ಒಬ್ಬ ವಿಶಿಷ್ಟ ಸಾಧಕಿ, ಯೋಗಿಣಿಯಾಗಿ ಕಂಡುಬರುತ್ತಾಳೆ. ಆಕೆಯ ಪ್ರೀತಿ ಪ್ರೇಮ ವಿನೂತನ ವಿಸ್ಮಯದ …

ಪ್ರಭು ಚನ್ನಬಸವ ಸ್ವಾಮೀಜಿ ವಿರಚಿತ ಮಹಾತ್ಮರ ಚರಿತಾಮೃತ ಗ್ರಂಥ ಲೋಕಾರ್ಪಣೆ

ಬೆಂಗಳೂರು: ಬೆಳಗಾವಿ ಜಿಲ್ಲೆಯ ಅಥಣಿಯ ಶ್ರೀ ಮೋಟಗಿ ಮಠ ಬೆಂಗಳೂರಿನಲ್ಲಿ ಆಯೋಜಿಸಿದ್ದ ಶ್ರೀ ಪ್ರಭು ಚನ್ನಬಸವ ಸ್ವಾಮೀಜಿ (ಅಥಣೀಶ) ವಿರಚಿತ …

ರಂಭಾಪುರಿ ಶ್ರೀಗಳು ಢೋಂಗಿತನ ಬಿಡಲಿ

ತಮ್ಮ ಸ್ವಾರ್ಥಕ್ಕೆ ಪಂಚಪೀಠಗಳನ್ನು ಒಡೆದು ಆಳುವ ನೀತಿ ಅನುಸರಿಸುತ್ತಿರುವ ಬಾಳೆಹೊನ್ನೂರು ಶ್ರೀ ರಂಭಾಪುರಿ ಜಗದ್ಗುರು ವೀರಸೋಮೇಶ್ವರ ಶಿವಾಚಾರ್ಯ ಭಗವತ್ಪಾದರು ಬೇರೆಯವರನ್ನು …

“ವೇದಕ್ಕೆ ಒರೆಯ ಕಟ್ಟುವೆ” – ಕೃತಿ ಲೋಕಾರ್ಪಣೆ

ಲಿಂಗಾಯತರಿಗೆ ಲಿಂಗಾಯತ ಧರ್ಮದ ಇತಿಹಾಸವೇ ಗೊತ್ತಿಲ್ಲದಿರುವುದು ದೊಡ್ಡ ದುರಂತ ಲಿಂಗಾಯತ ಧರ್ಮೀಯರು ವೈದಿಕ ಆಚರಣೆಯ ಸೆಳೆತಕ್ಕೆ ಸಿಲುಕಿಕೊಂಡಿದ್ದಾರೆ. ಡಾ.ಜೆ.ಎಸ್.ಪಾಟೀಲರ ” …

“ಲಿಂಗಾನಂದರ ವಚನಧರ್ಮ ಚಳುವಳಿಗೆ” ಡಾಕ್ಟರೇಟ್ ಪದವಿ

ಲಿಂಗಾಯತ ಕ್ರಾಂತಿ : ಸುಮಾರು 50 ವರ್ಷಗಳಾಚೆಯ ನೈಜ ಬಸವತತ್ವ ಪ್ರಸಾರ, ಶರಣಧರ್ಮದ ವೈಚಾರಿಕ ಚಿಂತನೆಗಳನ್ನು ಹಳ್ಳಿಗೆ ಏಕರಾತ್ರಿ ಪಟ್ಟಣಕ್ಕೆ …

“ಅವಕಾಶ ವಂಚಿತರಿಗೆ ಬೆಳಕಾದ ಸಜ್ಜನ ರಾಜಕಾರಣಿ ಸಿದ್ದಪ್ಪ ಕಂಬಳಿಯವರು”

ರಾಜಕೀಯ ಇತಿಹಾಸದಲ್ಲಿ ಮೈಲಿಗಲ್ಲು ಸಾಧಿಸಿದ ಕರ್ನಾಟಕ ಮಹಾಪುರುಷ ಶರಣ ಸಿದ್ದಪ್ಪ ಕಂಬಳಿಯವರು. ಶಾಲಾ ಕಾಲೇಜುಗಳ ತೊರೆದು ಕೋರ್ಟ್ ಕಛೇರಿ ಬಹಿಷ್ಕಾರ …

ಸೆಪ್ಟೆಂಬರ್ 25ರಂದು ಮಹಾತ್ಮರ ಚರಿತಾಮೃತ ಗ್ರಂಥ ಬಿಡುಗಡೆ: ಪೂಜ್ಯ ನಿಜಗುಣಾನಂದ ಶ್ರೀಗಳು

ಬೆಳಗಾವಿ: ಭಾರತ ಬಹುತ್ವದ ಭಾರತಕ್ಕೆ ಧಾರ್ಮಿಕ ಗ್ರಂಥವಾಗಿ ಮಹಾತ್ಮರ ಚರಿತಾಮೃತ ಅಥಣಿಯ ಪ್ರಭು ಚನ್ನಬಸವ ಸ್ವಾಮೀಜಿ ಗ್ರಂಥ ರಚಿಸಿದ್ದಾರೆ ಎಂದು …

“ನೊಬೆಲ್” ಎಂಬ ಮನುಕುಲದ ದ್ರುವತಾರೆ…🌟

ನೂರು ವರ್ಷಗಳ ಹಿಂದೆ ಒಬ್ಬ ಉದ್ಯಮಿ ಬೆಳಗಿನ ಕಾಫ಼ಿ ಸೇವಿಸುತ್ತ ಅಂದಿನ ದಿನಪತ್ರಿಕೆಯೊಂದನ್ನ ಕೈಗೆತ್ತಿಕೊಂಡು ಓದಲು ಪ್ರಾರಂಭಿಸುತ್ತಾನೆ. ಅದರಲ್ಲಿನ ಒಂದು …

Leave a Reply

Your email address will not be published.